ಹುಬ್ಬಳಿ | ಪಕ್ಷಾತೀತ, ಸತ್ಯ ಸುದ್ದಿ ಪ್ರಸಾರ ಮಾಡಿ: ಸಚಿವ ಸಂತೋಷ್ ಲಾಡ್

Date:

ಪತ್ರಕರ್ತರು ಯಾವುದೇ ಪಕ್ಷದ ಪರ ಒಲವು ತೋರದೇ ನಿಷ್ಪಕ್ಷಪಾತ ಹಾಗೂ ಪ್ರಾಮಾಣಿಕ ವರದಿಗಾರಿಕೆಗೆ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಸವಾಯಿ ಗಂಧರ್ವ ಸಭಾ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ʼಹೊಸದಾಗಿ ಸಾವಿರಾರು ಪತ್ರಿಕಾ ಮತ್ತು ದೃಶ್ಯ ಮಾದ್ಯಮಗಳು ಉದಯವಾಗಿರುವುದು ಸಂತಸದ ಸಂಗತಿ. ಆದರೆ ಸತ್ಯಶೋಧನೆಯ ಸುದ್ದಿಗಳ ಕಡೆಗೆ ಪತ್ರಕರ್ತರ ಗಮನವಿರಬೇಕು. ಒಂದೇ ಪಕ್ಷವನ್ನು ಗುರಿಯಾಗಿಸಿ ಸುದ್ದಿ ಪ್ರಸಾರ ಮಾಡುವುದು ಪತ್ರಿಕೋದ್ಯಮಕ್ಕೆ ಮಾಡುವ ದ್ರೋಹ. ಪತ್ರಕರ್ತರಿಗೆ ಸಿಗಬೇಕಾದ ಸರ್ಕಾರದ ಸೌಲಭ್ಯ, ಯೋಜನೆಗಳ ಕುರಿತು ಚರ್ಚಿಸಲಾಗುವುದುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯಿಶಾ ಖಾನ್ ಮಾತನಾಡಿ, ʼಇವತ್ತು ಮಾಧ್ಯಮದ ಹಬ್ಬವನ್ನಾಗಿ ಆಚರಿಸುತ್ತಿರುವುದು ಬಹಳ ಖುಷಿ ತಂದಿದೆ. ನಾನು ಹುಬ್ಬಳ್ಳಿ ಬಿಟ್ಟರೂ ಇಲ್ಲಿನ ಮಣ್ಣಿನೊಂದಿಗೆ ನನ್ನ ಬಾಂಧವ್ಯವಿದೆ. 40 ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ಮಾಧ್ಯಮ‌ ಅಕಾಡೆಮಿ ಇನ್ನಷ್ಟು ಬೆಳೆಸಲು ನಾವೆಲ್ಲರೂ ದುಡಿಯೋಣʼ ಎಂದರು.

ʼಪತ್ರಿಕೋದ್ಯಮ ಎಲ್ಲರನ್ನೂ ಕೂಡಿಸಲು ಪ್ರಯತ್ನಿಸಬೇಕು. ಇಂದಿನ ಬಹುತೇಕ ಪತ್ರಿಕೋದ್ಯಮ ಅಧ್ಯಯನ ಕೇಂದ್ರಗಳು ಮುಚ್ಚುತ್ತಿರುವುದು ದುರಂತದ ಸಂಗತಿ. ಪತ್ರಿಕೋದ್ಯಮ ಎಂದರೆ ಕೇವಲ ವಿಧಾನ ಸೌಧದಲ್ಲಿ ನಡೆಯುವ ಸುದ್ದಿಗಳನ್ನಷ್ಟೇ ಪ್ರಕಟಿಸುವುದಲ್ಲ. ಬದಲಾಗಿ ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ದನಿಯಾಗಬೇಕುʼ ಎಂದು ಕಿವಿಮಾತು ಹೇಳಿದರು.

ಪತ್ರಕರ್ತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಮಾತನಾಡಿ, ʼಹತ್ತು ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಹಿರಿಮೆ ಕಾರ್ಯನಿರತ ಪತ್ರಕರ್ತ ಸಂಘಕ್ಕೆ ಸಲ್ಲುತ್ತದೆʼ ಎಂದರು.

ಇದೇ ಸಂದರ್ಭದಲ್ಲಿ ಉತ್ತಮ‌ ವರದಿಗಾರರಿಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ ರೈತರ ಹೋರಾಟಕ್ಕೆ ಜಯ; ಕೆಐಎಡಿಬಿ ಸ್ವಾಧೀನತೆಯಿಂದ ಕೃಷಿ ಭೂಮಿ ಕೈಬಿಟ್ಟ ಸರ್ಕಾರ

ಕಾರ್ಯಕ್ರಮದಲ್ಲಿ ಪ್ರಮುಖರಾದ ಸುಶಿಲೇಂದ್ರ ಕುಂದರಗಿ, ಲೋಚನೇಶ್ ಹೂಗಾರ್, ಪುಂಡಲಿಕ್ ಬಾಳೋಜಿ, ಗಣಪತಿ ಗಂಗೊಳ್ಳಿ, ಹನುಮಂತರಾವ್ ಬೆಳಗಾಂವಕರ್, ವಾರ್ತಾ ಭಾರತಿ ವರದಿಗಾರ ಹಜರತಸಾಬ್ ನದಾಫ್ ಸೇರಿದಂತೆ ಜಿಲ್ಲೆಯ ಮುದ್ರಣ ಹಾಗೂ ದೃಶ್ಯ ಮಾಧ್ಯಮ ವರದಿಗಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...