ಬಾಗಲಕೋಟೆ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2.10 ಕೋಟಿ ನಗದು ವಶ

Date:

  • ಸೂಕ್ತ ದಾಖಲೆ ಒದಗಿಸಲು ಕಾಲವಕಾಶ ನೀಡಿದ ಅಧಿಕಾರಿಗಳು
  • ತಾವು ಸಹಕಾರಿ ಬ್ಯಾಂಕಿನವರು ಎಂದ ಕಾರಿನಲ್ಲಿದ್ದವರು

ಬಾಗಲಕೋಟೆ ಜಿಲ್ಲೆ ಜಮಖಂಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುನ್ನೂರು ಚೆಕ್‌ಪೋಸ್ಟ್‌ನಲ್ಲಿ ಸಂಶಯಾಸ್ಪದವಾಗಿ ಸಾಗಿಸುತ್ತಿದ್ದ ಮತ್ತು ದಾಖಲೆ ಇಲ್ಲದ ₹2.10 ಕೋಟಿ ನಗದನ್ನು ಅಧಿಕಾರಿಗಳು  ವಶಪಡಿಸಿಕೊಂಡಿದ್ದಾರೆ.

ಜಮಖಂಡಿಯ ಹುನ್ನೂರು ಚೆಕ್ ಪೋಸ್ಟನಲ್ಲಿ ಕಾರ್ಯನಿರತ ಸ್ಟಾಟಿಸ್ಟಿಕಲ್ ಸರ್ವೆನೆಸ್ಟ್ ತಂಡದ ಸದಸ್ಯರು ತಪಾಸಣೆ ನಡೆಸುತ್ತಿರುವ ವೇಳೆಯಲ್ಲಿ ಅನುಮಾನಾಸ್ಪದವಾಗಿ ಬಂದ ವಾಹನವನ್ನು ತಡೆದು ತಪಾಸಣೆ ನಡೆಸಿದ ವೇಳೆ ದಾಖಲೆ ಇಲ್ಲದ ಅಂದಾಜು ₹2.10 ಕೋಟಿ ಹಣ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ ಸುನೀಲ್‍ಕುಮಾರ ತಿಳಿಸಿದ್ದಾರೆ.

ಕಾರಿನಲ್ಲಿ ಇದ್ದವರು ತಾವು ಸಹಕಾರಿ ಬ್ಯಾಂಕಿಗೆ ಸಂಬಂಧಿಸಿದವರು ಎಂದು ತಿಳಿಸಿದ್ದಾರೆ. ಹಣದ ಕುರಿತು ಒದಗಿಸಿರುವ ದಾಖಲೆಗಳು ಪರಿಪೂರ್ಣ ವೆಂದು ಪರಿಗಣಿಸಲು ಸಾಧ್ಯವಾಗದ ಹಿನ್ನೆಲೆ ಅವರಿಗೆ ದಾಖಲೆ ಒದಗಿಸಲು ಅವಕಾಶ ನೀಡಿ, ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೆಕ್‍ಪೋಸ್ಟ್ ನಲ್ಲಿ ದೊರೆತಿರುವ ಹಣದ ಮಾಲೀಕರು ಒಂದು ಸೌಹಾರ್ದ ಕ್ರೆಡಿಟ್ ಸಹಕಾರಿ ಲಿಮಿಟೆಡ್‍ಗೆ ಸಂಬಂಧಿಸಿದವರಾಗಿದ್ದು, ಅವರು ಹಿಪ್ಪರಗಿ, ಸತ್ತಿ, ಅಥಣಿ, ಬನಹಟ್ಟಿ ಹಾಗೂ ರಬಕವಿ ಬೇರೆ ಬೇರೆ ಶಾಖೆಗಳಿಗೆ ಹಣ ರವಾನಿಸುತಿರುವುದಾಗಿ ಮಾಹಿತಿ ನೀಡಿದ್ದಾರೆ.

ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುವ ವೇಳೆ ನಿಗದಿತ ನಮೂನೆಯಲ್ಲಿ ದಾಖಲೆಗಳು ಇಲ್ಲದೆ ಇರುವುದಕ್ಕೆ ಮತ್ತು ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಸಾಗಾಣಿಕೆಗೆ ಬಳಸುವ ಸಂಶಯ ಕಂಡು ಬಂದಿರುವುದರಿಂದ ಜಿಲ್ಲಾಮಟ್ಟದ ಸಮಿತಿ ನೇತೃತ್ವದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...