ಕಲಬುರಗಿ | ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ಮಲತಾಯಿ ಧೋರಣೆ; ಸಂಸದರ ಮನೆ ಎದುರು ಪ್ರತಿಭಟನೆ

Date:

ಬಿಜೆಪಿ ಕೇಂದ್ರ ಸರ್ಕಾರ ಹತ್ತು ವರ್ಷದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದಮನಗೊಳಿಸಿ ರಾಜ್ಯಗಳ ಅಧಿಕಾರಗಳು ಕಸಿದುಕೊಳ್ಳುತ್ತಿದೆ. ದಬ್ಬಾಳಿಕೆಯನ್ನು ಪ್ರಶ್ನಿಸುವವರನ್ನು ದೇಶ ವಿರೋಧಿಗಳೆಂದು ಬಿಂಬಿಸುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಕಾರ್ಮಿಕರ ಯುವಜನ ಸೇವಾ ಸಂಘದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ರೈತರ ಮೇಲೆ ನಡೆಸುತ್ತಿರುವ ನಿರಂತರ ದಾಳಿ, ಹಲ್ಲೆ, ದೌರ್ಜನ್ಯ ಖಂಡಿಸಿ ಕರ್ನಾಟಕದ ತೆರಿಗೆ ಪಾಲನ್ನು ಹಂಚಿಕೆಯಲ್ಲಿ ಮಲತಾಯಿ ಧೋರಣೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಕಾರ್ಮಿಕರ ಯುವಜನ ಸೇವಾ ಸಂಘದ ಕಾರ್ಯಕರ್ತರು ಶನಿವಾರ ಸಂಸದ ಡಾ. ಉಮೇಶ್ ಜಾಧವ್ ಅವರ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು.

“ರೈತ ಸಂಘಟನೆಗಳ ದೆಹಲಿ ಚಲೋ ಮೆರವಣಿಗೆಯನ್ನು ತಡೆಯಲು ಪ್ರಭುತ್ವ ಅಧಿಕಾರದ ವಿಪರೀತ ದುರ್ಬಳಕೆ ಮಾಡಿಕೊಂಡು ರೈತರ ಮೇಲೆ ಮೋದಿ ಸರ್ಕಾರ ನಡೆಸುತ್ತಿರುವ ಲಾಟಿ ಪ್ರಹಾರ, ರಬ್ಬರ ಬುಲೇಟ್, ಅಶ್ರುವಾಯು ಸಿಡಿಸಿ ಮತ್ತು ಸಾಮೂಹಿಕ ಬಂಧನ ಖಂಡನಾರ್ಹ. ರೈತರ ಮೇಲೆ ಅಶ್ರುವಾಯು ಶೆಲಗಳನ್ನು ಎಸೆಯಲು ಡ್ರೋಣಗಳನ್ನು ಬಳಸಿ ಪಂಜಾಬ್ ಮತ್ತು ಹರಿಯಾಣ ರೈತರ ಮೇಲೆ ನಡೆಸುತ್ತಿರುವ ಪೈಶಾಚಿಕ ದೌರ್ಜನ್ಯ ಕೃತ್ಯವು ಭಯೋತ್ಪಾದಕರಿಗೆ ಭಾರತದಲ್ಲಿ ನುಸುಳುಕೊರರಿಗೆ ನಡೆಸುವಂತೆ ದಾಳಿ ನಡೆಸುತ್ತಿರುವುದು ಅತ್ಯಂತ ಆಘಾತಕಾರಿಯಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷದಲ್ಲಿ ರೈತರು ನಡೆಸಿದ ಬೃಹತ್ ಹೋರಾಟದ ಸಂದರ್ಭದಲ್ಲಿ 700ಕ್ಕೂ ಅಧಿಕ ರೈತರು ವೀರ ಮರಣವನ್ನು ಹೊಂದಿದ್ದರು. ಆದರೆ ಆ ರೈತರ ಕುಟುಂಬಕ್ಕೆ ಪರಿಹಾರ ನೀಡುವುದು ಮತ್ತು ರೈತರ ಮೇಲೆ ಹೂಡಿರುವ ಸಾವಿರಾರು ಕೇಸುಗಳು ವಾಪಸ್ ಪಡೆಯಲು ಒಬ್ಬ ಮಂತ್ರಿಯ ಮಗ ರೈತರ ಮೇಲೆ ಕಾರನ್ನು ಹಾಯಿಸಿ ಕೊಲೆ ಮಾಡಿರುವುದು ವಿರೋಧಿಸಿ ಕನಿಷ್ಟ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಮೋದಿ ಸರ್ಕಾರವೇ ಮುಂದೆ ನಿಂತು ದಾಳಿ ನಡೆಸುತ್ತಿರುವುದು ನೋಡಿದರೆ ಸರ್ಕಾರ ಕಾರ್ಪೋರೇಟ್ ಕಂಪೆನಿಯ ಏಜಂಟರು ಎಂದೆನಿಸುತ್ತದೆ” ಎಂದು ಕಿಡಿಕಾರಿದರು.

“ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ದಬ್ಬಾಳಿಕೆ ದೌರ್ಜನ್ಯ ನಿಲ್ಲಿಸಿ ಬೇಡಿಕೆಗಳು ಈಡೇರಿಸಲು ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಮೋದಿ ಸರ್ಕಾರದ ವಿರುದ್ದ ರೈತ ಸಂಘಟನೆಗಳು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ” ಎಂದು ಪ್ರತಿಭಟನಾಕಾರರು ಎಚ್ಚರಿಸಿದರು

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿಗಳ ಅಸ್ತಿಭಾರದ ಮೇಲೆ ಕಟ್ಟಿದ ಅಹಿಂದ ಬಜೆಟ್

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಚಂದು ಜಾಧವ್ ,ಗೌರವಾಧ್ಯಕ್ಷ ಶಾಂತಪ್ಪ ಪಾಟೀಲ್, ಖಜಾಂಚಿ ಸೋಮಶೇಖರ್ ಸಿಂಗೆ, ಪ್ರಧಾನ ಕಾರ್ಯದರ್ಶಿ ಸುನೀಲ್ ಮಾರುತಿ ಮಾನ್ಪಡೆ, ಉಪಾಧ್ಯಕ್ಷ ಜಲೀಲಸಾಬ್ ಮಡಕಿ, ಸಹ ಕಾರ್ಯದರ್ಶಿಗಳಾದ ಸುರೇಶ್ ಹೊಡಲ್, ಅನೀಲ್ ಕೊಳ್ಳೂರೆ, ಬಂಡಯ್ಯಸ್ವಾಮಿ, ಸಿದ್ದಲಿಂಗ್ ಪಾಳಾ, ಹಣಮಂತ್ ಚವ್ಹಾಣ್, ಸಂಗಮೇಶ್ ಕಲಬುರ್ಗಿ, ಕಿರಣ್ ಬಣಗಾರ್ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...