ಬೈಂದೂರು | ವಿಶೇಷ ಚೇತನ ಮಕ್ಕಳ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ ಗುರುರಾಜ್ ಗಂಟಿಹೊಳೆ; ಮನೆಗೆ ಭೇಟಿ

Date:

ತಂದೆಯೋರ್ವರು ತನ್ನ ವಿಶೇಷ ಚೇತನ ಮಗುವನ್ನು ಹೆಗಲಮೇಲೆ ಕೂರಿಸಿಕೊಂಡು ತೋಡು ದಾಟುವ ದೃಶ್ಯ ಕಂಡ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಇದು ತನ್ನ ಕ್ಷೇತ್ರವ್ಯಾಪ್ತಿಯ ಯಳಜಿತ್‌ನಲ್ಲಿ ನಡೆದಿರುವುದು ಎಂಬುದನ್ನು ಖಚಿತಪಡಿಸಿಕೊಂಡ ಬಳಿಕ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸ್ಥಳಕ್ಕೆ ಭೇಟಿ ನೀಡಿ,ಪೋಷಕರನ್ನು ಭೇಟಿ ಮಾಡಿದ್ದಾರೆ. ತುರ್ತು ಅಗತ್ಯಗಳಿಗೆ ಸ್ಪಂದಿಸಿ, ತಾತ್ಕಾಲಿಕ ವ್ಯವಸ್ಥೆ ರೂಪಿಸಿದರು.

“ಸರಿಯಾದ ಕಾಲು ಸಂಕ ವ್ಯವಸ್ಥೆ ಇಲ್ಲದೆ ಕ್ಷೇತ್ರದ ಕೆಲವು ಭಾಗದಲ್ಲಿ ಆಗುತ್ತಿರುವ ಸಮಸ್ಯೆ ಗಮನಕ್ಕೆ ಬಂದಿದೆ. ತುರ್ತಾಗಿ ಏನು ಮಾಡಬೇಕು ಎಂಬುದನ್ನು ನಿರ್ದೇಶನ ನೀಡಲಾಗಿದೆ. ಯಳಜಿತ್ ಗ್ರಾಮದ ಹುಲ್ಕಡ್ಕಿ ಗುಡಿಕೇರಿಯಲ್ಲಿನ ಸಮಸ್ಯೆಯನ್ನು ಹತ್ತಿರದಿಂದ ಬಲ್ಲೆ. ತಾತ್ಕಾಲಿಕ ನೆಲೆಯಲ್ಲಿ ಏನೆಲ್ಲ ಪರಿಹಾರ ಕಾರ್ಯ ಸೂಚಿಸಲು ಸಾಧ್ಯವೋ ಅದನ್ನು ತುರ್ತಾಗಿ ಮಾಡುತ್ತಿದ್ದೇವೆ. ಶಾಶ್ವತ ವ್ಯವಸ್ಥೆಯನ್ನು(ಕಾಲುಸಂಕ) ರೂಪಿಸಲು ಯೋಜನೆ ಸಿದ್ಧಪಡಿಸಲಾಗುವುದು” ಎಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಳಜಿತ್ ಗ್ರಾಮದ ಹುಲ್ಕಡ್ಕಿ ಗುಡಿಕೇರಿಯಲ್ಲಿ ವಾಸಿಸುತ್ತಿರುವ ಕುಟುಂಬದವರನ್ನು ಭೇಟಿ ಮಾಡಿ, ಮಳೆಗಾಲ ನಿಲ್ಲುವವರೆಗೆ ಮತ್ತು ಕಾಲುಸಂಕ ನಿರ್ಮಾಣ ಆಗುವವರೆಗೆ ಆ ಮಕ್ಕಳಿಗೆ ತೊಂದರೆ ಆಗಬಾರದೆಂದು ತಕ್ಷಣವೇ ಸ್ಥಳೀಯ ಕಾರ್ಯಕರ್ತರ ನೆರವಿನೊಂದಿಗೆ ಪ್ರತ್ಯೇಕ ಮನೆ ವ್ಯವಸ್ಥೆ ಮಾಡಲು ಯೋಜನೆ ರೂಪಿಸಿದರು.

ಸ್ವಂತ ಮನೆಯಲ್ಲಿಯೇ ವ್ಯವಸ್ಥೆಗೆ ಸಿದ್ಧ

ಇದು ಸಾಧ್ಯವಾಗದೇ ಇದ್ದಲ್ಲಿ ಶಾಸಕರು ಸ್ವತಃ ತಮ್ಮ ಮನೆಗೇ ಬಂದು ವಾಸಿಸಬಹುದು ಎಂದು ಮಕ್ಕಳಿಗೆ ಧೈರ್ಯ ತುಂಬಿದರು ಮತ್ತು ಯಾವುದೇ ಕಾರಣಕ್ಕೂ ಶಿಕ್ಷಣ ನಿಲ್ಲಿಸಬಾರದು ಎಂದು ಮನವಿ ಮಾಡಿದರು.

ಈ ಭಾಗದಲ್ಲಿ ಶೀಘ್ರದಲ್ಲೇ ಕಾಲು ಸಂಕ ನಿರ್ಮಿಸುವುದರೊಂದಿಗೆ, ಆ ಮಕ್ಕಳ ಆರೋಗ್ಯದ ಬಗ್ಗೆಯೂ ಮುಂದಿನ ದಿನಗಳಲ್ಲಿ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಬೈಂದೂರು ಕ್ಷೇತ್ರದಲ್ಲಿ ಕಾಲು ಸಂಕಗಳ ತುರ್ತು ಅಗತ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸಮೃದ್ಧ ಬೈಂದೂರು ಟ್ರಸ್ಟ್ ಹಾಗೂ ಬೆಂಗಳೂರಿನ ಅರುಣಾಚಲಂ ಟ್ರಸ್ಟ್ ಸಹಯೋಗದಲ್ಲಿ ಈಗಾಗಲೇ ಹಲವು ಕಡೆಗಳಲ್ಲಿ ಜಾಗ ಗುರುತಿಸಿ ವಿಶೇಷ ಮಾದರಿಯಲ್ಲಿ ಕಾಲು ಸಂಕ ನಿರ್ಮಾಣ ಮಾಡಲಾಗುತ್ತಿದೆ. ಎರಡು ಕಾಲು ಸಂಕಗಳು ಶೀಘ್ರ ಬಳಕೆಗೂ ಲಭ್ಯವಾಗಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...