ಚಿಕ್ಕಬಳ್ಳಾಪುರ | ಜಾತಿ ಜನಗಣತಿ; ಕಾಲಂ 61ರಲ್ಲಿ ಮಾದಿಗ ಎಂದು ನಮೂದಿಸಿ; ಸಿದ್ದರಾಜು ಸ್ವಾಮೀಜಿ

Date:

ಮೇ 5ರ ಸೋಮವಾರದಿಂದ ಜಾತಿ ಜನಗಣತಿ ಆರಂಭವಾಗಲಿದ್ದು, ಮಾದಿಗ ಸಮುದಾಯದ ಪ್ರತಿಯೊಬ್ಬರೂ ಅರ್ಜಿಯಲ್ಲಿ ಜಾತಿ ಬರೆಸುವಾಗ ಕಾಲಂ 61ರಲ್ಲಿ ಮಾದಿಗ ಎಂದು ಕಡ್ಡಾಯವಾಗಿ ಬರೆಸಬೇಕು ಎಂದು ನೆಲಮಂಗಲದ ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು ಸ್ವಾಮೀಜಿ ಹೇಳಿದರು.

ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳಮೀಸಲಾತಿ ವರ್ಗೀರಣದ ಹಿನ್ನೆಲೆಯಲ್ಲಿ ನ್ಯಾ.ನಾಗಮೋಹನದಾಸ್ ಆಯೋಗದ ನೇತೃತ್ವದಲ್ಲಿ ಪರಿಶಿಷ್ಟಜಾತಿಯ ಜನಗಣತಿ ಸೋಮವಾರ (ಮೇ.5)ದಿಂದ ಆರಂಭವಾಗಲಿದ್ದು, ಸಮುದಾಯದ ಶಿಕ್ಷಿತರು ಮುಂದೆ ನಿಂತು ತಮ್ಮ ಸಮುದಾಯದ ಹೆಸರನ್ನು ತಪ್ಪಿಲ್ಲದೆ ನಮೂದಿಸಬೇಕು ಎಂದು ಕಿವಿಮಾತು ಹೇಳಿದರು.

ನಮ್ಮ ಹೋರಾಟಕ್ಕೆ ಬಲ ಸಿಗಬೇಕಾದಲ್ಲಿ ನಾವೆಲ್ಲರೂ ಮಾದಿಗ ಎಂದೇ ನಮೂದಿಸಬೇಕು. ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ, ಜಾಂಬವರು, ಎಕೆ, ಎಡಿ ಇತರೆ ಯಾವುದೇ ಉಪಜಾತಿ ಹೆಸರುಗಳನ್ನು ಬರೆಸಬಾರದು. ಈ ಮೂಲಕ ನಮಗೆ ಸಿಗಬೇಕಾದ ಎಲ್ಲಾ ಸವಲತ್ತುಗಳನ್ನು ಪಡೆದುಕೊಳ್ಳೋಣ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಶಿಷ್ಟರಲ್ಲಿ ಮಾದಿಗ ಸಮಾಜ ಬಹುಸಂಖ್ಯಾತವಾದುದು. ನಾವು ಜಂಬುದ್ವೀಪದ ಮೂಲ ನಿವಾಸಿಗಳು. ಮೀಸಲಾತಿ ವರ್ಗೀಕರಣಕ್ಕಾಗಿ 30 ವರ್ಷಗಳಿಂದ ಹೋರಾಟ ನಡೆಸಿದ್ದೇವೆ. ಬಹುಸಂಖ್ಯಾತ ಮಾದಿಗ ಸಮುದಾಯಕ್ಕೆ ಕಾನೂನುಬದ್ಧವಾಗಿ ಸಲ್ಲಬೇಕಾದ ಸೌಲಭ್ಯಗಳು ದೊರೆಯುತ್ತಿಲ್ಲ ಎಂದರು.

