ಬಳ್ಳಾರಿ | ಪ್ರೊ. ಮೇತ್ರಿ ನೇಮಕಾತಿ ರದ್ದು ಹಿನ್ನೆಲೆ: ವಿಜಯನಗರ ಕೃಷ್ಣದೇವರಾಯ ವಿವಿ ಕುಲಪತಿಯಾಗಿ ಡಾ ಎಂ ಮುನಿರಾಜು

Date:

ವಿಜಯನಗರ ಕೃಷ್ಣದೇವರಾಯ ವಿವಿಯ ಕುಲಪತಿಯಾಗಿ ಪ್ರೊ. ಮೇತ್ರಿಯವರನ್ನು ಮಾಡಿದ್ದ ನೇಮಕಾತಿಯನ್ನು ಹೈಕೋರ್ಟ್‌ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ನೂತನ ಕುಲಪತಿಯಾಗಿ ಡಾ ಎಂ ಮುನಿರಾಜು ಅವರನ್ನು ನೇಮಕ ಮಾಡಲಾಗಿದೆ.

ಬಳ್ಳಾರಿ ಮಹಾನಗರದ ಹೊರ ವಲಯದ ಅಲೀಪುರ ಸಮೀಪದಲ್ಲಿರುವ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿವಿಗೆ ಈ ಹಿಂದೆ ಪ್ರೊ.ಮೇತ್ರಿಯವರನ್ನು ಕುಲಪತಿಯಾಗಿ ನೇಮಕಾತಿ ಮಾಡಲಾಗಿತ್ತು. ಈ ನೇಮಕಾತಿಯ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಜುಲೈ 24, 2024ರಂದು ಪ್ರೊ.ಮೇತ್ರಿಯವರ ನೇಮಕಾತಿ ಆದೇಶವನ್ನು ರದ್ದುಪಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮುನಿರಾಜು 1
ನೂತನ ಕುಲಪತಿ ಡಾ ಎಂ ಮುನಿರಾಜು

ಪ್ರೊ.ಮೇತ್ರಿಯವರ ನೇಮಕಾತಿ ರದ್ದಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಕುಲಪತಿ ಹುದ್ದೆಗೆ ಬೆಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಎಂ.ಮುನಿರಾಜು ಅವರನ್ನು ನೇಮಕಗೊಳಿಸಲಾಗಿದೆ.

ರಾಜ್ಯ ಸರ್ಕಾರದ ಶೋಧ ಸಮಿತಿ ಮೂಲಕ ಅಂತಿಮಗೊಳಿಸಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸಿ, ಪರಿಗಣಿಸಲು ಹೈ ಕೋರ್ಟ್ ಸೂಚಿಸಿದ್ದರಿಂದ, ಮೆರಿಟ್, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ರಾಜ್ಯ ಸರ್ಕಾರದ ಅಭಿಪ್ರಾಯದೊಂದಿಗೆ ಡಾ.ಎಂ.ಮುನಿರಾಜು ಅವರನ್ನು ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಬೆಂಗಳೂರು ವಿವಿಯಲ್ಲಿ ಹಂಗಾಮಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದ ಡಾ. ಮುನಿರಾಜು, ಈಗ ಬಳ್ಳಾರಿಯ ನೂತನ ಕುಲಪತಿಯಾಗಿ ನೇಮಕಗೊಂಡಿದ್ದಾರೆ. ಈ ಆದೇಶದ ದಿನಾಂಕದಿಂದ 4 ವರ್ಷದ ಅವಧಿ ಅಥವಾ 67 ವರ್ಷ ಪೂರೈಸುವ ತನಕ ಬಳ್ಳಾರಿ ವಿವಿ ಕುಲಪತಿಗಳಾಗಿ ಡಾ. ಮುನಿರಾಜು ಸೇವೆ ಸಲ್ಲಿಸಲಿದ್ದಾರೆ. ಕುಲಪತಿಗಳಾಗಿ ಡಾ. ಮುನಿರಾಜು ಇಂದು(ಆಗಸ್ಟ್ 16) ಅಧಿಕಾರ ವಹಿಸಿಕೊಳ್ಳಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...