ಇನ್ಸ್‌ಪೆಕ್ಟರ್‌ ಮೇಲೆ ಜಾತಿ ದೌರ್ಜನ್ಯ ಆರೋಪ; ಡಿಸಿಪಿ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ದಲಿತರೆಂಬ ಕಾರಣಕ್ಕೆ ಅವರ ಕುರ್ಚಿಯಲ್ಲಿ ಕುಳಿತುಕೊಳ್ಳಲು ನಿರಾಕರಿಸಿದ್ದ ಬೆಂಗಳೂರು ಪಶ್ವಿಮ ವಿಭಾಗದ ಡಿಸಿಪಿ ಲಕ್ಷ್ಮಣ್‌ ನಿಂಬರಗಿ, ಬೇರೆ ಕುರ್ಚಿ ಹಾಕಿಕೊಂಡು ಕುಳಿತಿದ್ದರೆಂಬ ಆರೋಪ ಕೇಳಿಬಂದಿದೆ. ಜಾತಿ ದೌರ್ಜನ್ಯ ನಡೆಸಿದ ನಿಂಬರಗಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ದೂರು ನೀಡಿದೆ.

ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್‌ ಸಂತೋಷ್ ಕುಮಾರ್ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಖಾಸಗಿ ಸಂಸ್ಥೆಯೊಂದು ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಳ್ಳಲು ನಿಂಬರಗಿ ವಿಜಯನಗರ ಠಾಣೆಗೆ ಬಂದಿದ್ದರು. ಈ ವೇಳೆ, ಸಂತೋಷ್‌ ಅವರ ಜಾತಿ ತಿಳಿದುಕೊಂಡು, ಅವರ ಕುರ್ಚಿಯಲ್ಲಿ ಕೂರದೆ, ಬೇರೆ ಕುರ್ಚಿ ಹಾಸಿಕೊಂಡು ಕುಳಿತು ಅಸ್ಪೃಶ್ಯತಾ ಆಚರಣೆ ಮಾಡಿದ್ದಾರೆ ಎಂದು ಒಕ್ಕೂಟ ಆರೋಪಿಸಿದೆ.

ಯಾವುದೇ ಠಾಣೆಗೆ ಮೇಲಧಿಕಾರಿಗಳು ಭೇಟಿ ನೀಡಿದಾಗ, ಆ ಠಾಣೆಯ ಮುಖ್ಯ ಅಧಿಕಾರಿಯ ಕುರ್ಚಿಯಲ್ಲಿಯೇ ಕುಳಿತುಕೊಳ್ಳುತ್ತಾರೆ. ಅಂತೆಯೇ ಬೇರೆ ಠಾಣೆಗಳಿಗೆ ಭೇಟಿ ನೀಡುವ ಡಿಸಿಪಿಗಳು ಆ ಠಾಣೆಯ ಇನ್ಸ್‌ಪೆಕ್ಟರ್‌ಗಳ ಕುರ್ಚಿಯಲ್ಲಿ ಕೂರುತ್ತಾರೆ. ಆದರೆ, ಡಿಸಿಪಿ ನಿಂಬರಗಿ ಅವರು ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್‌ ದಲಿತರೆಂಬ ಕಾರಣಕ್ಕೆ ಅವರು ಕುರ್ಚಿಯಲ್ಲಿ ಕೂರಲು ನಿರಾಕರಿಸಿದ್ದು, ಆ ಕುರ್ಚಿ ತೆಗೆಸಿ, ಅದೇ ಜಾಗದಲ್ಲಿ ಬೇರೆ ಕುರ್ಚಿ ಹಾಕಿಸಿಕೊಂಡು ಕುಳಿತಿದ್ದಾರೆ. ಶೋಷಿತ ಸಮುದಾಯಕ್ಕೆ ರಕ್ಷಣೆ ನೀಡಬೇಕಾದವರೇ ಜಾತಿ ದೌರ್ಜನ್ಯ ಎಸಗಿದರೆ, ದಮನಿತರ ಗತಿ ಏನು ಎಂದು ಒಕ್ಕೂಟದ ಸದಸ್ಯರು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಬ್ಯಾಂಕ್‌ಗೆ ವಂಚಿಸಿದ ಖಾಸಗಿ ಸಂಸ್ಥೆಯ ವಿರುದ್ಧ ತನಿಖೆ ನಡೆಸದಂತೆ, ದೋಷಾರೋಪ ಪಟ್ಟಿ ಸಲ್ಲಿಸದಂತೆ ಇನ್ಸ್‌ಪೆಕ್ಟರ್‌ ಮೇಲೆ ಡಿಸಿಪಿ ಒತ್ತಡ ಹಾಕಿದ್ದಾರೆ. ಆದರೂ, ಸಂತೋಷ್‌ ಕುಮಾರ್ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆದರೆ, ಆರೋಪಿಗಳನ್ನು ಬಂಧಿಸದಂತೆ ಮತ್ತೆ ಒತ್ತಡ ಹಾಕಿದ್ದು, ಬಂಧನ ವಾರೆಂಟ್‌ಅನ್ನು ಬೇರೆ ಠಾಣೆಗೆ ವರ್ಗಾಯಿಸಿ, ಸಂತೋಷ್‌ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದಾರೆ. ಡಿಸಿಪಿ ನಿಂಬರಗಿ ಆರೋಪಿಗಳ ರಕ್ಷಣೆಗೆ ಯತ್ನಿಸಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕಂದು ಒಕ್ಕೂಟದ ಸದಸ್ಯರು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಸಲ್ಲಿಸಿದ ದೂರಿನ ಪ್ರತಿಗೆ ಒಕ್ಕೂಟದ ಅಧ್ಯಕ್ಷ ಬಿ.ಗೋಪಾಲ್, ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್‌, ಒಳಮೀಸಲಾತಿ ಹೋರಾಟ ಸಮಿತಿಯ ಬಸವರಾಜ ಕೌತಾಳ್, ಭೀಮ್‌ ಆರ್ಮಿ ಪ್ರಧಾನ ಕಾರ್ಯದರ್ಶಿ ರಾಜಗೋಪಾಲ್‌, ಎಂ.ಪಿ.ಗಿರೀಶ್‌ ದೇವನಹಳ್ಳಿ, ಸುರೇಶ್‌ ಸಹಿ ಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...