SCSP/TSP ಯೋಜನೆಯ ಹಣವನ್ನ ಗ್ಯಾರೆಂಟಿಗಳಿಗೆ ಬಳಸುವುದು ರದ್ದುಗೊಳಿಸಿ : ಒಕ್ಕೂಟ

Date:

“ಪ್ರಸ್ತುತ ಸಾಲಿನ ರಾಜ್ಯ ಬಜೆಟ್‍ನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆ (TSP) ಒದಗಿಸಿದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವುದನ್ನ ಕೂಡಲೇ ನಿಲ್ಲಿಸಬೇಕು. ಈ ಕ್ರಮವನ್ನು ರದ್ದುಗೊಳಿಸಬೇಕು” ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಬಸವರಾಜ್ ಕೌತಾಳ್ ಆಗ್ರಹಿಸಿದ್ದಾರೆ.

ಸರ್ಕಾರದ ಕ್ರಮವನ್ನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ರಾಜ್ಯ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳು ಜನರ ಪರವಾಗಿವೆ. 2013ರಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆ ಜಾರಿಗೆ ಬಂದಿದೆ. ಅವತ್ತಿನಿಂದ ಇಲ್ಲಿಯವರೆಗೂ ಕೂಡ ಈ ಕಾಯ್ದೆ ನಾನಾ ಇಲಾಖೆಗಳಲ್ಲಿ ಜಾರಿಯಲ್ಲಿದೆ. 2013 ರಿಂದ 2024ರವೆಗೂ ಈ ಯೋಜನೆಗೆ ಪ್ರತಿವರ್ಷ ಸಾವಿರಾರೂ ಕೋಟಿ ನಿಗದಿ ಮಾಡುತ್ತಿದ್ದಾರೆ. 2024-2025ನೇ ಸಾಲಿನಲ್ಲಿ 39 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದ್ದರು. ಈ ಅನುದಾನದಲ್ಲಿ ವಿಶೇಷವಾಗಿ 5 ಗ್ಯಾರೆಂಟಿ ಯೋಜನೆಗಳಿಗೆ 14 ಸಾವಿರ ಕೋಟಿ ರೂಪಾಯಿಯನ್ನು ಬಳಸಿಕೊಂಡು ಈ ಕಾಯ್ದೆಯ ಮೂಲ ಆಶಯಗಳನ್ನ ನಾಶ ಮಾಡಿದ್ದಾರೆ. ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೋಸ್ಕರ ಈ ಕಾಯ್ದೆ ಬಂದಿದೆ. ಆದರೆ, ಈಗ ಇದು ದುರ್ಬಳಕೆಯಾಗುತ್ತಿದೆ. ಈ ಕಾಯ್ದೆಯಲ್ಲಿ ಆಗುತ್ತಿರುವ ದುರ್ಬಳಕೆಯನ್ನ ನಿಲ್ಲಿಸಬೇಕು” ಎಂದರು.

