ಆನೆ ‘ಸುವರ್ಣ’ಗೆ ಸಿಸೇರಿಯನ್‌ ಹೆರಿಗೆ; ಗರ್ಭದಲ್ಲೇ ಮೃತಪಟ್ಟಿದ್ದ ಮರಿ

Date:

ಬನ್ನೇರುಘಟ್ಟ ಜೈವಿಕ ಉದ್ಯಾನದ ಸುವರ್ಣ ಎಂಬ ಹೆಸರಿನ ಹೆಣ್ಣಾನೆಗೆ ಗುರುವಾರ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಆದರೆ, ಗರ್ಭದಲ್ಲೇ ಮರಿ ಮೃತಪಟ್ಟಿದೆ.

ಆನೆ ಸುವರ್ಣಗೆ ಇದು ಹತ್ತನೇ ಮರಿಯಾಗಿತ್ತು. ಆದರೆ, ಮರಿಯು ತಾಯಿಯ ಗರ್ಭದಲ್ಲೇ ಮೃತಪಟ್ಟಿತ್ತು. ಇದರಿಂದ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ, ಮರಿಯನ್ನು ಹೊರತೆಗೆದಿದ್ದಾರೆ.

“49 ವರ್ಷದ ಆನೆ ಸುವರ್ಣ, ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಒಂಬತ್ತು ಮರಿಗಳಿಗೆ ಜನ್ಮ ನೀಡಿದ್ದು, ಅವು ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿಯೇ ಬೆಳೆದಿವೆ. ಸಾಮಾನ್ಯವಾಗಿ 23-24 ತಿಂಗಳಿಗೆ ಆನೆ ಮರಿ ಹಾಕುತ್ತದೆ. ಪ್ರಸ್ತುತ ಸುವರ್ಣ ಗರ್ಭ ಧರಿಸಿ ಅಂದಾಜು 23 ತಿಂಗಳಿಗೂ ಹೆಚ್ಚು ಅವಧಿಯಾಗಿತ್ತು. ಕಳೆದ ಎರಡು ದಿನಗಳಿಂದ ಆನೆ ಪ್ರಸವ ವೇದನೆ ಅನುಭವಿಸುತ್ತಿತ್ತು. ಮರಿಯ ಕಾಲುಗಳು ಹಿಮ್ಮುಖವಾಗಿದ್ದರಿಂದ ಹೆರಿಗೆಗೆ ತೊಂದರೆಯಾಗಿತ್ತು” ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಾ.ಕೃಷ್ಣಮೂರ್ತಿ, ಡಾ.ಹೊನ್ನಪ್ಪ, ಡಾ.ವಸಂತ್‌ಶೆಟ್ಟಿ, ಡಾ.ಉಮಾಶಂಕರ್‌, ಡಾ.ವಿಜಯಕುಮಾರ್‌, ಡಾ.ಮಂಜುನಾಥ್‌ ಅವರ ವೈದ್ಯರ ತಂಡವು ಚರ್ಚೆ ನಡೆಸಿ, ಪ್ರಸವ ವೇದನೆ ಅನುಭವಿಸುತ್ತಿದ್ದ ಆನೆಯನ್ನು ಅರವಳಿಕೆಗೆ ಒಳಪಡಿಸಿ ಶಸ್ತ್ರಚಿಕಿತ್ಸೆ ಮೂಲಕ ಮರಿಯನ್ನು ಹೊರ ತೆಗೆದಿದ್ದಾರೆ. ತಾಯಿ ಆನೆಯನ್ನು ವೈದ್ಯರು ಆರೈಕೆ ಮಾಡುತ್ತಿದ್ದಾರೆ” ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸುನೀಲ್‌ ಪನ್ವಾರ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೇಲೂರಿನ ಚನ್ನಕೇಶವ ದೇಗುಲದ ಗೋಪುರಕ್ಕೆ ಬಡಿದ ಸಿಡಿಲು; ಪುರಾತತ್ವ ಇಲಾಖೆಗೆ ಮಾಹಿತಿ

“ಸುವರ್ಣ ಆನೆ ಅಪರೂಪದ ಆನೆಯಾಗಿದೆ. ಸಾಮಾನ್ಯವಾಗಿ ಆನೆಗಳು 3-4 ಮರಿಗಳನ್ನು ಹಾಕುತ್ತವೆ. ಆದರೆ ಸುವರ್ಣ 10 ಮರಿಗಳಿಗೆ ಜನ್ಮ ನೀಡಿರುವುದು ದಾಖಲೆಯಾಗಿದೆ” ಎಂದು ಉದ್ಯಾನದ ವೈದ್ಯ ಡಾ.ಉಮಾಶಂಕರ್‌ ತಿಳಿಸಿದ್ದಾರೆ.

ಬನ್ನೇರುಘಟ್ಟ ಜೈವಿಕ ಉದ್ಯಾನದ ಆನೆ ಸುವರ್ಣ, ವನಿತಾ, ಶಿವ, ಗೋಕುಲ, ವನಶ್ರೀ, ಗಜೇಂದ್ರ, ಶ್ರೀರಾಮ, ಭವಾನಿ, ಸುರೇಶ, ಸುಧಾ ಎಂಬ ಆನೆಗಳಿಗೆ ಜನ್ಮ ನೀಡಿದೆ. ಒಂದು ಆನೆ ಮೈಸೂರು ಮೃಗಾಲಯದಲ್ಲಿದೆ. ವನಿತಾ ಮತ್ತು ಗೋಕುಲ ಮೃತಪಟ್ಟಿವೆ. ಉಳಿದ ಆರು ಮರಿಗಳು ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿವೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...