ಸಮಾಜದಲ್ಲಿ ದಿನನಿತ್ಯ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಲೇ ಇವೆ. ಆದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುತ್ತಿಲ್ಲ. ಇದನ್ನು ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟವು ಇದೇ ಅಕ್ಟೋಬರ್ 29ರಂದು ತಾಳಿಕೋಟೆ ಬಂದ್ಗೆ ಕರೆ ನೀಡಿದೆ.
ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಗವಾಯಿ ಅವರ ಮೇಲಿನ ಅಪಮಾನ, ದಲಿತ ಮಹಿಳೆ ಬಸಮ್ಮ ಚಲವಾದಿ ಅತ್ಯಾಚಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ತಾಳಿಕೋಟೆಯನ್ನು ಸಂಪೂರ್ಣ ಬಂದ್ ಮಾಡಲು ಸಂಘಟನೆಯ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಬಂದ್ನ ಸಂಪೂರ್ಣ ಯಶಸ್ವಿಗೆ ಪಟ್ಟಣದ ಎಲ್ಲಾ ನಾಗರಿಕರು ಸಹಕರಿಸಬೇಕೆಂದು ಮುಖಂಡರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ವಿಜಯಪುರ | ಕಿತ್ತೂರು ರಾಣಿ ಚನ್ನಮ್ಮನ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕ: ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ
ಸಭೆಯಲ್ಲಿ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟದ ಗೌರವಾಧ್ಯಕ್ಷ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್ ಬಿ ಕಟ್ಟಿಮನಿ, ಅಧ್ಯಕ್ಷ ಮುತ್ತಪ್ಪ ಚಮಲಾಪುರ, ಡಿಎಸ್ಎಸ್ ವಿಭಾಗೀಯ ಸಂಚಾಲಕ ದೇವೇಂದ್ರ ಹಾದಿಮನಿ, ಒಕ್ಕೂಟದ ಪದಾಧಿಕಾರಿಗಳಾದ ಜೈ ಭೀಮ ಮುತ್ತಗಿ, ಮಹೇಶ ಛಲವಾದಿ, ಸಿದ್ದಪ್ಪ ಕಟ್ಟಿಮನಿ, ರೇವಣಪ್ಪ ದಲ್ಲಾಳಿ, ಮಾಳಪ್ಪ ಮಾಳಳ್ಳಿ, ಕಾಶೀನಾಥ ಕಾರಾಗನೂರು, ಶಂಕರ ಪಡಸಾಲಿ, ಗುರು ಪ್ರಸಾದ ಬಿ ಜೆ, ಮಲ್ಲು ನಾಟಿಕರ, ಬಸವರಾಜ ಮಾದರ, ಗೋಪಾಲ ಕಟ್ಟಿಮನಿ, ಬಸವರಾಜ ಬಿಸನಾಳ, ಲತಫಾ ಬಿಳಗಿ, ಶರಣು ತಳವಾರ, ಸಿದ್ದಪ್ಪ ಕಟ್ಟಿಮನಿ, ಶರಣು ರಕ್ಕಸಗಿ, ದಲಿತ ಸಮಾಜದ ಮುಖಂಡರು ಹಾಗೂ ಅಂಬೇಡ್ಕರ್ ಅನುಯಾಯಿಗಳು ಇದ್ದರು.





