ಬಸವಣ್ಣನವರ ಜಯಂತಿಯೊಂದಿಗೆ ರೇಣುಕಾಚಾರ್ಯ ಜಯಂತಿ ಆಚರಣೆ ಖಂಡನೀಯ : ಬಸವಲಿಂಗ ಪಟ್ಟದ್ದೇವರು

Date:

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯೊಂದಿಗೆ ಪೌರಾಣಿಕ, ಕಾಲ್ಪನಿಕ ರೇಣುಕಾಚಾರ್ಯರ ಜಯಂತಿ ಆಚರಿಸಬೇಕೆಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಹೊರಡಿಸಿರುವ ಸುತ್ತೋಲೆ ತೀವ್ರ ಖಂಡನಾರ್ಹವಾಗಿದ ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಶಂಕರ ಬಿದರಿ ಅವರ ನಡೆ ಇತಿಹಾಸಕ್ಕೆ ಮಾಡುವ ಬಹುದೊಡ್ಡ ದ್ರೋಹ. ಅವರ ಈ ನಿರ್ಧಾರದಿಂದ ಇಡೀ ಲಿಂಗಾಯತ ಸಮಾಜಕ್ಕೆ ಬೇಸರವಾಗಿದೆ. ಬಿದರಿ ಅವರು ಬಸವತತ್ವ ಅರಿತುಕೊಂಡವರು. ಬಸವತತ್ವದ ದಂಡನಾಯಕರಾದ ಇಳಕಲ್ ಮತ್ತು ಗದಗ ಹಿರಿಯ ಸ್ವಾಮೀಜಿಗಳ ಆತ್ಮೀಯ ಶಿಷ್ಯರಾಗಿದ್ದವರು. ಬಸವ ಜಯಂತಿಯೊಂದಿಗೆ ಬೇರೊಂದು ಜಯಂತಿ ತಳುಕು ಹಾಕುವುದು ಸರಿಯಲ್ಲ. ಅವರು ತಮ್ಮ ನಿರ್ಧಾರ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ

ʼವಿಶ್ವಗುರು ಬಸವಣ್ಣನವರು ಜಗತ್ತು ಕಂಡ ಅಪರೂಪದ ಐತಿಹಾಸಿಕ ಮಹಾಪುರುಷರು ಎಂಬುದು ಸರ್ವಶೃತವಾದದ್ದು. ಅವರ ಚಿಂತನೆಗಳು ಇಂದು ಜಗತ್ತನ್ನೆ ಬೆಳೆಗುತ್ತಿವೆ. ರಾಷ್ಟ್ರ, ರಾಜ್ಯ ನಾಯಕರು ಬಸವಣ್ಣನವರ ತತ್ವಾದರ್ಶಗಳು ದೇಶ ವಿದೇಶದ ವೇದಿಕೆಗಳಲ್ಲಿ ಅಭಿವ್ಯಕ್ತಗೊಳಿಸುತ್ತಿದ್ದಾರೆ. ಕರ್ನಾಟಕ ಸರಕಾರವೇ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬಸವಣ್ಣನವರ ಜಯಂತಿಗೆ ಶತಮಾನಕ್ಕಿಂತಲೂ ಹೆಚ್ಚಿನ ಇತಿಹಾಸವಿದೆ. ಇದನ್ನು ಆಚರಿಸಲು ಹರ್ಡೆಕರ್‌ ಮಂಜಪ್ಪ ಮತ್ತು ಇನ್ನಿತರ ಮಹನೀಯರು ಪಟ್ಟ ಪರಿಶ್ರಮ ಮರೆಯುವಂತಹದ್ದಲ್ಲ. ಬಿದರಿ ಅವರ ನಿರ್ಧಾರವು ಅವರ ಪರಿಶ್ರಮ, ತ್ಯಾಗಕ್ಕೆ ಚ್ಯುತಿ ತರುವಂತಹದ್ದು. ಈಗಾಗಲೇ ರೇಣುಕಾಚಾರ್ಯರನ್ನು ನಂಬುವ ಸದ್ಭಕ್ತರು ಫಾಲ್ಗುಣ ಶುದ್ಧ ತ್ರಯೋದಶಿದಂದು ಅವರ ಜಯಂತಿ ಆಚರಿಸುತ್ತಿದ್ದಾರೆ. ಆದರೆ, ಅದನ್ನು ಬಸವ ಜಯಂತಿಗೆ ತಳಕು ಹಾಕುವುದು ಅನೈತಿಕ ಮತ್ತು ಅಕ್ಷಮ್ಯವಾದದ್ದುʼ ಎಂದಿದ್ದಾರೆ.

ʼತಮ್ಮ ಒಂದು ತಪ್ಪು ಹೆಜ್ಜೆ ಸಮಾಜದ ನೂರಾರು ವರ್ಷಗಳ ಭವಿಷ್ಯ ಕೆಡಿಸುತ್ತದೆ. ಇದು ಶರಣ ಚರಿತ್ರೆಯ ಇತಿಹಾಸದಲ್ಲಿ ಕಪ್ಪು ಚುಕ್ಕೆಯಾಗಿ ನಿಮ್ಮ ಹಣೆಪಟ್ಟಿಗೆ ಅಂಟಿಕೊಳ್ಳುತ್ತದೆ. ಇದನ್ನು ಅರಿತುಕೊಳ್ಳಬೇಕು. ತಿಳಿದು ತಿಳಿಯಲಾರದೋ ಆದ ಈ ತಪ್ಪನ್ನು ವೀರಶೈವ-ಲಿಂಗಾಯತ ಮಹಾಸಭೆ ಸರಿಪಡಿಸಬೇಕು. ಇಲ್ಲದಿದ್ದರೆ ಭವ್ಯ ಪರಂಪರೆಯ ಇತಿಹಾಸ ಇರುವ ಲಿಂಗಾಯತ ಸಮಾಜ ನಿಮ್ಮನ್ನು ಎಂದು ಕ್ಷಮಿಸುವುದಿಲ್ಲʼ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ ಜಿಲ್ಲಾಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಕಾರ್ಯಕ್ರಮ

ಬಸವಾಭಿಮಾನಿಗಳಾದ ಶಂಕರ ಬಿದರಿ ಅವರು ಈ ನಿರ್ಧಾರ ಹಿಂದೆ ಪಡೆಯುತ್ತಾರೆ ಎಂದು ನಾವು ನಂಬಿದ್ದೇವೆ ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...