ಇದರಿಂದ ಸಾಮಾಜಿಕ, ರಾಜಕೀಯವಾಗಿ ಶಕ್ತಿ ದೊರೆಯುತ್ತದೆ. ದತ್ತಾಂಶಗಳು ಬಲಾಢ್ಯವಾಗಿದ್ದಾಗ ಸಮುದಾಯಕ್ಕೆ ಅನುಕೂಲ. ಈ ಬಗ್ಗೆ ಸಮುದಾಯದ ಶಿಕ್ಷಿತರು, ಹೋರಾಟಗಾರರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಬೇಕು ಎಂದು ಕೋರಿದರು.

ಮೊದಲು ಎಸ್ಸಿ ಮಾದಿಗ ಎಂದಿತ್ತು. ನಮ್ಮ ಸಮದಾಯ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಸರಿಯಾದ ಪ್ರಾಮುಖ್ಯತೆ ದೊರೆತಿಲ್ಲ. ಆದ್ದರಿಂದ, ಮುಂದಿನ ದಿನಗಳಲ್ಲಿ ರಾಜಕೀಯ, ಸಾಮಾಜಿಕವಾಗಿ ಸಮುದಾಯ ಶಕ್ತರಾಗಲು ಈ ಸಮೀಕ್ಷೆ ಅತೀ ಮುಖ್ಯ. ಎಲ್ಲರೂ ಇದರಲ್ಲಿ ಪಾಲ್ಗೊಂಡು ಮಾದಿಗ ಎಂದು ಬರೆಸಿ ಎಂದು ಹೇಳಿದರು.

ಆನಂದ ಗುರೂಜಿ ಮಾತನಾಡಿ, ಉಪ ಗುಂಪುಗಳನ್ನು ನಮೂದಿಸಬಾರದು. ಸರಿಯಾದ ರೀತಿಯಲ್ಲಿ ಗಣತಿಯ ಕಾಲಂಗಳನ್ನು ಭರ್ತಿ ಮಾಡಬೇಕು. ಎಲ್ಲರೂ ಒಗ್ಗಟ್ಟಿನಿಂದ ಮಾದಿಗ ಎಂದು ಬರೆಸಬೇಕು ಎಂದರು. 

ಮಾಜಿ ಶಾಸಕಿ ಅನಸೂಯ ನಟರಾಜನ್, ಜನಸಂಖ್ಯೆ ಹೆಚ್ಚಿದ್ದರೂ ಮಾದಿಗರಿಗೆ ಪ್ರಾಮುಖ್ಯ ದೊರೆಯುತ್ತಿಲ್ಲ. ನಮ್ಮ ಊಟ ನಮಗೆ ಕೊಡಿ ಎಂದು ಕೇಳುತ್ತಿದ್ದೇವೆ ಎಂದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಕಾರ್ಮಿಕ ವಿರೋಧಿ ಕಾನೂನು ವಿರೋಧಿಸಿ ಮೇ 20ರಂದು ಸಾರ್ವತ್ರಿಕ ಮುಷ್ಕರ

ಪಟ್ರೇನಹಳ್ಳಿ ಕೃಷ್ಣ ಮಾತನಾಡಿ, ಮೇ 5ರಿಂದ 17ರವರೆಗೆ ಸಮೀಕ್ಷೆ ನಡೆಸಲು ಸರಕಾರ ಮುಂದಾಗಿದೆ. ಜಾತಿಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ ಎಂಬ ಸಾಕಷ್ಟು ಗೊಂದಲಗಳಿವೆ. ಹೋರಾಟಗಾರರು, ಹಿರಿಯರು, ವಲಸೆ ಕಾರ್ಮಿಕರು ಎಲ್ಲರೂ ಮಾದಿಗ ಸಮುದಾಯ ಎಂದು ನಮೂದಿಸಬೇಕು. ಈ ಮೂಲಕ ಮಾದಿಗ ಸಮುದಾಯದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದ ನಾರಾಯಣ ಸ್ವಾಮಿ, ವಿಜಯಕೃಷ್ಣ, ನಾರಾಯಣಮ್ಮ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...