ಬೀದರ್‌ | ಭಾರತ ಕಮ್ಯೂನಿಸ್ಟ್ ಪಕ್ಷದ ಶತಮಾನೋತ್ಸವ ಆಚರಣೆ

Date:

ಭಾರತ ಕಮ್ಯೂನಿಸ್ಟ್ ಪಕ್ಷ ಸ್ಥಾಪನೆಯಾಗಿ 100 ವರ್ಷಕ್ಕೆ ಕಾಲಿಡುತ್ತಿದೆ. 100 ವರ್ಷಗಳ ಹೋರಾಟ ಮತ್ತು ಬಲಿದಾನದ ಅಂಗವಾಗಿ ಗುರುವಾರ ಬೀದರ್‌ ನಗರದ ಭಗತಸಿಂಗ್ ವೃತ್ತ ಸಮೀಪದ ಸ್ಟಾರ್ ಲಾಡ್ಜ್‌ ಸಭಾಂಗಣದಲ್ಲಿ ಸಿಪಿಐ ಜಿಲ್ಲಾ ಸಮಿತಿಯಿಂದ ಪಕ್ಷದ ಶತಮಾನೋತ್ಸವ ಕಾರ್ಯಕ್ರಮ ಜರುಗಿತು.

ಸಿಪಿಐ ರಾಜ್ಯ ಉಪಾಧ್ಯಕ್ಷ ಬಾಬುರಾವ ಹೊನ್ನಾ ಮಾತನಾಡಿ, ʼ1925ರಲ್ಲಿ ಭಾರತ ಕಮ್ಯೂನಿಸ್ಟ ಪಕ್ಷವು ಉತ್ತರ ಪ್ರದೇಶದ ಕಾನ್ಪುರದಲ್ಲಿ ಜನ್ಮತಾಳಿತ್ತು. ಸಿಪಿಐ ಅಂದಿನಿಂದ ಸಂಪೂರ್ಣ ಸ್ವಾತಂತ್ರ್ಯದ ಬೇಡಿಕೆಯಿಟ್ಟು ದೇಶದಿಂದ ಬ್ರಿಟಿಷ್ ಸಾಮ್ರಾಜ್ಯ ವಸಾಹತುಶಾಹಿ ತೊಲಗಿಸಲು ಹೋರಾಟ ಆರಂಭಿಸಿತ್ತುʼ ಎಂದು ಹೇಳಿದರು.

ʼಇಂದಿನ ಕೇರಳದ ಕಯ್ಯೂರ ರೈತ ಚಳುವಳಿ, ಪುನ್ನಪ್ರ-ವಾಯಲಾರ ಚಳುವಳಿ, ಬೆಂಗಾಲದ ತೆಭಗಾ ಚಳುವಳಿ, ತೆಲಂಗಾಣದ ಸಶಸ್ತ್ರ ಹೋರಾಟಗಳು ಭಾರತದ ಸ್ವತಂತ್ರ ಚಳುವಳಿಯ ಇತಿಹಾಸದಲ್ಲಿ ಮರೆಯಲಾಗದ ಪ್ರಕರಣಗಳಾಗಿರುತ್ತದೆ. ಸ್ವಾತಂತ್ರದ ನಂತರ ಭಾರತ ಕಮ್ಯೂನಿಸ್ಟ್ ಪಕ್ಷವು ಭೂ ಸುಧಾರಣೆ, ನಿರೂದ್ಯೋಗ, ಬೆಲೆ ಏರಿಕೆಯ ಹಾಗೂ ಕೋಮುವಾದ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶ, ರಾಜ್ಯದಲ್ಲಿ ಕೋಮು ಸೌರ್ಹಾದತೆ ಕಾಪಾಡುವುದು, ಸಂವಿಧಾನ ರಕ್ಷಣೆ, ಆರ್‌ಎಸ್‌ಎಸ್, ಬಿಜೆಪಿ ಕೋಮುವಾದವನ್ನು ಸೋಲಿಸಲು ಎಲ್ಲ ಪ್ರಗತಿಪರ ಶಕ್ತಿಗಳನ್ನು ಒಗ್ಗೂಡಿಸುವುದು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಹೊರಗುತ್ತಿಗೆ ನೌಕರರು ಹಾಗೂ ಪಂಚಾಯತ ನೌಕರರನ್ನು ಸಕ್ರಮಗೊಳಿಸಬೇಕು. ರೈತರ ಎಲ್ಲ ಸಾಲ ಮನ್ನಾ ಮಾಡುವುದು ಮತ್ತು ಬಗರ್ ಹುಕುಂ ಸಾಗುವಳಿದಾರರನ್ನು ಸಕ್ರಮಗೊಳಿಸುವಂತೆ ನಿರ್ಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು.

WhatsApp Image 2024 12 26 at 5.10.53 PM 1

ಸಿಪಿಐ ಜಿಲ್ಲಾ ಘಟಕದ ಪ್ರಮುಖರಾದ ಶಫಾಯತ ಅಲಿ, ಶಿವರಾಜ ಕಮಠಾಣಾ ಮಾತನಾಡಿದರು. ಸಿಪಿಐ ಜಿಲ್ಲಾ ಕಾರ್ಯದರ್ಶಿ ಅಲಿ ಅಹ್ಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಆನ್‌ಲೈನ್ ಗೇಮಿಂಗ್‌ : ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಕಾರ್ಯಕ್ರಮದಲ್ಲಿ ಎಂ.ಡಿ. ಅಲಿ, ನಜೀರ್ ಅಹ್ಮದ್ ಚೊಂಡಿ, ಅಹ್ಮದಖಾನ್, ಎಂ.ಡಿ. ಖಮರ್ ಪಟೇಲ್, ಪ್ರಭು ಹುಚ್ಚಕನಳ್ಳಿ, ಪ್ರಭು ತಗಣಿಕರ್, ಚಾಂದೋಬಾ ಭೋಸ್ಲೆ, ಮಾಣಿಕ ಖಾನಾಪೂರಕರ್, ಶಿವರಾಜ ಕಮಠಾಣಾ, ಶೇಕ್ ಯಾದುಲ್, ಸುರೇಶ ವಾಗನಕೇರಾ, ಜೈಶೀಲ, ಸುಜಾತಾ, ಭದ್ರೆ, ವಿಜಯಕುಮಾರ, ರಾಮಣ್ಣ ಅಲ್ಮಾಸಪೂರ, ಚಂದ್ರಕಲಾ, ಪಾಂಡುರಂಗ ಪ್ಯಾಗೆ, ಶೇಖ್ ನವಾಜ್, ಮೌಲಾ ಖುರೇಷಿ,‌ ಶಿವಾಜಿ ಮಾನಕಾರಿ, ಘಾಳೆಪ್ಪಾ ಕಾಪಲಾಪೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...