ಬಾಗಲಕೋಟೆ | ನಾಗರ ಪಂಚಮಿಯಂದು ‘ಬಸವ ಪಂಚಮಿ’ ಆಚರಿಸಲು ಕರೆ

Date:

ನಾಗರ ಪಂಚಮಿಯ ದಿನ ಬಹುತೇಕ ಜನರು ಹುತ್ತಕ್ಕೆ ಅಥವಾ ನಾಗ ಪ್ರತಿಮೆಗಳಿಗೆ ಹಾಲೆರದು ತಮ್ಮ ಮೌಢ್ಯತೆಯನ್ನು ಮೆರೆಯುತ್ತಿದ್ದಾರೆ. ಆದರೆ, ಹಾವು ಮಾಂಸಾಹಾರಿ, ಸರಿಸೃಪ ಪ್ರಾಣಿ, ಹಾಲು ಅದರ ಆಹಾರವಲ್ಲ. ನಾಗರ ಹಾವಿನ ಹುತ್ತಕ್ಕೆ ಹಾಲೆರೆಯುವದರಿಂದ ಪ್ರಯೋಜನಕ್ಕಿಂತ ಹಾನಿಯೇ ಹೆಚ್ಚೆಂದು ಸಾಬೀತಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ಜಿಲ್ಲಾ ಅಧ್ಯಕ್ಷ ಶ್ರೀಶೈಲ ಆಂಟಿ ಹೇಳಿದರು.

ಬಾಗಲಕೋಟೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವೈಚಾರಿಕ ರಾಜಕಾರಣಿ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಇದೇ ಆಗಸ್ಟ್ 21ರಂದು ನಾಗರ ಪಂಚಮಿ ಹಬ್ಬವನ್ನು ʼಬಸವ ಪಂಚಮಿ’ಯನ್ನಾಗಿ ರಾಜ್ಯಾದ್ಯಂತ ಆಚರಿಸಬೇಕು” ಎಂದು ಹೇಳಿದರು.

“ವೈಜ್ಞಾನಿಕವಾಗಿ ಕರ್ನಾಟಕದಲ್ಲಿ ಪ್ರತಿವರ್ಷ ನಲವತ್ತು ಸಾವಿರಕ್ಕಿಂತ ಹೆಚ್ಚು ಮಕ್ಕಳು ಅಪೌಷ್ಠಿಕತೆಯಿಂದ ಮರಣ ಹೊಂದುತ್ತಿದ್ದಾರೆ. ಅಲ್ಲದೆ ಲಕ್ಷಾಂತರ ಮಕ್ಕಳು ಅಪೌಷ್ಠಿಕತೆ ಸೇರಿದಂತೆ ಬೇರೆ ಬೇರೆ ರೋಗಗಳಿಂದ ಬಳಲುತ್ತಿದ್ದಾರೆ. ಅದಕ್ಕಾಗಿ ನಾಗರ ಪಂಚಮಿ ಹಬ್ಬದ ನಿಮಿತ್ತ ಲಕ್ಷಾಂತರ ಲೀಟರ್ ಹಾಲನ್ನು ಪೋಲು ಮಾಡದೇ ಬಡ ಮಕ್ಕಳಿಗೆ, ರೋಗಿಗಳಿಗೆ ನೀಡುವುದರ ಮುಖಾಂತರ ವ್ಯರ್ಥವಾಗುತ್ತಿರುವ ಪೌಷ್ಠಿಕ ಆಹಾರವು ಪೋಲಾಗುವುದನ್ನು ತಪ್ಪಿಸಬೇಕಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಗೆ ಚಾಲನೆ ನೀಡಿದ ಸಚಿವರು

“ತಮ್ಮ ಮುಖಾಂತರ ಜಿಲ್ಲೆಯ ಜನತೆಗೆ ನಾಗರ ಪಂಚಮಿಯ ಬದಲಾಗಿ ಬಸವ ಪಂಚಮಿಯನ್ನು ಆಚರಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇವೆ. ಜಿಲ್ಲೆಯ ಹಲವು ಪ್ರಗತಿಪರ ಸಂಘದ ಮುಖಂಡರು, ಪ್ರಗತಿಪರ ಸ್ವಾಮೀಜಿಗಳು, ಬುದ್ಧಿಜೀವಿಗಳು, ಪ್ರಜ್ಞಾವಂತ ಜನರು ತಾವಿರುವ ಸ್ಥಳಗಳಲ್ಲಿ ನಾಗರ ಪಂಚಮಿಯನ್ನು ‘ಬಸವ ಪಂಚಮಿ’ಯನ್ನಾಗಿ ಆಚರಿಸಬೇಕು” ಎಂದು ಕರೆ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್ ಕಲಾದಗಿ, ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾ ಮುಖಂಡರುಗಳಾದ ಈರಪ್ಪ ಸುತಾರ್, ಜಯರಾಜ್ ಹಾದಿಕಾರ ಹಾಗೂ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು, ಪ್ರಗತಿಪರ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...