ಚೈತ್ರಾ ಕುಂದಾಪುರ ಪ್ರಕರಣ | ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಬಂಧನ ಆಗಲಿ: ಬೊಮ್ಮಾಯಿ

Date:

  • ‘ಟಿಕೆಟ್‌ಗಾಗಿ ಹಣ ಪ್ರಕರಣವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ’
  • ‘ಚೈತ್ರಾ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ’

ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿರುವ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಚೈತ್ರಾ ಕುಂದಾಪುರ ಕೇಸ್‌ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು. ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು” ಎಂದರು.

“ಟಿಕೆಟ್ ಕೊಡಿಸುತ್ತೇವೆ ಎಂದು ಹಣ ಪಡೆದಿರುವ ವಿಚಾರವನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ತನಿಖೆ ಆಗಲಿ, ಅಪರಾಧಿ ಸ್ಥಾನದಲ್ಲಿ ಇದ್ದವರು ದೊಡ್ಡ ದೊಡ್ಡ ಹೆಸರನ್ನು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರಬರಲಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈತ್ರಿ ವಿಚಾರ ಪ್ರಾಥಮಿಕ ಹಂತದಲ್ಲಿದೆ

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಮೈತ್ರಿ ವಿಚಾರ ಪ್ರಾಥಮಿಕ ಹಂತದಲ್ಲಿದೆ. ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆ ಅಂತಿಮ ಹಂತ ತಲುಪಿಲ್ಲ. ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ಈ ಬಗ್ಗೆ ಚರ್ಚಿಸಲಿದ್ದಾರೆ. ಮೈತ್ರಿ ಸಮಯದಲ್ಲಿ ನಮ್ಮ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತೆರಿಗೆ ವಂಚನೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಿಎಂ ಸ್ಟಾಲಿನ್ ಜೊತೆ ಮಾತನಾಡುತ್ತಿಲ್ಲ

“ತಮಿಳುನಾಡಿನ ಡ್ಯಾಂಗಳಲ್ಲಿ ನೀರಿನ ಸ್ಟಾಕ್ ಹೆಚ್ಚಾಗಿದೆ ಎಂದು ನಾವು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ. ಆದರೂ, ರಾಜ್ಯ ಸರ್ಕಾರ ನೀರು ಬಿಡುತ್ತ ಬಂದಿದೆ. ರಾಜ್ಯ ಸರ್ಕಾರ ಕಾನೂನಾತ್ಮಕವಾಗಿ ಗಂಭೀರವಾಗಿ ತೆಗೆದುಕೊಂಡು ಹೋರಾಟ ಮಾಡುತ್ತಿಲ್ಲ. ಹೀಗಾಗಿ ಕಾವೇರಿ ಜಲಾನಯನದ ರೈತರಿಗೆ, ಬೆಂಗಳೂರಿಗೆ ಕಷ್ಟ ಆಗಲಿದೆ. ಸರ್ಕಾರ ಇದನ್ನು ಕಾನೂನಾತ್ಮಕವಾಗಿ ಅಥವಾ ಮಾತುಕತೆಯಿಂದ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

“ನಮ್ಮ ಸಿಎಂ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ಮಾತನಾಡಲು ತಯಾರಿಲ್ಲ. ಇಂಡಿಯಾ ಒಕ್ಕೂಟ ಅಂತ ಹೇಳುತ್ತಾರೆ. ಇವರು ನಮ್ಮ‌ ನೀರಿನ ಹಕ್ಕಿನ ಬಗ್ಗೆ ಮಾತನಾಡುವುದಿಲ್ಲ. ಸದ್ಯ ನೀರು ಬಿಡುವುದಿಲ್ಲ ಅನ್ನುವ ತಮ್ಮ ನಿಲುವಿಗೆ ಅವರು ಗಟ್ಟಿಯಾಗಿ ನಿಲ್ಲಬೇಕು. ನಾವು ಈ ನಿಲುವಿನ ಬಗ್ಗೆ ಸರ್ಕಾರದ ಜೊತೆ ನಿಲ್ಲುತ್ತೇವೆ. ಒಂದು ವೇಳೆ ನೀರು ಬಿಟ್ಟರೆ ನಾವು ಸರ್ಕಾರದ ವಿರುದ್ದ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಬರಪೀಡಿತ ತಾಲ್ಲೂಕುಗಳಲ್ಲಿ ಬಿಜೆಪಿ ಹೋರಾಟ

“ರಾಜ್ಯ ಸರ್ಕಾರ ಬರ ಘೋಷಣೆಗೆ ಅನಗತ್ಯ ಕಾಲಹರಣ ಮಾಡಿದೆ. ಜೂನ್ ತಿಂಗಳಿನಿಂದಲೇ ವಸ್ತುಸ್ಥಿತಿ ಅರಿತು ಬರ ತಾಲೂಕುಗಳ ಘೋಷಣೆಗೆ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಸೆಪ್ಟಂಬರ್ ಬಂದರೂ ಇನ್ನೂ ಮೀನಮೇಷ ಎಣಿಸುತ್ತಿದೆ. ಬರಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು, ದನಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕು. ಮುಂಗಾರು ಬೆಳೆ ಹಾನಿಯಾಗಿದ್ದು, ತಕ್ಷಣ ರೈತರಿಗೆ ಪರಿಹಾರ ನೀಡಬೇಕು. ಈ ಸರ್ಕಾರ ಕೇಂದ್ರ ಸರ್ಕಾರದ ಮಾನದಂಡಗಳ ನೆಪ ಹೇಳುತ್ತಿದೆ. ಅಲ್ಪಾವಧಿ ಸಾಲವನ್ನು ದೀರ್ಘಾವಧಿ ಸಾಲವನ್ನಾಗಿ ಪರಿವರ್ತಿಸಬೇಕು” ಎಂದು ಆಗ್ರಹಿಸಿದರು.

“ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ಒಂದು ತಿಂಗಳಲ್ಲಿ ಪರಿಹಾರ ಘೋಷಣೆ ಮಾಡಿ ಬಿಡುಗಡೆ ಮಾಡಿದ್ದೆವು. ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಿದ್ದೆವು. ಈ ಸರ್ಕಾರ ಬರಪೀಡಿತ ಪ್ರದೇಶಗಳಿಗೆ ಸೂಕ್ತ ಪರಿಹಾರ ನೀಡದಿದ್ದರೆ ಬಿಜೆಪಿ ವತಿಯಿಂದ ಬರಪೀಡಿತ ತಾಲೂಕುಗಳಲ್ಲಿ ಪ್ರತಿಭಟನೆ ಮಾಡಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...