ಬೀದರ್‌ | ಸದಾಶಿವ ಆಯೋಗದದ ವರದಿ ಜಾರಿಗೆ ಬಿಎಸ್‌ಪಿ ಒತ್ತಾಯ

Date:

ಕಾಂತರಾಜು ಆಯೋಗದ ವರದಿ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸಿ ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಕಲ್ಪಿಸುವಂತೆ ಬಹುಜನ ಸಮಾಜ ಪಕ್ಷ ಬೀದರ್ ಜಿಲ್ಲಾ ಘಟಕ ಒತ್ತಾಯಿಸಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಮುಖ್ಯ ಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

“ಚುನಾವಣೆ ಸಮಯದಲ್ಲಿ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಸದಾಶಿವ ಆಯೋಗದ ವರದಿಯನ್ನು ಜಾರಿಮಾಡುವುದಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ತಮ್ಮ ಪ್ರನಾಳಿಕೆಗಳಲ್ಲಿ ಘೋಷಿಸಿ ಗೆದ್ದ ನಂತರ ಮೌನ ವಹಿಸಿ ಈ ಸಮಾಜಕ್ಕೆ ನಿರಂತರವಾಗಿ ದ್ರೋಹ ಮಾಡುತ್ತಾ ಬಂದಿವೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2023ರ ಚುನಾವಣಾ ಪೂರ್ವದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲನೇ ಸಚಿವ ಸಂಪುಟದ ಚರ್ಚಿಸಿ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಸುವುದಾಗಿ ಕಾಂಗ್ರೇಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ ಗೆದ್ದು ಅಧಿಕಾರಕ್ಕೆ ಬಂದು 6 ತಿಂಗಳು ಕಳೆಯುತ್ತಿದ್ದರೂ ಇದೂವರೆಗೂ ಈ ಬಗ್ಗೆ ಮೌನವಹಿಸಿರುವುದು ಖಂಡನೀಯ. ಪರಿಶಿಷ್ಟ ಜಾತಿಯ ಮೀಸಲಾತಿ ಹಂಚಿಕೆಯಲ್ಲಿ ತಾರತಮ್ಯ ಸೃಷ್ಠಿಗೆ ಕಾರಣ 75 ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳೇ ಕಾರಣ ಎಂಬುದನ್ನು  ಅರ್ಥಮಾಡಿಕೊಳ್ಳಬೇಕಾಗಿದೆ” ಎಂದು ದೂರಿದರು.

“ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಕಾಂತರಾಜು ಆಯೋಗದ ವರದಿ ಮತ್ತು ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು” ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಡಿ. 23 ರಂದು ಬೆಂಗಳೂರಿನಲ್ಲಿ ರೈತ ಸಮಾವೇಶ: ರೈತರ ಸಂಪೂರ್ಣ ಸಾಲ ಮನ್ನಾ ಘೋಷಣೆಗೆ ಆಗ್ರಹ

ಈ ಸಂದರ್ಭದಲ್ಲಿ ಪಕ್ಷದ ರಾಜ್ಯಕಾರ್ಯದರ್ಶಿ ದತ್ತು ಸೂರ್ಯವಂಶಿ, ಜಿಲ್ಲಾಧ್ಯಕ್ಷ ಕಪಿಲ್ ಗೋಡಬೋಲೆ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಸತ್ಯದೀಪ ಹಾವನೂರ್, ಬೀದರ ಲೋಕಸಭಾ ಉಸ್ತುವಾರಿ ಡಾ.ಗುಣವಂತ ಸೂರ್ಯವಂಶಿ,‌ ಜಿಲ್ಲಾ ಉಪಾಧ್ಯಕ್ಷ ಜಿ. ಆಸ್ಕರ್, ಜಾಫರ್ ಖುರೇಷಿ, ಬೀದರ ಲೋಕಸಭಾ ಉಸ್ತುವಾರಿ ಸಂಜುಕುಮಾರ ಮೇಧಾ, ಜಿಲ್ಲಾ ಕಾರ್ಯದರ್ಶಿ ಯೋಹಾನ್ ಡಿಸೋಜಾ, ಜಿಲ್ಲಾ ಖಜಾಂಚಿ ರಿಚರ್ಡ್ ಬಾಬುರಾವ, ಜಿಲ್ಲಾ ಉಪಾಧ್ಯಕ್ಷರು ಶಕ್ತಿಕಾಂತ ಭಾವಿದೊಡ್ಡಿ, ಅಶೋಕ ಮಂಠಾಳಕರ್, ದತ್ತಾತ್ರಿ ಭಂಡಾರಿ, ಶಂಕರ ಫುಲೇ, ನಗನಾಥ ಬಂಗಾರೆ, ಉಮೇಶ್ ಗುತ್ತೇದಾರ, ರಜನಿಕಾಂತ ನಾಯಕ, ಮಹೇಶ್ ಭೋಲಾ, ಶಂಕರ ಪುಲೆ, ಪ್ರದೀಪ ಫುಲೆ, ನಾಗನಾಥ ಭಂಗಾರೆ, ರಾಜು, ದತ್ತು ಸೇರಿದಂತೆ  ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...