ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ | ಡಿಸಿಎಂ ಡಿಕೆ ಶಿವಕುಮಾರ್‌ಗೆ ರಿಲೀಫ್​

Date:

  • ಹೈಕೋರ್ಟ್‌ನ ಏಕಸದಸ್ಯ ಪೀಠ ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿತು
  • ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿ ಆದೇಶ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ರಿಲೀಫ್​ ಸಿಕ್ಕಿದ್ದು, ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ.

ಕರ್ನಾಟಕ ಹೈಕೋರ್ಟ್ ಈ ಹಿಂದೆ ಪ್ರಕರಣದಲ್ಲಿ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವು ಮಾಡಬೇಕೆಂದು ಸಿಬಿಐ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇಂದು (ಜೂನ್ 2, ಶುಕ್ರವಾರ) ಹೈಕೋರ್ಟ್‌ನ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿ ಆದೇಶ ನೀಡಿದೆ.

ಈಗಾಗಲೇ ಪ್ರಕರಣದ ವಿಚಾರಣೆ ಮತ್ತೊಂದು ಪೀಠ ನಡೆಸಿದ್ದ ಹಿನ್ನೆಲೆ ಯಾವ ಪೀಠದಲ್ಲಿ ವಿಚಾರಣೆ ನಡೆಯಬೇಕೆಂಬ ಬಗ್ಗೆ ಸಿಜೆ ಆದೇಶ ಅಗತ್ಯ. ಹೀಗಾಗಿ ಅರ್ಜಿ ಮುಖ್ಯ ನ್ಯಾಯಮೂರ್ತಿಗಳ ಅವಗಾಹನೆಗೆ ವರ್ಗಾವಣೆ ಮಾಡಲಾಗಿದೆ. ಸಿಜೆ ಸೂಚನೆ ನಂತರ ಹೈಕೋರ್ಟ್ ಮತ್ತೆ ವಿಚಾರಣೆ ನಡೆಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸ್ತಿಪಟುಗಳ ಕಣ್ಣೀರು ಮತ್ತು ಪ್ರಚಂಡ ಪ್ರಧಾನಿಯ ಮೌನ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮೇ 30ಕ್ಕೆ ವಿಸ್ತರಣೆ ಮಾಡಲಾಗಿತ್ತು. ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತ್ತು. ಈಗ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ನಡೆದಿದೆ.

ಇನ್ನು ಸಿಬಿಐ ಪರವಾಗಿ ವಾದ ಮಾಡಿಸಿದ್ದ ವಕೀಲ ಪಿ.ಪ್ರಸನ್ನ ಕುಮಾರ್, ಸಿಬಿಐ ತನಿಖೆಗೆ ಶಿಫಾರಸು ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು ಎಂದು ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಮೂಲಕ ಮನವಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...