ಧರ್ಮಸ್ಥಳ ಸರಣಿ ಅತ್ಯಾಚಾರ ಕೊಲೆ ಪ್ರಕರಣ | ಎಫ್‌ಐಆರ್‌ ದಾಖಲು, ಸೂಕ್ತ ಕಾನೂನು ಕ್ರಮ: ದ.ಕ. ಜಿಲ್ಲಾ ಎಸ್‌ಪಿ

Date:

ಧರ್ಮಸ್ಥಳ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯವರಿಗೆ ದೂರನ್ನು ಸಲ್ಲಿಸಿದ್ದಾರೆ. ಈ ಹಿಂದೆಯೇ ಹಲವು ಅಪರಾಧ ಕೃತ್ಯಗಳು ನಡೆದಿದೆ. ಜೀವ ಬೆದರಿಕೆಯಿಂದ ತಾನೂ ಮೃತದೇಹಗಳ ವಿಲೇವಾರಿ ಮಾಡಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡುತ್ತಿದೆ. ಕಾನೂನು ರಕ್ಷಣೆ ದೊರೆತರೆ ವಿಲೇವಾರಿ ಮಾಡಿದ ಮೃತದೇಹಗಳನ್ನು ತೋರಿಸುವುದಾಗಿ ವ್ಯಕ್ತಿ ಹೇಳಿದ್ದರು.

ಇದನ್ನು ಓದಿದ್ದೀರಾ? ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣ: ಎಫ್‌ಐಆರ್ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದೂರನ್ನು ಪರಿಗಣಿಸಿದ ಧರ್ಮಸ್ಥಳ ಪೊಲೀಸರು ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶಕ್ಕೆ ಸಂಬಂಧಿಸಿದ BNS 211ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಈ ಎಫ್‌ಐಆರ್ ಕುರಿತು ಪ್ರಕಟಣೆ ಹೊರಡಿಸಿರುವ ಜಿಲ್ಲಾ ಎಸ್‌ಪಿ ಡಾ. ಅರುಣ್ ಕುಮಾರ್, “ಪ್ರಕರಣ ದಾಖಲಿಸಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗುರುವಾರ ತನ್ನ ಕಚೇರಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿ ದೂರು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ದೂರುದಾರರು ತನ್ನ ಹೆಸರು ಮತ್ತು ಮಾಹಿತಿಯನ್ನು ಗೌಪ್ಯವಾಗಿಡುವಂತೆ ಮನವಿ ಮಾಡಿದ್ದಾರೆ. ಅದರಿಂದಾಗಿ ಅವರ ಮಾಹಿತಿಗಳನ್ನು ನೀಡಲಾಗುವುದಿಲ್ಲ” ಎಂದು ಎಸ್‌ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...