ಲಂಚ ಪ್ರಕರಣ | ಲೋಕಾಯುಕ್ತ ಸಿಬ್ಬಂದಿ ಮೇಲೆ ಕಾರು ನುಗ್ಗಿಸಿದ ಅಧಿಕಾರಿ ಬಂಧನ

Date:

ಲಂಚ ಪಡೆಯುತ್ತಿದ್ದಾಗ ಬಂಧಿಸಲು ಮುಂದಾದ ಲೋಕಾಯುಕ್ತ ಪೊಲೀಸರು ಮತ್ತು ಪಂಚರ ಮೇಲೆ ವಾಹನ ಹತ್ತಿಸಿ ಭ್ರಷ್ಟ ಅಧಿಕಾರಿಯೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆತನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಆಹಾರ ನಿರೀಕ್ಷಕ ಮಹಾಂತೇಗೌಡ ಬಿ ಕಡಬಾಳು ಎಂಬ ಅಧಿಕಾರಿ ಉದ್ದಿಮೆ ಪರವಾನಗಿ ಪರಿಶೀಲನೆ ನಡೆಸಲು ಒಂದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಅಲ್ಲದೆ 12,000 ರೂ. ಮುಂಗಡ ಪಡೆದಿದ್ದರು. ಈ ಬಗ್ಗೆ ಉದ್ದಿಮೆದಾರ ರಂಗಧಾಮಯ್ಯ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು, ಸಾಕ್ಷ ಸಮೇತ (ರೆಡ್‌ಹ್ಯಾಂಡ್) ಮಹಾಂತೇಗೌಡನನ್ನು ಹಿಡಿಯಲು ಯೋಜನೆ ರೂಪಿಸಿದ್ದರು. ರಂಗಧಾಮಯ್ಯ ಅವರನ್ನು ಮುಂದೆ ಕಳುಹಿಸಿ, ಲೋಕಾಯುಕ್ತ ಹಿಂದಿನಿಂದ ಪೊಲೀಸರು ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ರಾತ್ರಿ ರಂಗಧಾಮಯ್ಯ ಅವರಿಂದ ಮಹಾಂತೇಗೌಡ 43,000 ರೂ. ಲಂಚ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ಸ್ಥಳಕ್ಕೆ ಧಾವಿಸಿ, ಅಧಿಕಾರಿಯನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಅಧಿಕಾರಿ ಕಾರು ಏರಿ ಪರಾರಿಯಾಗಲು ಯತ್ನಿಸಿದ್ದು, ಲೋಕಾಯುಕ್ತ ಪೊಲೀಸರತ್ತ ವೇಗವಾಗಿ ವಾಹನ ಚಾಲನೆ ಮಾಡಿದ್ದಾರೆ. 15 ಕಿ.ಮೀ.ವರೆಗೂ ಆರೋಪಿಯನ್ನು ಬೆನ್ನಟ್ಟಿದ ಪೊಲೀಸರು, ನೆಲಮಂಗಲ‌ ಸೊಂಡೆಕೊಪ್ಪ‌ ರಸ್ತೆಯಲ್ಲಿ ಆರೋಪಿಯನ್ನು ಸುತ್ತುವರಿದು, ಬಂಧಿಸಿದ್ದಾರೆ.

”ಮಹಾಂತೇಗೌಡ ಅವರನ್ನು ಲಂಚ ಪಡೆಯುತ್ತಿದ್ದ ಹಣದ ಸಮೇತ ಬಂಧಿಸಲಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ” ಎಂದು ಲೋಕಾಯುಕ್ತದ ಬೆಂಗಳೂರು ನಗರ ಎಸ್ ಪಿ ಕೆ.ವಿ. ಅಶೋಕ್ ತಿಳಿಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...