ತಮಿಳುನಾಡಿಗೆ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅದೇಶ ಹೊರಡಿಸಿದೆ. ನೀರು ಹರಿಸುವುದನ್ನು ಖಂಡಿಸಿ ಮಂಡ್ಯ, ಮೈಸೂರು ಭಾಗದ ರೈತರು ಪ್ರತಿಭಟನೆ ನಡೆಸುತ್ತಿದ್ದು, ರೈತರ ಪ್ರತಿಭಟನೆಗೆ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿ ಬೆಂಬಲ ನೀಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿರುವ ನಿರ್ಮಲಾನಂದ ಸ್ವಾಮಿ, “ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ಪ್ರಜೆಗಳ ಹಿತವನ್ನು ಕಾಪಾಡುವ ಕೆಲಸವನ್ನು ಸರ್ಕಾರಗಳು ಮಾಡಬೇಕು. ಈಗ ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳುವ ಅನಿವಾರ್ಯ ಸ್ಥಿತಿ ಇದೆ. ಇದೇ ಹೊತ್ತಿನಲ್ಲಿ, ವಸ್ತುಸ್ಥಿತಿ ಬಗ್ಗೆ ಸುಪ್ರೀಂಕೋರ್ಟ್ಗೆ ಸರ್ಕಾರ ಸರಿಯಾಗಿ ಮನವರಿಕೆ ಮಾಡಿಕೊಡಬೇಕು” ಎಂದು ಹೇಳಿದ್ದಾರೆ.
“ನಾವು ಕೂಡ ರಾಜ್ಯ ಹಾಗೂ ಕೇಂದ್ರ ಸಚಿವರ ಜೊತೆ ಮಾತನಾಡುತ್ತೇವೆ. ಆದಷ್ಟು ಬೇಗ ಮೇಕೆದಾಟು ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳಬೇಕು. ಆ ಮೂಲಕ ರೈತರಿಗೆ ಅನುಕೂಲ ಒದಗಿಸಬೇಕು” ಎಂದು ಅವರು ಹೇಳಿದ್ದಾರೆ.




