ಮೈಸೂರು | ಬುದ್ಧ ಎಂದರೆ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವ ದೊಡ್ಡ ಶಕ್ತಿ : ಸಚಿವ ಡಾ. ಹೆಚ್. ಸಿ. ಮಹದೇವಪ್ಪ

Date:

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ ಅವರು ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರು ನಗರದ ಅಶೋಕಪುರಂನಲ್ಲಿರುವ ವಿಶ್ವ ಮೈತ್ರಿ ಬುದ್ಧ ವಿಹಾರದಲ್ಲಿ ಹಮ್ಮಿಕೊಂಡಿದ್ದ “ಭಗವಾನ್ ಬುದ್ಧರ 2569ನೇ ಜಯಂತಿ” ಕಾರ್ಯಕ್ರಮದಲ್ಲಿ ‘ ಬುದ್ಧ ಎಂದರೆ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವ ದೊಡ್ಡ ಶಕ್ತಿ ‘ ಎಂದರು.

” ಭಗವಾನ್ ಬುದ್ಧರು ಜೀವನದ ಸತ್ಯ ಸಂಗತಿಗಳ ಬಗ್ಗೆ ತಿಳಿಸಿ ‘ ನಿನಗೆ ನೀನೆ ಬೆಳಕು ‘ ಎಂದು ಜಗತ್ತಿಗೆ ಸಾರಿದ್ದಾರೆ. ಅಲೌಕಿಕ ವಿಚಾರಗಳನ್ನು ಬದಿಗೊತ್ತಿ ವೈಜ್ಞಾನಿಕ, ವೈಚಾರಿಕೆ ಸಂಗತಿಗಳ ಬಗ್ಗೆ ಅರಿವು ಮೂಡಿಸಿದ್ದಾರೆ. ವೈಜ್ಞಾನಿಕ ಅಲೋಚನೆಗಳಿಂದ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದರು. ವಿದೇಶಕ್ಕೆ ತೆರಳಿದಾಗ ನಾವು ಬುದ್ದನ ನಾಡಿನಿಂದ ಬಂದಿದ್ದೇವೆ ಎಂದು ಹೇಳುತ್ತೇವೆ. ನಮಗೆ ಬುದ್ಧ ಬೇಕು ಎನ್ನುತ್ತೇವೆ. ಬುದ್ಧನಿಗೆ ಬಡವರ ಬಗ್ಗೆ ಕರುಣೆ, ಮಮಕಾರ ಅಗಾದವಾಗಿತ್ತು. ಬುದ್ಧ ಎಂಬುದೇ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ದೊಡ್ಡ ಶಕ್ತಿ ” ಎಂದು ನುಡಿದರು.

‘ ಬಾಬಾ ಸಾಹೇಬರು ಭಗವಾನ್ ಬುದ್ದರ ಪರಮ ಅನುಯಾಯಿಗಿದ್ದರು. ಭಾರತದಲ್ಲಿ ಶ್ರೇಷ್ಠ ಚಿಂತಕರಿದ್ದರೆ ಅದು ಡಾ.ಬಿ.ಆರ್. ಅಂಬೇಡ್ಕರ್ ಎಂದು ಲೋಹಿಯಾ ಅವರು ಹೇಳಿದ್ದಾರೆ. ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿದರೆ ಬಾಬಾ ಸಾಹೇಬರನ್ನು ಸಂಪೂರ್ಣವಾಗಿ ಅರಿಯುವುದು ಸುಲಭವಾಗುತ್ತದೆ ‘ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಏಳಿಗೆ ಇರುವುದು ಪ್ರಜಾಪ್ರಭುತ್ವದ ಬಲವರ್ಧನೆ ಮತ್ತು ಸಂವಿಧಾನ ಆಶಯಗಳ ಜಾರಿಯಲ್ಲಿ. ಈಡೀ ಭಾರತ ದೇಶದಲ್ಲೇ ನಮ್ಮ ಸರ್ಕಾರವು ಸಂವಿಧಾನವನ್ನು ಮನೆ-ಮನೆಗೆ ತಲುಪಿಸಿದೆ. ಒಂದು ಚಳುವಳಿಯಂತೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

ಬುದ್ಧ, ಬಸವ, ಡಾ.ಬಿ.ಆರ್. ಅಂಬೇಡ್ಕರ್‌ರನ್ನು ಪಾಲಿಸಿದರೆ ವಿಶ್ವಮಾನವನ ಘನತೆ ಬರುತ್ತದೆ. ಧರ್ಮದ ಆಯ್ಕೆ ಐಚ್ಛಿಕ ವಿಷಯ. ಅಂತಿಮವಾಗಿ ನಮಗೆ ಧರ್ಮ ಬೇಕು. ಆ ಧರ್ಮವು ನಮಗೆ ಹಿತಕರವಾಗಿರಬೇಕು. ತಾರತಮ್ಯ, ಅಸಮಾನತೆಯನ್ನು ಬೋಧಿಸುವುದು ಧರ್ಮವೇ ಅಲ್ಲ ಎಂದು ತಿಳಿಸಿದರು.

ಬಾಬಾ ಸಾಹೇಬರು ದೇಶದ ಅಭಿವೃದ್ದಿ ಕುರಿತು ಎಲ್ಲಾ ವಿಷಯಗಳನ್ನು ತಿಳಿಸಿದ್ದಾರೆ. ಪರದೇಶದ ನಡುವೆ ಬಿಕ್ಕಟ್ಟು ಉಂಟಾದ ಸಂದರ್ಭದಲ್ಲಿ ಪರಿಹರಿಸುವ ರಾಜತಾಂತ್ರಿಕ ವಿಚಾರಗಳನ್ನು ಮಂಡಿಸಿದ್ದಾರೆ. ಪ್ರತಿಯೊಬ್ಬರಿಗೂ ಸ್ವಾಭಿಮಾನದ ಬದುಕು ಅಗತ್ಯವಾಗಿದೆ. ದುರಾಸೆಯಿಂದ ದೂರವಾಗಿ ಮನುಷ್ಯತ್ವದಿಂದ ಕೂಡಿದ ಜೀವನ ನಡೆಸಲು ಬುದ್ಧನನ್ನು ಅನುಸರಿಸೋಣ ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಬುದ್ಧನ ಸಂದೇಶ ಇಡೀ ಮಾನವ ಕುಲಕ್ಕೆ ದಿಕ್ಸೂಚಿ : ವಿನಾಯಕ ನರ್ವಡೆ

ಕಾರ್ಯಕ್ರಮದಲ್ಲಿ ಕರ್ನಾಟಕ ಬಿಕ್ಕು ಮಹಾ ಸಂಘದ ಕಾರ್ಯದರ್ಶಿ ಕಲ್ಯಾಣ ಸಿರಿ ಬಂತೇಜಿ, ಶಾಸಕ ಶ್ರೀವತ್ಸ, ಭಾಗ್ಯಲಕ್ಷ್ಮೀ ಶ್ರೀನಿವಾಸ ಪ್ರಸಾದ್, ಮಾಜಿ ಮೇಯರ್ ಪುರುಷೋತ್ತಮ್, ವಕೀಲ ಶಿವರುದ್ರಪ್ಪ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...