ಉತ್ತರ ಕನ್ನಡಕ್ಕೆ ಬಜೆಟ್ ಬಂಪರ್: ಕಾರವಾರದಲ್ಲಿ 100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಘೋಷಣೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಲವು ವರ್ಷಗಳ ನಿರೀಕ್ಷೆಗೆ ಸ್ಪಂದಿಸುವ ಘೋಷಣೆಗಳು ಹೊರಬಿದ್ದಿವೆ. ಜಿಲ್ಲೆಯ ಜನರು ಬಹುಕಾಲದಿಂದ ಬೇಡಿಕೆ ಇಟ್ಟಿದ್ದ ಸುಸಜ್ಜಿತ ವೈದ್ಯಕೀಯ ಸೌಲಭ್ಯ ಸೇರಿದಂತೆ ಕರಾವಳಿ ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೆ ಪೂರಕವಾಗುವ ಕೆಲವು ಯೋಜನೆಗಳನ್ನು ಸರ್ಕಾರ ಪ್ರಕಟಿಸಿದೆ.

ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಘೋಷಣೆಯಾಗಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ ಒಪ್ಪಿಗೆ ನೀಡಿದೆ. ಜಿಲ್ಲೆಯಲ್ಲಿ ತುರ್ತು ಮತ್ತು ಗಂಭೀರ ಚಿಕಿತ್ಸೆಗೆ ಸೂಕ್ತ ಸೌಲಭ್ಯಗಳ ಕೊರತೆಯಿಂದಾಗಿ ಹಲವರು ಗೋವಾ ಅಥವಾ ಮಂಗಳೂರಿನತ್ತ ತೆರಳಬೇಕಾಗಿರುವ ಪರಿಸ್ಥಿತಿಯನ್ನು ಮನಗಂಡು,

ಕಾರವಾರದಲ್ಲಿ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ. ಈ ಆಸ್ಪತ್ರೆ ಸ್ಥಾಪನೆಯಿಂದ ಅಪಘಾತಗಳು ಹಾಗೂ ಗಂಭೀರ ಕಾಯಿಲೆಗಳ ಸಂದರ್ಭದಲ್ಲಿ ಜಿಲ್ಲೆಯ ಜನರಿಗೆ ದೊಡ್ಡ ನೆರವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮೂಲಸೌಕರ್ಯ ಸುಧಾರಣೆಗೆ ಸರ್ಕಾರ ವಿಶೇಷ ಗಮನ ಹರಿಸಿದೆ. ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಸಂಪರ್ಕರಹಿತ ಪ್ರದೇಶಗಳಲ್ಲಿ ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳ ಸುರಕ್ಷಿತ ಸಂಚಾರಕ್ಕಾಗಿ 300 ಕಾಲುಸಂಕಗಳು (Foot Bridge) ನಿರ್ಮಿಸುವ ಯೋಜನೆ ಘೋಷಿಸಲಾಗಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಸಂಚಾರ ಸುಗಮವಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಸರ್ಕಾರಿ ಆಯುರ್ವೇದ ಆಸ್ಪತ್ರೆಗೆ 3 ಲಕ್ಷ ರೂ. ಮೌಲ್ಯದ ವೈದ್ಯಕೀಯ ಉಪಕರಣ ದೇಣಿಗೆ

ಅದರ ಜೊತೆಗೆ, ಜಿಐ (GI) ಮಾನ್ಯತೆ ಪಡೆದ ಉತ್ಪನ್ನಗಳ ಪ್ರಚಾರ ಮತ್ತು ಬ್ರಾಂಡಿಂಗ್‌ಗೆ ಉತ್ತೇಜನ ನೀಡುವ ಕ್ರಮಗಳೂ ಬಜೆಟ್‌ನಲ್ಲಿ ಪ್ರಸ್ತಾಪವಾಗಿದ್ದು, ಜಿಲ್ಲೆಯ ವಿಶಿಷ್ಟ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಣೆ ಸಾಧ್ಯವಾಗಲಿದೆ.

ಜಿಲ್ಲೆಯ ಪ್ರಮುಖ ಭಾಷಾ ಸಮುದಾಯಗಳಲ್ಲಿ ಒಂದಾದ ಹವ್ಯಕ ಭಾಷೆ ಮತ್ತು ಸಾಹಿತ್ಯದ ಸಂರಕ್ಷಣೆಗೂ ಈ ಬಾರಿ ಬಜೆಟ್‌ನಲ್ಲಿ ಗಮನ ಹರಿಸಲಾಗಿದೆ. ಹವ್ಯಕ ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಪೂರಕವಾಗುವ ಕಾರ್ಯಕ್ರಮಗಳಿಗೆ ಸರ್ಕಾರ ಪ್ರೋತ್ಸಾಹ ನೀಡುವ ಕುರಿತು ಘೋಷಿಸಲಾಗಿದೆ.

ಆರೋಗ್ಯ ಕ್ಷೇತ್ರಕ್ಕೆ ದೊರೆತಿರುವ ಈ ಪ್ರಮುಖ ಘೋಷಣೆಯಿಂದ ಜಿಲ್ಲೆಯ ಜನರಲ್ಲಿ ಸಂತಸ ವ್ಯಕ್ತವಾಗಿದೆ. ಆದರೆ ಅರಣ್ಯವಾಸಿಗಳ ದೀರ್ಘಕಾಲದ ಅತಿಕ್ರಮಣ ಭೂಮಿ ಮಂಜೂರಾತಿ ಸಮಸ್ಯೆ, ಮೀನುಗಾರರ ಡೀಸೆಲ್ ಸಬ್ಸಿಡಿ ಸೇರಿದಂತೆ ಕೆಲವು ಪ್ರಮುಖ ಬೇಡಿಕೆಗಳ ಬಗ್ಗೆ ಇನ್ನೂ ಸ್ಪಷ್ಟ ಘೋಷಣೆಗಳಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಒಟ್ಟಾರೆ, ಈ ಬಜೆಟ್ ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಸೇವೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ದಿಕ್ಕು ತೋರಿಸುವ ಪ್ರಯತ್ನವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...