ಕಲಬುರಗಿ | ತಂಗುದಾಣ ಇದ್ದರೂ ನಿಲ್ಲಿಸದ ಬಸ್‌ಗಳು

Date:

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಿಣ್ಣಿ ಸಡಕ್, ನವದಗಿ ಗ್ರಾಮಗಳು ಆಡಳಿತದ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಗ್ರಾಮಗಳು ಹೆದ್ದಾರಿ ಸಮೀಪವೇ ಇದ್ದು, ಬಸ್‌ ತಂಗುದಾಣಗಳಿದ್ದರೂ ಸರ್ಕಾರಿ ಸಾರಿಗೆ ಬಸ್‌ಗಳು ನಿಲುಗಡೆ ನೀಡದೆ, ಹೋಗುತ್ತಿವೆ. ಹೀಗಾಗಿ, ನಿತ್ಯ ಗ್ರಾಮಗಳ ಜನರು, ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಸ್‌ಗಳ ನಿಲುಗಡೆ ಇಲ್ಲದ ಕಾರಣ, ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಗ್ರಾಮಸ್ಥರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜಿಗೆ ಹೋಗಿ ಬರುವುದೇ ಪ್ರಯಾಸವಾಗುತ್ತಿದೆ. ಹೀಗಾಗಿ, ಅವರ ವಿದ್ಯಾಭ್ಯಾಸಕ್ಕೂ ತೊಂದರೆ ಉಂಟಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ವೃದ್ಧರು, ಮಹಿಳೆಯರು, ಮಕ್ಕಳು ರಸ್ತೆ ಬದಿಯಲ್ಲಿ ತಾಸು ಗಟ್ಟಲೆ ಬಸ್‌ಗಾಗಿ ಕಾಯುವ ಪರಿಸ್ಥಿತಿ ಇದೆ. ಯಾವುದೋ ಕೆಲವು ಬಸ್‌ಗಳಷ್ಟೇ ನಿಲ್ಲಿಸುತ್ತವೆ. ಕೆಲವು ಬಸ್‌ಗಳು ನಿಲ್ಲಿಸದೂ, ಅವುಗಳಲ್ಲಿ ಹತ್ತಲು ಜಾಗವಿಲ್ಲದಷ್ಟು ಪ್ರಯಾಣಿಕರು ತುಂಬಿರುತ್ತಾರೆ ಎಂದು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್, ಹುಮನಾಬಾದ್‌ಗೆ ಹೋಗುವ ಸಾಕಷ್ಟು ಬಸ್‌ಗಳು ಗ್ರಾಮಗಳ ಮೂಲಕ ಹಾದು ಹೋಗುತ್ತವೆ. ಆದರೆ, ಅವು ಗ್ರಾಮಗಳಲ್ಲಿ ನಿಲ್ಲಿಸುವುದಿಲ್ಲ. ನಿಲ್ಲಿಸುವಂತೆ ಕೇಳಿದರೆ, ಸ್ಟಾಪ್‌ ಇಲ್ಲವೆಂದು ನಿರ್ವಾಹಕ, ಚಾಲಕರು ಹೇಳುತ್ತಾರೆ. ಪಕ್ಕದ ಹಳಿಖೇಡ್ (ಕೆ) ಗ್ರಾಮದಲ್ಲಿ ಇಳಿದು, 2 ಕಿ.ಮೀ ನಡೆದು ತಮ್ಮ ಹಳ್ಳಿಗಳಿಗೆ ಬರಬೇಕು ಎಂದು ಕಿಣ್ಣಿ ಸಡಕ್ ಗ್ರಾಮಸ್ಥರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚಿಕ್ಕಬಳ್ಳಾಪುರ | ಸ್ಮಶಾನ ಕಾರ್ಮಿಕರಿಂದ ಅಣುಕು ಶವಯಾತ್ರೆ – ಪ್ರತಿಭಟನೆ

“ಕೆಲವು ಸಿಟಿ ಬಸ್‌ಗಳು ಗ್ರಾಮದಲ್ಲಿ ನಿಲ್ಲಿಸುತ್ತವೆ. ಅದೂ ಸಂಜೆ ವೇಳೆ, ಒಂದೇ ಬಸ್‌ ಇರುವುದು. ಅದೂ ಸರಿಯಾಗಿ ಬರುವುದಿಲ್ಲ. ಆ ಬಸ್‌ ಬರದಿದ್ದರೆ, ಖಾಸಗಿ ವಾಹನಗಳ ಮೂಲಕ ಗ್ರಾಮಕ್ಕೆ ಬರಬೇಕು” ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...