ಗದಗ | ಭಾವೈಕ್ಯತೆಯಿಂದ ರಂಜಾನ್‌ ಆಚರಣೆ; ‘ಡಿವೈಎಫ್ಐ’ನಿಂದ ಪಾನಕ ವಿತರಣೆ

Date:

  • ಜಿಲ್ಲೆಯ ಹಲವೆಡೆ ಶ್ರದ್ಧಾ ಭಕ್ತಿಯಿಂದ ರಂಜಾನ್ ಆಚರಣೆ
  • ಶಾಂತಿ ಸೌಹಾರ್ದತೆಯೊಂದಿಗೆ ಆತಂಕಗಳು ದೂರವಾಗಲಿ

ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಈದುಲ್‌ ಫಿತ್ರ್ ನಮಾಜ್‌ ನೆರವೇರಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಪವಿತ್ರ ರಂಜಾನ್ ಆಚರಿಸಿದರು.

ಜಾಮಿಯಾ ಮಸೀದಿಯ ಹಾಫಿಜ್ ಜನಾಬ್ ಅಶ್ಫಕ್ ಮದನೀ ಮಾತನಾಡಿ, “ಮನುಕುಲಕ್ಕೆ ಏಕತೆ, ಸಮಾನತೆ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುವ ಸಾಮರಸ್ಯದ ಬೆಸುಗೆಯಾದ ರಂಜಾನ್‌ ಹಬ್ಬದ ಆಚರಣೆಯಿಂದ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು ಬದುಕನ್ನು ಮುನ್ನಡೆಸಲು ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

ಮದೀನಾ ಮಸ್ಜಿದ್ ಹಾಪೀಜ್ ಜನಾಬ್‌ ಬರಕತುಲ್ಲಾ ಹಾಫೀಜ್ ಮಾತನಾಡಿ, “ರಂಜಾನ್‌ ಹಬ್ಬದ ಪ್ರಾರ್ಥನೆಯೊಂದಿಗೆ ಪ್ರೀತಿ ವಿಶ್ವಾಸ, ಶಾಂತಿ ಸೌಹಾರ್ದತೆಯೊಂದಿಗೆ ಆತಂಕಗಳು ದೂರವಾಗಿ ನೆಮ್ಮದಿಯ ಜನಜೀವನ ನೆಲೆಗೊಳ್ಳಲಿ” ಎಂದು ಶುಭ ಹಾರೈಸಿದ್ದರು. ಈ ವೇಳೆ ಗ್ರಾಮದ ಅಂಜುಮನ್ ಇಸ್ಲಾಂ ಕಮಿಟಿ ಸರ್ವಸದಸ್ಯರು ಹಾಗೂ ಯುವಕ ಮಿತ್ರರು ಹಾಜರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನ

ಡಿವೈಎಫ್ಐ ಸಂಘಟನೆ ವತಿಯಿಂದ ಪಾನಕ ವಿತರಣೆ

ಗದಗ ಜಿಲ್ಲೆಯ ರೋಣ ತಾಲೂಕಿನ‌ ಬೆಳವಣಿಕೆ ಗ್ರಾಮದಲ್ಲಿ ಡಿವೈಎಫ್ಐ ಸಂಘಟನೆ ವತಿಯಿಂದ ಮುಸ್ಲಿಂ ಬಾಂಧವರೊಂದಿಗೆ ರಂಜಾನ್ ಆಚರಿಸುವುದರ ಜೊತೆಗೆ ಪಾನಕ ವಿತರಿಸಿದರು.

ಡಿವೈಎಫ್ಐ ಮುಖಂಡ ಹನಮಂತ ಮಾದರ ಮಾತನಾಡಿ, “ಪ್ರಸ್ತುತ ಸಮಾಜದಲ್ಲಿ ಅನೇಕ ರೀತಿಯ ಕೋಮುಸಂಘರ್ಷ, ದ್ವೇಷ ಮುಂತಾದ ರೀತಿಯ ಕಾರಣಗಳಿಂದ ಜಾತಿ ಆಧಾರಿತವಾಗಿ ಸಂಬಂಧಗಳು ಒಡೆದು ಹೊಂಟಿವೆ. ಆದ್ದರಿಂದ ಅಂತಹ ಸಂಘರ್ಷಗಳನ್ನು ನಿಯಂತ್ರಿಸಲು ಮತ್ತು ಪರಸ್ಪರವಾಗಿ ಸಂಬಂಧಗಳನ್ನು ಹೆಣೆಯುವಲ್ಲಿ ನಾವೆಲ್ಲರೂ ಮುಂದಾಗಬೇಕು” ಎಂದು ಕರೆ ನೀಡಿದರು.

ನಮ್ಮಲ್ಲಿಲ್ಲ ಹಿಂದೂ ರಕ್ತ, ನಮ್ಮಲ್ಲಿಲ್ಲ ಮುಸ್ಲಿಂ ರಕ್ತ, ನಮ್ಮಲ್ಲಿಲ್ಲ ಕ್ರೈಸ್ತ ರಕ್ತ, ನಮ್ಮಲ್ಲಿಲ್ಲ ಬೌದ್ಧ ರಕ್ತ, ಅದುವೇ ಮಾನವ ಕೆಂಪು ರಕ್ತ ಎಂಬ ಶೀರ್ಷಿಕೆಯ ಘೋಷಣೆಯ ಮೂಲಕ ಸೌಹಾರ್ದತೆಯಿಂದ ಪಾನಕ ವಿತರಿಸಿ ಸೌಹಾರ್ದತೆ ಮೆರೆದರು.

DYFI

ಪ್ರಕಾಶ್ ಕರಕೀಕಟ್ಟಿ ಶಿಕ್ಷಕರು, ವಕೀಲ ಎಸ್‌ ಎಸ್ ಹಾಲಭಾವಿ, ಮಹೇಶ್ ಹೀರೆಮಠ, ಸಿಐಟಿಯು ಜಿಲ್ಲಾಧ್ಯಕ್ಷ ಸಂಕಪ್ಪ ಕುರಹಟ್ಟಿ, ಮೈಲಾರಪ್ಪ ಮಾದರ, ಹನಮಂತ ತಾಳಿ, ರಾಮಣ್ಣ ಮಲ್ಲಾಪುರ, ಮುತ್ತಪ್ಪ ಮಾದರ, ಮಂಜುನಾಥ ಮಾದರ, ರಾಜು ಆದವಾನಿ. ನವೀನ್ ಆದವಾನಿ, ವಿಶ್ವನಾಥ್ ಹುಣಸಿಗಿಡದ ಸೇರಿದಂತೆ ಹಲವರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...