ಜಾತಿ ಗಣತಿ | ತುಮಕೂರು ರಾಜ್ಯಕ್ಕೆ ಎರಡನೇ ಸ್ಥಾನ : ಡಾ. ಜಿ. ಪರಮೇಶ್ವರ

Date:

ರಾಜ್ಯ ಸರ್ಕಾರದ ಆದೇಶದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ರಾಜ್ಯದಾದ್ಯಂತ ಪ್ರಾರಂಭವಾಗಿದ್ದು  ತುಮಕೂರು ಜಿಲ್ಲೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡುವಲ್ಲಿ  ರಾಜ್ಯದಲ್ಲಿ 2ನೇ ಸ್ಥಾನದಲ್ಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಒಟ್ಟು 6544 ಬ್ಲಾಕ್ ಗಳಲ್ಲಿ, ಒಟ್ಟು 7,55,483 ಮನೆಗಳನ್ನು ಒಳಗೊಂಡಂತೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಬೆರೆ ಜಿಲ್ಲೆಗಳಿಗೆ ಹೋಲಿಸಿದರೆ ತುಮಕೂರಿನಲ್ಲಿ ವೇಗವಾಗಿ ನಡೆಯುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಸಾಮಾಜಿಕ , ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ತಹಶೀಲ್ದಾರರು ಹಾಗೂ ಇಓಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದ್ದು, ಇವರನ್ನು ಬೇರೆ ಯಾವುದೇ ಇತರೆ ಕೆಲಸಗಳನ್ನು ವಹಿಸಿರುವುದಿಲ್ಲ. ಅಕ್ಟೋಬರ್ 7 ರೊಳಗೆ ತುಮಕೂರು ಜಿಲ್ಲೆಯ 755483 ಮನೆಗಳ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 11,86,000 ಮನೆಗಳ ಪೈಕಿ 2,51,000 ಮನೆಗಳ ಸಮೀಕ್ಷೆ ಪೂರ್ಣಗೊಳಿಸಿ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ 12285ಬ್ಲಾಕ್ ಗಳಲ್ಲಿ ಸಮೀಕ್ಷೆ ನಡೆಯಲ್ಲಿದ್ದು, ಸಮೀಕ್ಷೆಗೆ ಶಾಲಾ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ಜಿಲ್ಲೆಯಲ್ಲಿ ಪ್ರಸ್ತುತ ಚಿಕ್ಕನಾಯಕನಹಳ್ಳಿ 13125, ಗುಬ್ಬಿ 2055, ಕೊರಟಗೆರೆ 10000, ಕುಣಿಗಲ್ 14000, ಮಧುಗಿರಿ 13000, ಶಿರಾ 15000, ತಿಪಟೂರು17000, ಪಾವಗಡ 10000, ತುರುವೇಕೆರೆ 10000, ತುಮಕೂರು 26000 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 1,59, 555 ಮನೆಗಳ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದೆ ಎಂದರು.

ತುಮಕೂರು  ಜಿಲ್ಲೆಯಲ್ಲಿ 6537 ಗಣತಿದಾರರನ್ನು ನೇಮಕ ಮಾಡಲಾಗಿದ್ದು, ಒಂದೇ ದಿನದಲ್ಲಿ 73910 ಮನೆಗಳಿಗೆ ಗಣತಿದಾರರು ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.ಸಮೀಕ್ಷೆ ಪ್ರಾರಂಭದಲ್ಲಿ ತಾಂತ್ರಿಕ ತೊಂದರೆಗಳ ಹಿನ್ನೆಲೆಯಲ್ಲಿ ಸಮೀಕ್ಷಾ ಆಪ್ ನಲ್ಲಿ ಪ್ರಸ್ತುತ 3.6 ಆವೃತ್ತಿ ಅಪ್ಡೇಟ್ ಮಾಡಲಾಗಿದ್ದು, ಪ್ರಸ್ತುತ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲದೆ ಸಮೀಕ್ಷೆ ವೇಗವಾಗಿ ನಡೆಯುತ್ತಿದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...