ಚಳ್ಳಕೆರೆ | ದಲಿತರಿಗೆ ಕ್ಷೌರ ನಿರಾಕರಿಸಿ ಜಾತಿನಿಂದನೆ: ತಹಶೀಲ್ದಾ‌ರ್‌ಗೆ ದಸಂಸದಿಂದ ದೂರು; ಶಾಂತಿ ಸಭೆ

Date:

ಕ್ಷೌರಿಕರೊಬ್ಬರು ಜಾತಿ ತಾರತಮ್ಯ ಮಾಡಿ ದಲಿತರಿಗೆ ನಾನು ಕ್ಷೌರ ಮಾಡುವುದಿಲ್ಲ ಎಂದು ಜಾತಿನಿಂದನೆ ಮಾಡುವ ಮೂಲಕ ದಲಿತರಿಗೆ ಅಪಮಾನ ಮಾಡಿದ್ದಾರೆ ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಹಶೀಲ್ದಾ‌ರ್ ಕಚೇರಿಗೆ ದಲಿತ ನಾಯಕರು ದೂರು ಸಲ್ಲಿಸಿದ್ದಾರೆ.

ಈ ಘಟನೆ ನಡೆದಿರುವುದು ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ. ಈ ಗ್ರಾಮದಲ್ಲಿ ದಲಿತರ ಮೇಲಿನ ದೌರ್ಜನ್ಯ ಸಂವಿಧಾನ, ಸ್ವಾತಂತ್ರ್ಯ ನಂತರವೂ ನೆಡೆಯುತ್ತಿದೆ ಎಂಬುದೇ ಅವಮಾನಕರ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಾಲುವೆ ಹಳ್ಳಿಯಲ್ಲಿ ಕ್ಷೌರದಂಗಡಿ ಇಟ್ಟುಕೊಂಡಿರುವ ನಾಗರಾಜ್ ಎಂಬ ವ್ಯಕ್ತಿ ಜಾತಿ ತಾರತಮ್ಯ ನಡೆಸಿ, ಸವರ್ಣೀಯರಿಗೆ ಮಾತ್ರ ಕ್ಷೌರ ಮಾಡಿ ದಲಿತರಿಗೆ ನಿರಾಕರಿಸಿರುವ ಬಗ್ಗೆ ಕಾಲುವೆ ಹಳ್ಳಿಯ ದಲಿತ ನಾಯಕರು ಮತ್ತು ದಲಿತ ಸಂಘರ್ಷ ಸಮಿತಿಯ ಮುಖಂಡರು ತಹಶೀಲ್ದಾರ್ ರೆಹಾನ್ ಪಾಶ ಅವರಿಗೆ ದೂರು ನೀಡಿದ್ದಾರೆ.

ಸ್ವಾತಂತ್ರ್ಯ ನಂತರ ಸಂವಿಧಾನವನ್ನು ಅಳವಡಿಸಿಕೊಂಡು ಹತ್ತು ವರ್ಷಗಳಾದರೂ ನಾಗರಿಕ ಸಮಾಜದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ನಿಲ್ಲುತ್ತಿಲ್ಲ. ಇದಕ್ಕೆ ಕಾಲುವೆ ಹಳ್ಳಿಯ ಘಟನೆಯ ಸಾಕ್ಷಿಯಾಗಿದ್ದು, ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ದಲಿತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ನಂತರ ಕಾಲುವೆಹಳ್ಳಿ ಗ್ರಾಮದ ಕೆಲ ಮೇಲ್ಜಾತಿಯ ಮುಖಂಡರು ದಲಿತ ಯುವಕರಿಗೆ ಈ ಬಗ್ಗೆ ಯಾಕೆ ದೂರು ನೀಡಿದ್ದೀರಿ ಎಂದು ಬೆದರಿಕೆ ಹಾಕಿ ಭಯದ ವಾತಾವರಣ ಸೃಷ್ಟಿಸುವ ಮತ್ತು ಅಸಂವಿಧಾನಿಕವಾಗಿ ಬೆದರಿಕೆ ಹಾಕಿರುವ ಧ್ವನಿ ಮುದ್ರಿಕೆಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಈ ಬಗ್ಗೆ ಈ ದಿನ.ಕಾಮ್‌ಗೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ರೆಹಾನ್ ಪಾಷಾ, ಗ್ರಾಮದಲ್ಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಲಿತ ಮುಖಂಡರು ದೂರು ನೀಡಿದ್ದರು. ಕಾಲುವೆಹಳ್ಳಿಯಲ್ಲಿ ದಲಿತ ಮುಖಂಡರು ಸೇರಿದಂತೆ ಎರಡು ಕಡೆಯ ಮುಖಂಡರ, ಗ್ರಾಮದ ಜನಗಳ ಮುಂದೆ ಪೊಲೀಸ್ ವರಿಷ್ಠಾಧಿಕಾರಿಗಳು, ಡಿ ವೈ ಎಸ್ ಪಿ ಗಳ ನೇತೃತ್ವದಲ್ಲಿ ಸಭೆ ನಡೆಸಿದ್ದು ಎಲ್ಲರಿಗೂ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

“ಜಾತಿ ತಾರತಮ್ಯ, ನಿಂದನೆಗೆ ಅವಕಾಶವಿಲ್ಲ. ಇದು ಕಾನೂನು ಬಾಹಿರವಾಗಿದ್ದು, ಎಲ್ಲರೂ ಸರ್ವ ಸಮಾನರು ಮತ್ತು ಸಮಪಾಲು ಉಳ್ಳವರು ಎಂದು ಸಂವಿಧಾನದ ಮೂಲಕ ಸಮಾನತೆಯ ಹಕ್ಕು ನೀಡಲಾಗಿದೆ. ಯಾರಿಗೆ ಆಗಲಿ ಕ್ಷೌರ ಮತ್ತು ಇತರೆ ಸವಲತ್ತುಗಳನ್ನು ನಿರಾಕರಿಸುವಂತಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ ಮತ್ತು ಶಾಂತಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಾಗಿದೆ. ಇದಕ್ಕೆ ಗ್ರಾಮದ ಜನರು ಕೂಡ ಒಪ್ಪಿಕೊಂಡಿದ್ದಾರೆ” ಎಂದು ತಿಳಿಸಿದರು.

ಈ ಘಟನೆಯ ಬಗ್ಗೆ ಈ ದಿನ.ಕಾಮ್‌ಗೆ ಪ್ರತಿಕ್ರಿಯಿಸಿದ ಚಿತ್ರದುರ್ಗ ಜಿಲ್ಲಾ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು, “ಗ್ರಾಮದಲ್ಲಿ ಮೇಲ್ಜಾತಿಯ ಜನಗಳು ಸೇರಿದಂತೆ ಎಲ್ಲರನ್ನೂ ಸಭೆ ಸೇರಿಸಿ ಎಲ್ಲರಿಗೂ ಎಚ್ಚರಿಕೆ ನೀಡಲಾಗಿದೆ. ಇದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ. ಎಷ್ಟೇ ಜನರಿದ್ದರೂ, ಎಷ್ಟೇ ದೊಡ್ಡವರಾದರೂ ಬಿಡುವುದಿಲ್ಲ. ತಕ್ಕ ಶಿಕ್ಷೆಯಾಗುತ್ತದೆ. ಆದಕಾರಣ ಈ ರೀತಿಯ ