ಚೈತ್ರ ಕುಂದಾಪುರ ವಂಚನೆ ಪ್ರಕರಣ | ಜಾರಿ ನಿರ್ದೇಶನಾಲಯಕ್ಕೆ ಕೆಆರ್‌ಎಸ್ ಪಕ್ಷ ದೂರು

Date:

  • ಅಕ್ರಮ ಆಸ್ತಿ ಮಾಡಿಕೊಂಡಿರುವ ಬಗ್ಗೆ ತನಿಖೆ ಮಾಡಬೇಕು
  • ಇಂತಹ ಸೂಟ್‌ ಕೇಸ್ ವ್ಯವಹಾರ ನಿರಂತರವಾಗಿ ನಡೆಯುತ್ತವೆ

ಬಿಜೆಪಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಲಾಗುವುದೆಂದು 5 ಕೋಟಿ ರೂ. ಹಣ ಪಡೆದುಕೊಂಡು ವಂಚಿಸಿರುವ ಆರೋಪ ಹೊತ್ತ ಚೈತ್ರ ಕುಂದಾಪುರ ಮತ್ತು ಆಕೆಯ ಸಂಗಡಿಗರು ಹಾಗೂ ಹಣ ನೀಡಿರುವ ಗೋವಿಂದ್ ಬಾಬು ಪೂಜಾರಿ ಅವರುಗಳ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ಕೆಆರ್‌ಎಸ್ ಪಕ್ಷ ದೂರು ನೀಡಿದೆ.

ಬುಧವಾರ ದೂರು ನೀಡಿರುವ ಕೆಆರ್‌ಎಸ್ ಪಕ್ಷ, ಅಕ್ರಮ ಹಣ ವರ್ಗಾವಣೆ ಬಗ್ಗೆ ಮತ್ತು ಅಕ್ರಮ ಆಸ್ತಿ ಮಾಡಿಕೊಂಡಿರುವ ಬಗ್ಗೆ ತನಿಖೆ ಮಾಡಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ ಆಗ್ರಹಿಸಿದೆ.

“ಬಿಜೆಪಿ ಸೇರಿದಂತೆ, ಬಹುತೇಕ ಪ್ರಮುಖ ಪಕ್ಷಗಳು ಆಂತರಿಕ ಪ್ರಜಾಪ್ರಭುತ್ವ ಪಾಲಿಸದೆ ಹಾಗೂ ಸ್ಪರ್ಧಾಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕ ರೀತಿಯಲ್ಲಿ ನಡೆಸದೆ ಇರುವುದೇ ಇಂದು ಈ ಪಕ್ಷಗಳಲ್ಲಿ ಇಂತಹ ಸೂಟ್‌ ಕೇಸ್ ವ್ಯವಹಾರಗಳು ನಿರಂತರವಾಗಿ ನಡೆಯಲು ಸಾಧ್ಯವಾಗಿದೆ. ಇದು ಕೇವಲ ಚೈತ್ರ ಕುಂದಾಪುರ ಮಾತ್ರವಲ್ಲದೆ, ಬಿಜೆಪಿ ಸೇರಿದಂತೆ ಇತರ ಪಕ್ಷಗಳಲ್ಲೂ ಇದೇ ರೀತಿಯ ಅವ್ಯವಹಾರಗಳು ನಡೆಯುತ್ತಿವೆ. ಈ ಬಗ್ಗೆ ಪ್ರಮುಖ ಪಕ್ಷಗಳು ಗಂಭೀರವಾಗಿ ಚಿಂತಿಸಬೇಕು” ಎಂದು ದೂರಿನಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಹಣ-ಹೆಸರು ಗಳಿಕೆಗೆ ಧರ್ಮವೇ ಸುಲಭದ ಸಾಧನ

“ಜೆಸಿಬಿ ಪಕ್ಷಗಳ ಭ್ರಷ್ಟಾಚಾರದ ಕಪ್ಪು ಹಣದ ರಾಜಕೀಯದ ಒಂದು ಸಣ್ಣ ಭಾಗ ಚೈತ್ರಾ ಕುಂದಾಪುರ ಅನ್ನುವ ಭ್ರಷ್ಟಾಚಾರಿಯ ಮೂಲಕ ತಂತಾನೇ ಬಯಲಾದರೂ, ಅದನ್ನು ಸೂಕ್ತ ತನಿಖಾ ಸಂಸ್ಥೆ ತನಿಖೆ ಮಾಡದಿದ್ದಲ್ಲಿ ಅದರಲ್ಲಿ ಭಾಗಿಯಾಗಿರುವ ಇತರ ದೊಡ್ಡ ಕುಳಗಳು ತಪ್ಪಿಸಿಕೊಳ್ಳುತ್ತವೆ” ಎಂದು ಕೆಆರ್‌ಎಸ್ ಪಕ್ಷ ದೂರಿನಲ್ಲಿ ವಿವರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...