ಬೀದರ್ | ಬೌದ್ಧ ಧಮ್ಮ ಸಂಸ್ಕೃತಿಯು ಜೀವಪರ ಪರವಾಗಿದೆ: ಭಂತೆ ಜ್ಞಾನ ಸಾಗರ

Date:

ಬೌದ್ಧ ಧಮ್ಮ ಸಂಸ್ಕೃತಿ ಜೀವಪರ ಮತ್ತು ಸಮಾನತೆ ಪರವಾಗಿದೆ. ಕತ್ತಲಿನಿಂದ ಬೆಳಕಿನಡೆ ಬರಲು ದಾರಿದೀಪವಾಗಿದೆ. ಮೈಲೂರಿನಲ್ಲಿ ಧಮ್ಮ ಸಂಸ್ಕೃತಿ ಉತ್ಸವ ಆಯೋಜಿಸಿರುವುದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಭಂತೆ ಜ್ಞಾನ ಸಾಗರ ಅವರು ಹೇಳಿದರು.

ಬೀದರ್‌ನ ವಿಶ್ವ ಶಾಂತಿ ಬುದ್ಧ ವಿಹಾರದಲ್ಲಿ ನಡೆದ ‘ಧಮ್ಮ ಸಂಸ್ಕೃತಿ ಉತ್ಸವ’ ಹಾಗೂ ಬುದ್ಧ ವಿಹಾರ ಸಮಿತಿಯ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಿತಿಯ ಸಲಹೆಗಾರರಾದ ಶಂಭುಲಿಂಗ ಕುದರೆ ಪ್ರಾಸ್ತಾವಿಕವಾಗಿ ಮಾತನಾಡಿ, “ಬುದ್ಧ ವಿಹಾರ ಅಭಿವೃದ್ಧಿಗಾಗಿ ಹಿರಿಯರು ಶ್ರಮಪಟ್ಟ ಪ್ರತಿಫಲವಾಗಿ ಇಂದು ವಿಹಾರ ಹೆಮ್ಮರವಾಗಿದೆ. ಹಿರಿಯರ ಶ್ರಮ ವ್ಯರ್ಥವಾಗದಂತೆ ನೂತನ ಪದಾಧಿಕಾರಿಗಳು ಮುನ್ನಡೆಸಿಕೊಂಡು ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಬೇಕೆಂದು” ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂಧರ್ಭದಲ್ಲಿ ವಿಶ್ವ ಶಾಂತಿ ಬುದ್ಧ ವಿಹಾರ ಅಭಿವೃದ್ಧಿ ಸಮಿತಿಯ ನೂತನ ಪದಾಧಿಕಾರಿಗಳಿಗೆ ಭಿಕ್ಕು ಸಂಘದಿಂದ ಪಂಚಶೀಲವನ್ನು ನೀಡಿ ಪ್ರಮಾಣ ಬೋಧಿಸಿ ವಿಹಾರಕ್ಕಾಗಿ ಶ್ರಮಪಟ್ಟ 40 ಮಹನೀಯರಿಗೆ ಸನ್ಮಾನಿಸಿದರು.

ವಿಶ್ವ ಶಾಂತಿ ಬುದ್ಧ ವಿಹಾರ ಅಭಿವೃದ್ಧಿ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ಮಹೇಶ ಗೋರನಾಳಕರ್, ಸಮಿತಿಯ ಸಲಹೆಗಾರ ಜಗನಾಥ ಬಡಿಗೇರ, ಚಂದ್ರಕಲಾ ಬಡಿಗೇರ್, ಸಮಿತಿಯ ಕಾರ್ಯದರ್ಶಿ ಪ್ರಶಾಂತ ಭಾವಿಕಟ್ಟಿ ಇದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್ | ನೀರಿನ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ದುರ್ಮರಣ

ನೂತನ ಪದಾಧಿಕಾರಿಗಳಾಗಿ ನೇಮಕ: 

(ಗೌರವಾಧ್ಯಕ್ಷ) ಸಂಜುಕುಮಾರ ಮೇತ್ರೆ, (ಅಧ್ಯಕ್ಷ) ರಾಜಕುಮಾರ ಭಾವಿಕಟ್ಟಿ (ಉಪಾಧ್ಯಕ್ಷ) ಕುಶಾಲರಾವ ಬಡಿಗೇರ, (ಪ್ರಧಾನ ಕಾರ್ಯದರ್ಶಿ) ಅಮರ ಪೂಜಾರಿ (ಖಜಾಂಚಿ) ನವನಾಥ ಒಂಟೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಕಾಶ ಕುದರೆ, ಬುಧ್ದಾನಂದ ಬಡಿಗೇರ, ಸುಜೀತ ಒಂಟೆ, ಸುನೀಲ ನವಲಸಪೂರ ಅವರನ್ನು ನೇಮಕವಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...