ಮಾರುಕಟ್ಟೆ ಗಲಾಟೆ ಪ್ರಕರಣ | ಬಂಧಿತ 80 ಮಂದಿ ರೈತರ ಬಿಡುಗಡೆಗೆ ಆಗ್ರಹ

Date:

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಗಲಾಟೆಯಲ್ಲಿ ಬಂಧಿತ 80 ಮಂದಿ ರೈತರನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಬ್ಯಾಡಗಿ ಮೆಣಸಿನಕಾಯಿಗೆ ಶಾಸನಬದ್ಧ ಕನಿಷ್ಟ ಬೆಂಬಲ ಬೆಲೆಯನ್ನು ನಿಗದಿಗೊಳಿಸಬೇಕು. ಇದರಿಂದ ರೈತರಿಗೆ ಆರ್ಥಿಕ ಗ್ಯಾರಂಟಿ ದೊರೆಯಲಿದೆ ಎಂದು ರೈತ ಸಂಘ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಆಗ್ರಹಿಸಿದರು.

‌ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಹಾವೇರಿ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ರೈತರು ಸಾಕಷ್ಟು ಮೆಣಸಿನಕಾಯಿ ತಂದಿದ್ದರು. ಮಾರುಕಟ್ಟೆಯಲ್ಲಿ ₹20,000 ಇದ್ದ ಬೆಲೆ ದಿಢೀರ್ ₹12,000 ಕುಸಿತ ಕಂಡಿತು. ಇದು ರೈತರ ಆಕ್ರೋಶಕ್ಕೆ ಪ್ರಮುಖ ಕಾರಣವಾಯಿತು. ಇದರಿಂದ ಕಚೇರಿ ಮತ್ತು ವಾಹನಗಳಿಗೆ ಕಲ್ಲು ತೂರಿ, ಬೆಂಕಿ ಹಚ್ಚಿ ರೈತರು ಆಕ್ರೋಶ ಹೊರಹಾಕಿದ್ದಾರೆ. ಇದು ಸರ್ಕಾರದ ವೈಫಲ್ಯ. ರೈತರ ಬೆಳೆಗೆ ಸೂಕ್ತ ಬೆಂಬಲ ಬೆಲೆ ಕೊಟ್ಟಿಲ್ಲ. ಸೂಕ್ತ ತಯಾರಿಯನ್ನು ಮಾಡಿಕೊಂಡಿಲ್ಲವಾದ್ದರಿಂದ ಇದಕ್ಕೆ ಸರ್ಕಾರವೇ‌ ನೇರ ಹೊಣೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಲಾಟೆಯಲ್ಲಿ ರೈತರ ತಪ್ಪಿಲ್ಲ. ʼಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ. ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇನೆʼ ಎಂದು ಸಚಿವ ಶಿವಾನಂದ ಪಾಟೀಲ್ ರಾಜಕೀಯ ಲಾಭಕ್ಕೆ ಮುಂದಾಗಿದ್ದಾರೆ. ತಮ್ಮ ತಪ್ಪನ್ನು ಮುಚ್ಚಿಹಾಕಲು ಹೋಗುತ್ತಿದ್ದಾರೆ. ಅದೆಲ್ಲವನ್ನೂ ಬಿಟ್ಟು ಈ ಹಿಂದೆ ಇದ್ದ ದರವನ್ನು(20 ಸಾವಿರ) ಮುಂದುವರಿಸಿ. ಬಂಧಿತ 80 ಮಂದಿ ರೈತರನ್ನು ಬಿಡುಗಡೆಗೊಳಿಸಬೇಕು” ಎಂದು ಒತ್ತಾಯ ಮಾಡಿದರು.

ಎಂಎಸ್‌ಪಿಯಿಂದ ರೈತರಿಗೆ ಆರ್ಥಿಕ ಗ್ಯಾರಂಟಿ: “ಸರ್ಕಾರ ಬ್ಯಾಡಗಿ ಮೆಣಸಿನಕಾಯಿಗೆ ಶಾಸನಬದ್ಧ, ನ್ಯಾಯಯುತ ಕನಿಷ್ಟ ಬೆಂಬಲ ನಿಗದಿಗೊಳಿಸಬೇಕು. ಇದರಿಂದ ರೈತರಿಗೆ ಆರ್ಥಿಕ ಗ್ಯಾರಂಟಿ ದೊರೆಯಲಿದೆ ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಶಾಸನಬದ್ಧ ಎಂಎಸ್‌ಪಿ ನಿಗದಿಯಾಗದಿದ್ದಲ್ಲಿ ದೆಹಲಿ ಹೊರಾಟದಂತ ನಿರ್ಧಾರಕ್ಕೆ ಮುಂದಾಗುತ್ತೇವೆ” ಎಂದು ಎಚ್ಚರಿಸಿದರು.

ಎಚ್ ಎನ್ ವ್ಯಾಲಿ, ಕೆಸಿ ವ್ಯಾಲಿ ನೀರಿನ ಮೂರನೇ ಹಂತದ ಸಂಸ್ಕರಣೆಗೆ ಒತ್ತಾಯ : “ಸರ್ಕಾರ ಎಚ್‌ ಎನ್ ವ್ಯಾಲಿ, ಕೆಸಿ ವ್ಯಾಲಿ ನೀರನ್ನು ಎರಡು ಹಂತದಲ್ಲಿ ಸಂಸ್ಕರಿಸಿ ಜಿಲ್ಲೆಗಳಿಗೆ ಬಿಡುತ್ತಿದೆ. ಇದು ಅಪಾಯಕಾರಿ. ಆದ್ದರಿಂದ ಎಚ್ ಎನ್ ವ್ಯಾಲಿ, ಕೆಸಿ ವ್ಯಾಲಿ ನೀರಿನ ಮೂರನೇ ಹಂತದ ಸಂಸ್ಕರಣೆಗೆ ಸರ್ಕಾರ ಕೂಡಲೇ ಮುಂದಾಗಬೇಕು” ಎಂದು ಇದೇ ವೇಳೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ದೇಸು ಗೇಮು ಚವ್ಹಾಣ ಕಾಂಗ್ರೆಸ್‌ಗೆ ಮರು ಸೇರ್ಪಡೆ

ಸುದ್ದಿಗೋಷ್ಟಿಯಲ್ಲಿ ರೈತ ಮುಖಂಡರುಗಳಾದ ಭಕ್ತರಹಳ್ಳಿ ಬೈರೇಗೌಡ, ನರಸಿಂಹ ರೆಡ್ಡಿ, ಮಂಜುನಾಥ್, ಚಿಂತಾಮಣಿ ಹಾಲು ಒಕ್ಕೂಟದ ಅಧ್ಯಕ್ಷರು, ಸದಸ್ಯರು, ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...