ಬ್ರ್ಯಾಂಡ್ ಬೆಂಗಳೂರು ಲೋಗೋ ಬಿಡುಗಡೆ ಮಾಡಿದ ಬಿಬಿಎಂಪಿ

Date:

ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿ ಹಾಗೂ ನಗರವನ್ನು ಜಾಗತಿಕ ಆಕರ್ಷಣೆಯ ಕೇಂದ್ರವನ್ನಾಗಿ ಮಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಬ್ರ್ಯಾಂಡ್ ಬೆಂಗಳೂರು ಅಭಿಯಾನ’ ಹಮ್ಮಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶನಿವಾರ ‘ಬ್ರ್ಯಾಂಡ್ ಬೆಂಗಳೂರು’ ಲೋಗೋವನ್ನು ಬಿಡುಗಡೆ ಮಾಡಿದೆ.

ಎಂಟು ನಾನಾ ಆಯಾಮಗಳಲ್ಲಿ ಬೆಂಗಳೂರನ್ನು ಜಾಗತಿಕ ಮನ್ನಣೆಯ ಕೇಂದ್ರವನ್ನಾಗಿಸುವ ಉದ್ದೇಶದಿಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ‘ಬ್ರ್ಯಾಂಡ್ ಬೆಂಗಳೂರು ಸಮ್ಮೇಳನ’ ವನ್ನು ಅ.9 ರಂದು (ಸೋಮವಾರ) ಬೆಳಿಗ್ಗೆ 10 ಗಂಟೆಗೆ ಜ್ಞಾನ ಜ್ಯೋತಿ ಸಭಾಂಗಣ (ಸೆಂಟ್ರಲ್ ಕಾಲೇಜು ಆವರಣ)ದಲ್ಲಿ ಏರ್ಪಡಿಸಲಾಗಿದೆ.

ಪ್ರವಾಸೋದ್ಯಮ, ಆರೋಗ್ಯ, ಹೂಡಿಕೆ, ಶಿಕ್ಷಣ ಮತ್ತು ಸಂಶೋಧನೆ, ಉದ್ಯಮ ಶೀಲತೆ, ಮೂಲಭೂತ ಸೌಕರ್ಯ, ನವನವೀನ ಆವಿಷ್ಕಾರಗಳು, ಉದ್ಯೋಗ ಸೃಷ್ಠಿ, ಆರ್ಥಿಕ ಕ್ರೋಢಿಕರಣ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಈ ಸಮ್ಮೇಳನಕ್ಕೆ ಆಗಮಿಸುವ ಗಣ್ಯರಿಂದ ಸಲಹೆ ನಿರೀಕ್ಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ರ್ಯಾಂಡ್ ಬೆಂಗಳೂರು ಸಮ್ಮೇಳನದಲ್ಲಿ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್/ರಾಜ್ಯಸಭಾ ಸದಸ್ಯರು, ಸರ್ಕಾರದ ನಾನಾ ಇಲಾಖೆಯ ಹಿರಿಯ ಅಧಿಕಾರಿಗಳು, ನಿವೃತ್ತ ಹಿರಿಯ ಅಧಿಕಾರಿಗಳು, 8 ವಿಚಾರಗಳ ತಜ್ಞರು, ಗಣ್ಯ ವ್ಯಕ್ತಿಗಳು ಭಾಗವಹಿಸಿ, ಹೊಸ ಬೆಂಗಳೂರಿನ ನೀಲನಕ್ಷೆಯನ್ನು ತಯಾರಿಸಲು ಚಿಂತನೆ ನಡೆಸುತ್ತಾರೆ ಎನ್ನಲಾಗಿದೆ.

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯು ಪರಿಣಾಮಕಾರಿ ನಗರ ಯೋಜನೆ, ಸುಸ್ಥಿರ ಒಳಚರಂಡಿ ವ್ಯವಸ್ಥೆಗಳು, ದಕ್ಷ ಸಾರಿಗೆ ವ್ಯವಸ್ಥೆ ಮತ್ತು ಸ್ಮಾರ್ಟ್‌ ಟ್ರಾಫಿಕ್ ನಿರ್ವಹಣೆ, ಪಾದಚಾರಿ ಸ್ನೇಹಿ ರಸ್ತೆಗಳು, ನಾಗರಿಕರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಆದ್ಯತೆ ನೀಡಲಾಗುತ್ತದೆ. ಮಾಲಿನ್ಯ ರಹಿತ ಮತ್ತು ಹಸಿರು ನಗರವನ್ನಾಗಿ ಮಾಡಲು ಉತ್ತಮ ಯೋಜಿತ ಪಾದಚಾರಿ ಮಾರ್ಗಗಳು, ಮೀಸಲಾದ ಸೈಕ್ಲಿಂಗ್ ಮಾರ್ಗಗಳು, ಹಸಿರು ಸ್ಥಳಗಳು, ಸಕ್ರಿಯ ಸಾರಿಗೆಯನ್ನು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ರಚಿಸಲು ಬ್ಯಾಂಡ್ ಬೆಂಗಳೂರು ಬದ್ಧವಾಗಿದೆ.

ಬ್ರಾಂಡ್ ಬೆಂಗಳೂರು ಪರಿಕಲ್ಪನೆಯ ಅಡಿಯಲ್ಲಿ ಎಂಟು ವಿಷಯಗಳು

  1. ಸಂಚಾರಯುಕ್ತ ಬೆಂಗಳೂರು
  2. ಹಸಿರು ಬೆಂಗಳೂರು
  3. ಸ್ವಚ್ಛ ಬೆಂಗಳೂರು
  4. ಜನಹಿತ ಬೆಂಗಳೂರು
  5. ಆರೋಗ್ಯಕರ ಬೆಂಗಳೂರು
  6. ಟೆಕ್ ಬೆಂಗಳೂರು
  7. ಜಲಸುರಕ್ಷಾ ಬೆಂಗಳೂರು
  8. ಶೈಕ್ಷಣಿಕ ಬೆಂಗಳೂರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...