ಶಿರಾ ತಾಲ್ಲೂಕಿಗೆ ಕೇಂದ್ರ ಪರಿಶೀಲನಾ ತಂಡ ಭೇಟಿ

Date:

ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆಗಾಗಿ ಶಿರಾ ತಾಲ್ಲೂಕು ಹೊನ್ನಗೊಂಡನಹಳ್ಳಿ ಹಾಗೂ ಭುವನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರೀಯ ಮಟ್ಟದ ಪರಿಶೀಲನಾ ಸದಸ್ಯರ ತಂಡ (ಓಐಒ) ಇಂದು ಭೇಟಿ ನೀಡಿ ಫಲಾನುಭವಿಗಳ ಜೊತೆ ಚರ್ಚೆ ನಡೆಸಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿತು.

ದಯಾಕರ್ ರೆಡ್ಡಿ ಮತ್ತು ತಂಡ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರಗತಿಯಲ್ಲಿರುವ ಹಾಗೂ ಮುಕ್ತಾಯಗೊಂಡಿರುವ 5 ಕಾಮಗಾರಿಗಳನ್ನು ಪರಿಶೀಲನೆ ನಡೆಸಿತು. ತದನಂತರ ನರೇಗಾ ಯೋಜನೆಯಡಿ ಉದ್ಯೋಗ ಚೀಟಿ ಹೊಂದಿರುವ 5 ಫಲಾನುಭವಿಗಳನ್ನು ಭೇಟಿ ಮಾಡಿ ನರೇಗಾ ಸೌಲಭ್ಯಗಳನ್ನು ಪಡೆದಿರುವ, ಯೋಜನೆಯ ಸದುಪಯೋಗದ ಬಗ್ಗೆ ಮಾಹಿತಿ ಕಲೆ ಹಾಕಿತು.

1000545632

ಸಂಜೀವಿನಿ ಒಕ್ಕೂಟದ ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಂಘದ ಕಾರ್ಯಕ್ರಮಗಳ ಸದ್ಬಳಕೆ ಕುರಿತು ಮಾಹಿತಿ ಪಡೆಯಿತು. ನಂತರ ಸ್ವಸಹಾಯ ಸಂಘಗಳ ಲಾಭದಾಯಕ ಚಟುವಟಿಕೆಗಳ ಬಗ್ಗೆ ಫಲಾನುಭವಿಗಳಿಗೆ ಮಾರ್ಗದರ್ಶನ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000545633

ಪಿಎಂಎವೈ ಯೋಜನೆಯಡಿ ಪ್ರಗತಿಯಲ್ಲಿರುವ ಹಾಗೂ ಮುಕ್ತಾಯಗೊಂಡಿರುವ ವಸತಿ ಯೋಜನೆಯ 5 ಫಲಾನುಭವಿಗಳನ್ನು ಭೇಟಿ ಮಾಡಿ ವಸತಿಗಳನ್ನು ಅನುಷ್ಟಾನ ಮಾಡಿಕೊಂಡಿರುವ ಬಗ್ಗೆ ಖಚಿತ ಪಡಿಸಿಕೊಂಡಿತು. ಇದೇ ವೇಳೆ ಫಲಾನುಭವಿಗಳೊಂದಿಗೆ ಚರ್ಚಿಸಿ ಯೋಜನೆಯಿಂದ ಪಡೆದುಕೊಂಡಿರುವ ಅನುಕೂಲತೆಯ ಬಗ್ಗೆ ಮಾಹಿತಿ ಪಡೆಯಿತು. ರಾಷ್ಟ್ರೀಯ ಪಿಂಚಣಿ ಯೋಜನೆಯ 5 ಫಲಾನುಭವಿಗಳೊಂದಿಗೆ ಚರ್ಚಿಸಿ ಸಮರ್ಪಕವಾಗಿ ಪಿಂಚಣಿ ಬರುವ ಬಗ್ಗೆ ಮಾಹಿತಿ ಪಡೆಯಿತು.

1000545635

ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಎಸ್. ಮಹೇಶ, ಆರ್.ಪ್ರಭಾವತಿ, ವಸತಿ ಯೋಜನೆಯ ತಾಲ್ಲೂಕು ನೋಡಲ್ ಅಧಿಕಾರಿಗಳಾದ ಕುಮಾರ್ ನಾಯಕ್, ನಾರಾಯಣ್, ಸಂಜೀವಿನಿ ಒಕ್ಕೂಟದ ತಾಲ್ಲೂಕು ಸಂಯೋಜಕರಾದ ಮಂಜುನಾಥ್, ನರೇಗಾ ಯೋಜನೆಯ ತಾಂತ್ರಿಕ ಸಿಬ್ಬಂದಿ ಸೇರಿದಂತೆ ಗ್ರಾ.ಪಂ.ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...