ರಾಯಚೂರು | ಏಮ್ಸ್‌ ಮಂಜೂರಾತಿಗಾಗಿ ಹೈಕಮಾಂಡ್‌ಗೆ ಒತ್ತಾಯಿಸುವೆ : ಕೇಂದ್ರ ಸಚಿವ ವಿ ಸೋಮಣ್ಣ

Date:

ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಮಂಜೂರಾತಿಗಾಗಿ ಸರಿ ಸುಮಾರು ಎರಡು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಕೇಂದ್ರದಿಂದ ಏಮ್ಸ್‌ ಮಂಜೂರು ಮಾಡುವುದಕ್ಕಾಗಿ ಒತ್ತಾಯಿಸುವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಭರವಸೆ ನೀಡಿದರು.

ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಮಂಗಳವಾರ ತೆರಳಿ ಮಾತನಾಡಿದ ಅವರು, ಜಿಲ್ಲೆಯ ಬಹುದಿನ ಬೇಡಿಕೆಯಾದ ಏಮ್ಸ್‌ ಅನ್ನು ಈಡೇರಿಸುವ, ಸರ್ಕಾರ ಗಮನಕ್ಕೆ ತರುವ ಕೆಲಸ ಮಾಡುವೆ. ಕಲ್ಯಾಣ ಕರ್ನಾಟಕ ಹಿಂದುಳಿದ ಪ್ರದೇಶವಾಗಿದ್ದು, ಎಲ್ಲಾ ರಂಗಗಳಲ್ಲೂ ಅನುದಾನ ತರುವುದಕ್ಕೆ ಹೆಚ್ಚು ಹೊತ್ತು ಕೊಟ್ಟು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.

ಏಮ್ಸ್‌ ಮಂಜೂರಿಗಾಗಿ ರಾಜ್ಯ ಸರ್ಕಾರವು ಎರಡು ಬಾರಿ ಪತ್ರ ಬರೆದರೂ ಕೇಂದ್ರದಿಂದ ಸ್ಪಂದನೆ ಸಿಗುತ್ತಿಲ್ಲ ಎಂದು ಕೇಳಿದ್ದೇನೆ. ಏಮ್ಸ್‌ ಹೋರಾಟ ಸುಮಾರು ದಿನಗಳಿಂದ ನಡೆಯುತ್ತಿರುವ ಬಗ್ಗೆ ಮಾಹಿತಿಯಿದೆ. ಕೈಲಾದಷ್ಟು ಮೀರಿ ಕೆಲಸ ಮಾಡುವೆ. ತಾಳ್ಮೆಯಿಂದ ಸಹಕರಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನಿರಂತರ ತಾರತಮ್ಯ ನಡೆಯುತ್ತಿದೆ. ಬಹಳಷ್ಟು ಕೆಲಸಗಳು ಆಗಬೇಕಾಗಿದೆ. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅತ್ಯಂತ ಕೊನೆಯ ಸ್ಥಾನದಲ್ಲಿರುವ ಜಿಲ್ಲೆಗೆ ಏಮ್ಸ್ ಮಂಜೂರು ಅವಶ್ಯಕತೆ ಇದೆ ಎಂದರು.

ಹೋರಾಟ ಸಮಿತಿ ಪ್ರಧಾನ ಸಂಚಾಲಕ ಬಸವರಾಜ ಕಳಸ ಮಾತನಾಡಿ, “ಏಮ್ಸ್ ಮಂಜೂರಾತಿಗೆ ನಡೆಯುತ್ತಿರುವ ಹೋರಾಟಕ್ಕೆ ಕೇಂದ್ರದಿಂದ ಕನಿಷ್ಟ ಸ್ಪಂದನೆ ಇಲ್ಲದಂತಾಗಿದೆ. ದೆಹಲ್ಲಿ ಮಟ್ಟದಲ್ಲಿ ಹೋರಾಟ ನಡೆಸಿದರು ಯಾವುದೇ ಲಾಭವಾಗುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡು ಬಾರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ ಇವರ ಪ್ರಯತ್ನದ ಫಲವಾಗಿ ರಾಹುಲ್ ಗಾಂಧಿವರಿಗೆ ಗಮನಕ್ಕೆ ತರಲು ಸಾಧ್ಯವಾಗಿದ್ದು, ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ. ಏಮ್ಸ್‌ಗಾಗಿ ಮಾಡು ಇಲ್ಲ ಮಡಿ ಹೋರಾಟಕ್ಕೂ ಸಿದ್ಧ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ರಸ್ತೆಗುಂಡಿ ಸರಿಪಡಿಸಲು ಆಗ್ರಹಿಸಿ ಗಿಡ ನೆಟ್ಟು ಆರ್‌ವೈಎಫ್‌ಐ ಸಂಘಟನೆಯಿಂದ ಪ್ರತಿಭಟನೆ

ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದನೆ ನೀಡಿಲ್ಲ. ಕೂಡಲೇ ಏಮ್ಸ್ ಮಂಜೂರಾತಿಯನ್ನು ಪ್ರಕಟಿಸಬೇಕು ಎಂದು ಸಚಿವರಲ್ಲಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಾಸಕ ಡಾ.ಶಿವರಾಜ ಪಾಟೀಲ್, ಕೆ.ಶಿವನಗೌಡ ನಾಯಕ, ಅಶೋಕ ಕುಮಾರ ಜೈನ್, ಬಿಜೆಪಿ ಮುಖಂಡರುಗಳಾದ ತ್ರಿವಿಕ್ರಮ ಜೋಷಿ, ಬಂಡೇಶ ವಲ್ಕಂದಿನ್ನಿ ನಗರಸಭೆ ಉಪಾಧ್ಯಕ್ಷ ಸಾಜೀದ ಸಮೀರ್, ಕಾಮರಾಜ ಪಾಟೀಲ್, ಚಾಂದಪಾಷಾ ಶಕ್ತಿನಗರ, ಅಮರೇಗೌಡ ಪಾಟೀಲ್, ಥಾಮಸ ಬೆಂಜಮಿನ್, ಮೊಹ್ಮದ್ ಇಸಾಕ್, ಮಲ್ಲನಗೌಡ ವೀರಭದ್ರಪ್ಪ ಅಂಬರಪೇಟೆ, ಅಜೀಜ್ ದಿನ್ನಿ, ಮಹೇಂದ್ರ ಸಿಂಗ್, ವೆಂಕಯ್ಯ ಶೆಟ್ಟಿ ಹೊಸಪೇಟೆ, ಜಸವಂತರಾವ್ ಕಲ್ಯಾಣಕಾರಿ, ರಮೇಶರಾವ ಕಲ್ಕೂರಕರ್, ಅನಿತಾ ಮಂತ್ರಿ, ಸಂಗಮೇಶ, ಸುರೇಶಗೌಡ, ಮೊಹ್ಮದ ಅಲಿ, ಗೋಪಾಲಯ್ಯ ಇಲ್ಲೂರು ಸೇರಿದಂತೆ ಅನೇಕರು ಭಾಗಿಯಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...