“ಈ ಕಾಯ್ದೆಯ ಹಣವನ್ನ ಗ್ಯಾರಂಟಿಗಳಿಗೆ ಬಳಕೆ ಮಾಡಬಾರದು. ಈ ಯೋಜನೆಗಾಗಿ ಮೀಸಲಿಟ್ಟಿದ್ದ ಹಣದ ಬಗ್ಗೆ ಸಮಗ್ರ ಅಧ್ಯಯನ, ಮರುಮೌಲ್ಯಮಾಪನವಾಗಬೇಕು. ಈ ಹಣದಿಂದ ಈ ಸಮುದಾಯಕ್ಕೆ ಎಷ್ಟರ ಮಟ್ಟಿಗೆ ಪಾಲು ಸಿಕ್ಕಿದೆ. ಈ ಹಣದಿಂದ ಈ ಸಮುದಾಯ ಅಭಿವೃದ್ಧಿ ಆಗಿದೆಯಾ? ಎಂಬ ಬಗ್ಗೆ ತಿಳಿದುಕೊಳ್ಳಬೇಕು. ಈ ಬಗ್ಗೆ ಮರುಮೌಲ್ಯಮಾಪನ ಮಾಡಿ ಶ್ವೇತಪತ್ರ ಹೊರಡಿಸಬೇಕು. 25 ರಿಂದ 30% ಹಣವನ್ನ ಎಸ್‌ಇಪಿನಲ್ಲಿ ಉನ್ನತ ಶಿಕ್ಷಣ, ಪ್ರಾಥಮಿಕ ಶಿಕ್ಷಣಕ್ಕೆ, ಹಾಸ್ಟೆಲ್‌ಗಳಿಗೆ ಮೀಸಲಿಟ್ಟು ಖರ್ಚು ಮಾಡಬೇಕು. ವಿದ್ಯಾರ್ಥಿಗಳಿಗೆ ಸರಿಯಾಗಿ ಸ್ಕಾಲರ್‌ಶಿಪ್ ಸಿಗುತ್ತಿಲ್ಲ. ಇನ್ನಿತರೆ ಹಲವಾರು ನ್ಯೂನ್ಯತೆಗಳು ಇವೆ. ಇದನ್ನ ಖಂಡಿಸುತ್ತೇವೆ. ಈ ಕಾಯ್ದೆಯ ಆಶಯ ಇರುವುದೇ, ಕಟ್ಟಕಡೆಯ ಸಮುದಾಯಗಳು ಮುಖ್ಯವಾಹಿನಿಗೆ ಬರಬೇಕೆಂಬ ದೃಷ್ಟಿಯಲ್ಲಿ ಈ ಕಾಯ್ದೆಯಿದೆ. ಕಟ್ಟಕಡೆಯ ವ್ಯಕ್ತಿಗಳು ಮುಖ್ಯವಾಹಿನಿಗೆ ಬರಬೇಕೆಂಬುದು ಈ ಕಾಯ್ದೆಯ ಉದ್ದೇಶವಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಲಿಸುತ್ತಿದ್ದ ಕಾರಿಗೆ ಬೆಂಕಿ; ನಾಲ್ವರು ಅಪಾಯದಿಂದ ಪಾರು

“ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯೇ ಈ ಕಾಯ್ದೆಯ ಮುಖ್ಯ ಉದ್ದೇಶ. ಕಳೆದ 10 ವರ್ಷದಲ್ಲಿ 2 ಲಕ್ಷದ 20 ಸಾವಿರ ಕೋಟಿಯನ್ನ ಪರಿಶಿಷ್ಟರ ಅಭಿವೃದ್ಧಿಗೆ ಹಂಚಿಕೆ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ಇಡೀ ರಾಜ್ಯದಲ್ಲಿ ಒಂದು ಕೋಟಿ 8 ಲಕ್ಷ ಜನರ ಅಭಿವೃದ್ಧಿ ಶೂನ್ಯವಾಗಿದೆ. 101 ಎಸ್ ಸಿ, 48-52 ಎಸ್ ಟಿ ಸಾಮಾನ್ಯ ಜನರು ಸಾಲ, ಉದ್ಯೋಗ ಪಡೆದುಕೊಳ್ಳಲೂ ಸಾಧ್ಯವಾಗಿಲ್ಲ. ಎಸ್‌ ಸಿ / ಎಸ್‌ ಟಿಯಲ್ಲಿ ನಿರುದ್ಯೋಗ ಜನರಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಎಲ್ಲವನ್ನೂ ಸರಿಪಡಿಸಿ ಸಮಾಜದ ಅಭಿವೃದ್ಧಿ ಮಾಡಬೇಕು” ಎಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ ನರಸಿಂಹಮೂರ್ತಿ ಹೇಳಿದರು.

