ಉಡುಪಿ | ಬೈಂದೂರು ಸೋಮೇಶ್ವರ, ದೊಂಬೆ ಕರಾವಳಿ ಮಾರ್ಗ ಕೆಎಸ್ಸಾರ್ಟಿಸಿ ಬಸ್ಸಿಗಾಗಿ ಪ್ರತಿಭಟನೆ

Date:

ಕಟ್ಟಡ ಕಾರ್ಮಿಕರ ಮಹಿಳಾ ಉಪಸಮಿತಿ ಮತ್ತು ಜನವಾದಿ ಮಹಿಳಾ ಸಂಘಟನೆಯ ಸಹಯೋಗದಲ್ಲಿ ಬೈಂದೂರು ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಬೈಂದೂರು, ಸೋಮೇಶ್ವರ, ದೊಂಬೆ, ಕರಾವಳಿ ಮಾರ್ಗವಾಗಿ ಶಿರೂರಿಗೆ ಸರಕಾರಿ ಬಸ್ಸು ವ್ಯವಸ್ಥೆ ಮಾಡಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ಇಂದು ಶಿರೂರು ಗ್ರಾಮ ಪಂಚಾಯತ್ ಎದುರು ಶಿರೂರು ನಾಗರಿಕರಿಂದ ಪ್ರತಿಭಟನೆ ನಡೆಯಿತು.

ಸಿಐಟಿಯು ನಾಯಕರಾದ ಸುರೇಶ್ ಕಲ್ಲಾಗರ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಸರಕಾರಿ ಬಸ್ಸಿನ ಸೇವೆ ಹಾಗೂ ಅದರಲ್ಲಿ ಬಡ ಜನರಿಗೆ ಸಿಗುವ ಸೌಲಭ್ಯಗಳನ್ನು ವಂಚಿತರಾದ ಜನರಿಗೆ ಸಿಗಬೇಕು ಎಂದು ಹೋರಾಟ ನಡೆಯುತ್ತಿದ್ದರೂ ಜಿಲ್ಲಾ ಸಾರಿಗೆ ಪ್ರಾಧಿಕಾರ ಕಾಳಜಿ ವಹಿಸುತ್ತಿಲ್ಲ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಿಗೆ ಪರಮಾಧಿಕಾರ ಇರುವುದರಿಂದ ಜನರಿಗೆ ಅನುಕೂಲವಾಗುವ ಸರಕಾರಿ ಬಸ್ಸು ಗ್ರಾಮೀಣ ಪ್ರದೇಶಗಳಿಗೆ ಆರಂಭಿಸಲು ಕ್ರಮವಹಿಸಬೇಕು ಎಂದು ಹೇಳಿದರು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶೀಲಾವತಿ ಮಾತನಾಡಿ, ಶಿರೂರು ಮಹಿಳೆಯರಿಗೆ ವಿದ್ಯಾರ್ಥಿಗಳಿಗೆ ನ್ಯಾಯ ಸಿಗದಿದ್ದರೆ ಉಡುಪಿ ಸಾರಿಗೆ ಇಲಾಖೆ ಎದುರು ಧರಣಿ ನಡೆಸಲಾಗುವುದು ಎಂದು ಹೇಳಿದರು.
ಜನವಾದಿ ಮಹಿಳಾ ಸಂಘಟನೆಯ ಬೈಂದೂರು ತಾಲೂಕು ಕಾರ್ಯದರ್ಶಿ ನಾಗರತ್ನ ನಾಡ ಮಾತನಾಡಿ, ಪ್ರವಾಸಿ ತಾಣವಾಗಿರುವ ಸೋಮೇಶ್ವರ,ಕರಾವಳಿ ಶಿರೂರುಗಳನ್ನು ಜಿಲ್ಲಾಡಳಿತ ಕಡೆಗಣಿಸುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೈಂದೂರು ಕಟ್ಟಡ ಸಂಘದ ಅಧ್ಯಕ್ಷ ಶ್ರೀ ರಾಜೀವ ಪಡುಕೋಣೆ,ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ರಾಜೇಶ್, ಸಹ ಪದಾಧಿಕಾರಿಗಳಾದ ಶ್ರೀಧರ ದೇವಾಡಿಗ ಉಪ್ಪುಂದ, ಗೊಪಾಲ ಕೃಷ್ಣ, ರೋನಿ ನಜರೆತ್ ಹಾಗೂ ಸಿಡಬ್ಲ್ಯೂಎಫ್ಐ ರಾಜ್ಯ ಸಮಿತಿ ಸದಸ್ಯ ರಮೇಶ್ ಗುಲ್ವಾಡಿ ಉಪಸ್ಥಿತರಿದ್ದರು. ಜನವಾದಿ ಜಿಲ್ಲಾ ಕಾರ್ಯದರ್ಶಿ ಶೀಲಾವತಿ, ಕಟ್ಟಡ ಮಹಿಳಾ ಉಪಸಮಿತಿಯ ನಾಗರತ್ನ ನಾಡ, ಪದ್ಮಾವತಿ ಶಿರೂರು, ಶಾಂತಾ ಉಪ್ಪುಂದ ಮತ್ತು ನಾಗರತ್ನ ಪಡುವರಿ ನೇತೃತ್ವ ವಹಿಸಿದ್ದರು.

ಶಿರೂರು ಪಂಚಾಯತ್ ಉಪಾಧ್ಯಕ್ಷರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಜೊತೆ ಮನವಿ ಸ್ವೀಕರಿಸಿ ಪಂಚಾಯತ್ ಮೂಲಕ ನಿರ್ಣಯ ಅಂಗೀಕರಿಸಿ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು. ಸಾರಿಗೆ ಇಲಾಖೆಯ ಅಧಿಕಾರಿಗಳೂ ಮನವಿ ಸ್ವೀಕರಿಸಿ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುವ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...