ಕಾವೇರಿ ಹೋರಾಟ | ಕಾವೇರಿ ನದಿಗಿಳಿದು ರೈತರ ಪ್ರತಿಭಟನೆ

Date:

ಕಾವೇರಿ ಹೋರಾಟ ತಾರಕಕ್ಕೇರಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಮಂಡ್ಯ ಜಿಲ್ಲಾಧ್ಯಕ್ಷ ಕೆಂಪೂಗೌಡ ನೇತೃತ್ವದಲ್ಲಿ ದಸಂಸ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಕಾವೇರಿ ಸ್ನಾನ ಘಟ್ಟಕ್ಕಿಳಿದು ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿದರು.

“ಈ ದೇಶದ ಸುಪ್ರೀಂ ಕೋರ್ಟ್ ಆಗಲಿ, ಕಾವೇರಿ ನಿರ್ವಹಣಾ ಪ್ರಾಧಿಕಾರವಾಗಲಿ ವಸ್ತುಸ್ಥಿತಿ ಅರಿಯದೆ, ಕಾವೇರಿ ಕೊಳ್ಳದಲ್ಲಿ ಕಾವೇರಿ ನೀರಿನ ಮಟ್ಟ ಅರಿಯದೆ ಕುರುಡತ್ವದಂತೆ ವರ್ತಿಸಬಾರದು. ಸ್ಥಳಕ್ಕೆ ಖುದ್ದು ಭೇಟಿ ಕೊಟ್ಟು ನೀರಿನ ಪ್ರಮಾಣ ಎಷ್ಟಿದೆ, ನೀರು ಬಿಟ್ಟರಾಗುವ ಸಾಧಕ ಬಾಧಕ ಅವಲೋಕನ ಮಾಡಿ ಕ್ರಮ ಕೈಗೊಳ್ಳಬೇಕು. ದೆಹಲಿಯಲ್ಲಿ ಕುಳಿತು ನಿರ್ಧಾರ ಮಾಡುವುದು ಖಂಡನೀಯ. ಕೂಡಲೇ ಸಂಬಂಧಪಟ್ಟವರು ಕಾವೇರಿ ನೀರು ಹರಿಯುವುದನ್ನು ನಿಲ್ಲಿಸಬೇಕು” ಎಂದು ಮಂಡ್ಯ ಜಿಲ್ಲಾಧ್ಯಕ್ಷ ಕೆಂಪೂಗೌಡ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಕೆಂಪೂಗೌಡ ಈ ದಿನ.ಕಾಮ್ ಜೊತೆ ಮಾತನಾಡಿ, “ದೆಹಲಿಯಲ್ಲಿ ಕುಳಿತ ನ್ಯಾಯಾಧೀಶರಿಗೆ ನೀರು ಇದೆಯಾ ಇಲ್ಲವಾ ಎನ್ನುವ ಅರಿವು ಇರುವುದಿಲ್ಲ. ಇದನ್ನು ಸರ್ಕಾರ ಸಮರ್ಪಕವಾಗಿ ಅಧ್ಯಯನ ನಡೆಸಿ ಸಮಗ್ರ ಮಾಹಿತಿ ಸಲ್ಲಿಸಬೇಕು. ಕೂಡಲೇ ಸರ್ಕಾರ ಕಾವೇರಿ ನೀರನ್ನು ಬಿಡುವುದಿಲ್ಲ ಎನ್ನುವ ನಿಲುವಿಗೆ ಬದ್ಧರಾಗಬೇಕು. ಇದು ನಾಡಿನ ರೈತರ ಬದುಕಿನ ಪ್ರಶ್ನೆ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ವೋದಯ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್ ಗೌಡ ಮಾತನಾಡಿ, “ಈ ಭಾರಿ ಮಳೆಯ ಅಭಾವದಿಂದ ಈಗಾಗಲೇ ರಾಜ್ಯದ ಜನತೆ ತತ್ತರಿಸಿದ್ದಾರೆ. ರೈತ ವರ್ಗ ಸಂಕಷ್ಟಕ್ಕೆ ಈಡಾಗಿದೆ. ಹೀಗಿರುವಾಗ ಇರುವ ನೀರನ್ನು ತಮಿಳುನಾಡಿಗೆ ಬಿಟ್ಟರೆ ಪಟ್ಟಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗುತ್ತದೆ. ಇದರಿಂದ ಜಾನುವಾರುಗಳು, ಕೃಷಿಯ ಮೇಲೆ ನೇರ ಪರಿಣಾಮ ಬೀರುತ್ತದೆ. ವಾಸ್ತವ ಸ್ಥಿತಿ ಅರಿಯದೆ ನೀರು ಹರಿಸುವುದು ಸೂಕ್ತವಲ್ಲ. ಹಾಗಾಗಿ ಕೂಡಲೇ ನೀರಿನ ಹರಿವನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಿದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿವಾದ | ಬಿಜೆಪಿಯ ಯಾವ ಸಂಸದನಿಗೂ ನೈಜ ಕಾಳಜಿ ಇಲ್ಲ: ವಿ ಎಸ್‌ ಉಗ್ರಪ್ಪ ಕಿಡಿ

ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅದ್ಯಕ್ಷ ಎಎಲ್ ಕೆಂಪೂಗೌಡ, ಸರ್ವೋದಯ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್ ಗೌಡ, ಕರವೆ ತಾಲೂಕು ಘಟಕದ ಅಧ್ಯಕ್ಷ ಚಂದಗಾಲು ಶಂಕರ್, ಕರುನಾಡ ರಕ್ಷಣಾ ಪಡೆ ಅದ್ಯಕ್ಷೆ ಪ್ರಿಯಾ ರಮೇಶ್, ಅಮ್ರೀನ್ ತಾಜ್, ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಬಿ ಶಂಕರ್ ಬಾಬು, ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಮರಳಗಾಲ ಕೃಷ್ಣೇಗೌಡ, ಪಾಂಡವಪುರ ತಾಲೂಕು ಅಧ್ಯಕ್ಷ ಕೆನ್ನಾಳು ನಾಗರಾಜ್, ಗೌರವಾಧ್ಯಕ್ಷ ಬಿ ಎಸ್ ರಮೇಶ್, ಕಾರ್ಯದರ್ಶಿ ಶಂಕರೇಗೌಡ, ಪಿ ಎಸ್ ಕೆ ಮಾಜಿ ನಿರ್ದೇಶಕ ಪಾಂಡು, ಕೃಷಿಕ ಸಮಾಜದ ನಿರ್ದೇಶಕ ಕಡತನಾಳು ಬಾಲಕೃಷ್ಣ, ಮರಳಗಾಲ ಮಂಜುನಾಥ್, ಮರುವನಹಳ್ಳಿ ಶಂಕರ್, ಎಂ ಚಂದ್ರಶೇಖರ್, ಜಯರಾಮೇಗೌಡ, ಶಿವರಾಜ್, ತೇಜಸ್ ಹಾಗೂ ಜಗದೀಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...