ಎಸ್‌ಸಿಎಸ್‌ಪಿ

“ಎಸ್‌ಸಿಎಸ್‌ಪಿ/ ಟಿಎಸ್‌ಪಿ ಹಣ ಪಡೆದು ಗ್ಯಾರಂಟಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗ್ಯಾರೆಂಟಿ ಯೋಜನೆಗಳಿಗೆ ಈ ಹಣ ಬಳಕೆ ಮಾಡಿಕೊಳ್ಳುತ್ತಿರುವುದು ಯಾಕೆ ಎಂಬುದು ತಿಳಿಯುತ್ತಿಲ್ಲ. ಇದರ ಅವಶ್ಯಕತೆ ಏನು ಎಂಬುದು ತಿಳಿಯುತ್ತಿಲ್ಲ. ಎಸ್‌ಸಿ/ಎಸ್‌ಟಿ ಮಹಿಳೆಯರು ಉದ್ಯೋಗ ಇಲ್ಲದೇ, ಮನೆಯಲ್ಲಿಯೇ ಉಳಿದಿದ್ದಾರೆ. ಈ ಹಣ ಬಳಕೆ ಮಾಡಿಕೊಂಡು ಎಸ್‌ಸಿ/ಎಸ್‌ಟಿ ಸಮುದಾಯದವರಿಗೆ ಉದ್ಯೋಗ ಕೊಡಿಸುವ ಯೋಜನೆ ಮಾಡಬೇಕು. ಹಲವು ಮಕ್ಕಳಿಗೆ ಸ್ಕಾಲರ್‌ಶಿಪ್ ಹಣ ಬಂದಿಲ್ಲ” ಎಂದು ಸ್ಲಂ ಜನಾಂದೋಲನ ಮಹಾಲಕ್ಷ್ಮೀ ಹೇಳಿದರು.

ಹಕ್ಕೊತ್ತಾಯಗಳು

೧.ಎಸ್‌ಸಿಎಸ್‌ಪಿ/ ಟಿಎಸ್‌ಪಿ ಯೋಜನೆಯ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸುವುದನ್ನ ಕೂಡಲೇ ರದ್ದುಗೊಳಿಸಬೇಕು.
೨.ಎಸ್‌ಸಿಎಸ್‌ಪಿ/ ಟಿಎಸ್‌ಪಿ ಕಾಯ್ದೆಯ ಕಲಂ7ರಡಿಯನ್ನ ರದ್ದುಪಡಿಸಿದಂತೆ 7ಬಿ ಮತ್ತು 7ಸಿಗೆ ಕೂಡಾ ತಿದ್ದುಪಡಿ ಮಾಡಿ ರದ್ದುಪಡಿಸಬೇಕು.
೩.ಅನುಚ್ಛೇದ 46ರಂತೆ ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಬಳಸಬೇಕೆಂಬ ಸಂವಿಧಾನದ ಆಶಯವನ್ನ ಜಾರಿಗೊಳಿಸಬೇಕು.
೪.2014ರಿಂದ 2025ರವೆಗೆ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಯೋಜನೆಯ ಅಡಿಯಲ್ಲಿ ಈಗಾಗಲೇ ಖರ್ಚಾಗಿರುವ ಹಣಕ್ಕೆ ಮೌಲ್ಯಮಾಪನ ಮಾಡಿ ಅಭಿವೃದ್ಧಿಯ ಶ್ವೇತಪತ್ರ ಹೊರಡಿಸಬೇಕು.
೫.ಎಲ್ಲ ಇಲಾಖೆಗಳ ಅಡಿಯಲ್ಲಿ ಬರುವ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಹಣವನ್ನು ಪರಿಶಿಷ್ಠರ ಜನಸಂಖ್ಯೆಗೆ ಅನುಗುಣವಾಗಿ ವರ್ಗೀಕರಿಸಿ ಸಮುದಾಯದ ಅಭಿವೃದ್ಧಿ ಯೋಜನೆಗಳಿಗೆ ಹಂಚಿ ಜಾರಿಗೆ ತರಬೇಕು.
೬.ಪರಿಶಿಷ್ಟರ ಅಭಿವೃದ್ಧಿಗೆಂದು ನೇಮಕವಾಗಿರುವ ಅಭಿವೃದ್ಧಿ ನಿಗಮ ಮತ್ತು ಮಂಡಳಿಗಳಿಗೆ ಈಗಿರುವ ಜನಸಂಖ್ಯೆಗನುಗುಣವಾಗಿ ಅನುದಾನ ಹಂಚಿಕೆಯಾಗಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...