ದಾವಣಗೆರೆ | ಭಾರತದಲ್ಲಿ ಬೌದ್ಧ ಧರ್ಮ ಮರುಹುಟ್ಟು ಪಡೆಯಬೇಕಿದೆ: ಬಿ ಗೋಪಾಲ್

Date:

ಪ್ರಪಂಚದ 28ಕ್ಕೂ ಹೆಚ್ಚು ದೇಶಗಳಲ್ಲಿ ಬೌದ್ಧ ಧರ್ಮವನ್ನು ಅನುಸರಿಸಲಾಗುತ್ತಿದೆ. ಆದರೆ, ಬೌದ್ಧ ಧರ್ಮ  ಹುಟ್ಟಿದ ಈ ನೆಲದಲ್ಲಿ ಅದು ಮರುಹುಟ್ಟು ಪಡೆಯಬೇಕಿದೆ. ಈ ದೇಶದ, ರಾಜ್ಯದ ಜನ ಮೂಡನಂಬಿಕೆ ಅಂಧಾಚಾರಗಳಲ್ಲಿ ಬದುಕುತ್ತಿದ್ದಾರೆ ಎಂದು ಪ್ರಜಾಪರಿವರ್ತನ ವೇದಿಕೆಯ ರಾಜ್ಯಾಧ್ಯಕ್ಷ ಬಿ. ಗೋಪಾಲ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಪ್ರಜಾಪರಿವರ್ತನಾ ವೇದಿಕೆ ಆಯೋಜಿಸಿದ್ದ ಸಂವಿಧಾನ ಜಾಗೃತಿ ಕಾರ್ಯಕ್ರಮ ಮತ್ತು ಜೋಗೇಂದ್ರನಾಥ ಮಂಡಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸಮಾಜದಿಂದ ನನಗೇನು ಎನ್ನುವುದಕ್ಕಿಂತ, ನನ್ನಿಂದ ಸಮಾಜಕ್ಕೇನು ಎಂಬುದನ್ನು ಅರಿತುಕೊಳ್ಳಬೇಕು. ಅದನ್ನು ಇತರರಿಗೂ ತಿಳಿಸುವ ಕೆಲಸವಾಗಬೇಕು” ಎಂದರು.

“ಜೋಗೇಂದ್ರನಾಥ ಮಂಡಲ್ ಪಶ್ಚಿಮ ಬಂಗಾಳದಲ್ಲಿ ಅತ್ಯಂತ ಪ್ರಭಾವಿ ಹೋರಾಟಗಾರರಾಗಿದ್ದಾರೆ. ಅಲ್ಲಿನ ಸರ್ಕಾರಕ್ಕೆ, ಸರ್ಕಾರ ರಚನೆಗೆ ಕೇವಲ ಒಂದು ಮತದ ಅಗತ್ಯವಿದ್ದಾಗ ಇವರು ಯಾವ ಸರ್ಕಾರ ಎಸ್‌ಸಿ/ಎಸ್‌ಟಿ ಶಾಲೆಗಳನ್ನು ತೆರೆಯಲು 5 ಲಕ್ಷ ಅನುದಾನವನ್ನು ಕೊಡುತ್ತದೆಯೋ ಮತ್ತು ಪೊಲೀಸ್ ಆಯ್ಕೆಯಲ್ಲಿ ಈ ಸಮುದಾಯಗಳಿಗೆ ಅವಕಾಶ ನೀಡುತ್ತದೆಯೋ ಆ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ ಎಂದಿದ್ದರು. ಅಂಬೇಡ್ಕರ್‌ ರಾಜ್ಯಸಭೆಗೆ ಆಯ್ಕೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶ ವಿಭಜನೆಯ ನಂತರ ಪಾಕಿಸ್ತಾನಕ್ಕೆ ಹೋದ ಮಂಡಲ್‌ ಅವರು ಅಲ್ಲಿನ ಪಾರ್ಲಿಮೆಂಟ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಮತ್ತೆ, ಭಾರತಕ್ಕೆ ಹಿಂದಿರುಗಿದರು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಎ.ಡಿ ಈಶ್ವರಪ್ಪ, “ಮೂಲ ನಿವಾಸಿಗಳಾದ ಎಸ್‌ಸಿ/ಎಸ್‌ಟಿ ಸಮುದಾಯ ಇತ್ತೀಚಿನ ದಿನಗಳಲ್ಲಿ ದಾರಿ ತಪ್ಪುತ್ತಿದೆ. ವಿವಿಧ ಆಸೆ ಆಮಿಷಗಳಿಗೆ ಬಲಿಯಾಗುತ್ತಿದೆ. ಅಂಬೇಡ್ಕರ್ ಮತ್ತು ಅವರ ಮೂಲತತ್ವ ಆಶಯಗಳನ್ನು ಮರೆತಿದೆ. ಸಮುದಾಯಗಳನ್ನು ಮರಳಿ ಸರಿದಾರಿಗೆ ತರಬೇಕಾಗಿದೆ. ದೇಶದ ಜನ ಅನುಭವಿಸುತ್ತಿರುವ ಸಮಾಧಾನದ ಬದುಕಿಗೆ ಸಂವಿಧಾನ ಕಾರಣವಾಗಿದೆ. ಸಂವಿಧಾನದ ಆಶಯಗಳನ್ನು ಸಮುದಾಯಕ್ಕೆ ತಿಳಿಸಿ ಎಚ್ಚರಿಸುವ ಕೆಲಸವನ್ನು ಮಾಡಬೇಕಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ರೋಷನ್ ಮುಲ್ಲಾ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...