ಉಡುಪಿ | ಬೌದ್ಧ ಧರ್ಮಕ್ಕೆ ಬ್ರಾಹ್ಮಣ ಧರ್ಮದಿಂದ ಅಪಾಯ – ಜಯನ್ ಮಲ್ಪೆ

Date:

ಬೌದ್ಧ ಧರ್ಮಕ್ಕೆ ಇಸ್ಲಾಮಿನಿಂದ ಅಪಾಯವಿಲ್ಲ. ಆದರೆ ಬ್ರಾಹ್ಮಣ ಧರ್ಮದಿಂದ ಅಪಾಯವಿದೆ. ಏಕೆಂದರೆ ಅವರು ಸಮಾಜದ ಶ್ರೇಣೀಕೃತ ಅಸಮಾನತೆ ಹಾಗೇ ಇರಲೆಂದೇ ಬಯಸುತ್ತಾರೆ. ಬೌದ್ಧ ಧರ್ಮ ಸಮಾನತೆಯನ್ನು ನಂಬುತ್ತದೆ ಮತ್ತು ಬೌದ್ಧ ಧರ್ಮವು ಬ್ರಾಹ್ಮಣರ ಅಹಂ ಮತ್ತು ಅಧಿಕಾರದ ಬುಡಕ್ಕೆ ಕೊಡಲಿಯೇಟು ಹಾಕುತ್ತದೆ. ಅದಕ್ಕಾಗಿ ಅದನ್ನು ದ್ವೇಷಿಸುತ್ತಾರೆ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ.

ಅವರು ಸೋಮವಾರ ಮಲ್ಪೆ ಸರಸ್ವತಿ ಬಯಲು ರಂಗಮಂದಿರದಲ್ಲಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ಆಯೋಜಿಸಿದ ೨೫೬೯ನೇ ವೈಶಾಖ ಪೂರ್ಣಿಮೆಯ ಬುದ್ಧ ಜಯಂತಿಯನ್ನು ಉದ್ಘಾಟಿಸಿ ಮಾತನಾಡುತ್ತಾ, ಇಂದು ಭಾರತ ಮತ್ತು ಪಾಕಿಸ್ಥಾನದ ನಡುವೆ ದಾಳಿ ನಡೆಯುತ್ತಿದೆ. ನಮಗೆ ಮಾನವ ಜನಾಂಗದ ಎದುರಿಗೆ ಇರುವ ಬುದ್ಧ ಮತ್ತು ಯುದ್ಧ ಎಂಬ ಎರಡು ಆಯ್ಕೆಗಳಲ್ಲಿ ಒಂದನ್ನು ಆರಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾದರೆ ನಾವು ಯಾವುದನ್ನು ಆಯ್ಕೆ ಮಾಡುತ್ತೀರಿ?ಎಂದ ಜಯನ್ ಮಲ್ಪೆ ಜೀವ ಜಗತ್ತಿನ ಬಗ್ಗೆ ಕಿಂಚಿತ್ತಾದರೂ ಪ್ರೀತಿಯುಳ್ಳ ಮನುಷ್ಯ ವರ್ಗವು ಬುದ್ಧನನ್ನು ಮತ್ತು ಬುದ್ದನ ವಿಚಾರಗಳನ್ನು ಅಪ್ಪಿಕೊಳ್ಳದೇ ಬೇರೆ ದಾರಿ ಕಾಣುವುದಿಲ್ಲ.ಬುದ್ದನ ಶಾಂತಿ ಮಂತ್ರವೇ ಭೂಮಿಯ ಮೇಲಿನ ಜೀವಸಂಕುಲದ ಉಳಿವಿಗೆ ರಕ್ಷಾಕವಚವಾಗಬಲ್ಲದು ಎಂದರು.

ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷರಾದ ಗಣೇಶ್ ನೆರ್ಗಿ ಮಾತನಾಡಿ ಸಮಕಾಲೀನ ಜಾಗತಿಕ ಘಟನೆಗಳಿಗೆ, ಹಿಂಸೆಯ ಪ್ರಚೋದನೆ, ಭಯೋತ್ಪಾದನೆ, ಭ್ರಷ್ಟಾಚಾರ, ಅನೈತಿಕ ರಾಜಕಾರಣ, ಕೋಮುದ್ವೇಷ ಮುಂತಾದವುಗಳಿಗೆ ಪ್ರತಿರೋಧವೊಡ್ಡಲು ಬುದ್ಧನನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಬೇಡ್ಕರ್ ಯುವಸೇನೆಯ ಸ್ಥಾಪಕ ಅಧ್ಯಕ್ಷರಾದ ಹರೀಶ್ ಸಾಲ್ಯಾನ್ ಮಾತನಾಡಿ ಭವಿಷ್ಯದಲ್ಲಿ ಅಂಬೇಡ್ಕರ್ ಕನಸಿನ ಪ್ರಬುದ್ಧ ಭಾರತ ಸಕಾರಗೊಳ್ಳಬೇಕಾದರೆ ದಲಿತರು ಅಂಬೇಡ್ಕರ್‌ರವರನ್ನು ತಮ್ಮ ಸಂಕುಚಿತ ಸ್ವಾರ್ಥಕ್ಕೆ ಸಾಧನವಾಗಿ ಬಳಸುವುದನ್ನು ಬಿಟ್ಟು ಧಮ್ಮ ಚಳವಳಿಯನ್ನು ಮುನ್ನಡೆಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ದಲಿತ ಮುಖಂಡರಾದ ದಯಾಕರ ಮಲ್ಪೆ, ಸಂತೋಷ್ ಕಪ್ಪೆಟ್ಟು,ರವಿ ಲಕ್ಷ್ಮೀಂದ್ರನಗರ, ಗುಣವಂತ ತೊಟ್ಟಂ, ದೀಪಕ್ ಕೊಡವೂರು, ಸತೀಶ್ ಕಪ್ಪೆಟ್ಟು, ಸಾಧು ಚಿಟ್ಪಾಡಿ, ಪ್ರಸಾದ್ ಮಲ್ಪೆ, ಅರುಣ್ ಸಲ್ಯಾನ್, ನವೀನ್ ಬನ್ನಂಜೆ, ಸಕಿ ಕುಮಾರ್ ಕಪ್ಪೆಟ್ಟು, ಮಾಸ್ಟರ್ ಹಷೀಲ್ ಮುಂತಾದವರು ಉಪಸ್ಥಿತರಿದ್ದರು.

ಸಮಾರಂಭದ ಬಳಿಕ ಮಲ್ಪೆ ಸುತ್ತುಮುತ್ತಲಿನ ದಲಿತ ಕಾಲೋನಿಯ ನೂರಾರು ಮಂದಿ ಗೌತಮಬುದ್ಧನಿಗೆ ಹೂವು ಗುಚ್ಚ ಅರ್ಪಿಸಿ ವಂದನೆ ಸಲ್ಲಿಸಿದರು. ವಿನಯ ಕೊಡಂಕೂರು ಸ್ವಾಗತಿಸಿ, ಸಂತೋಷ್ ಮೂಡುಬೆಟ್ಟು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...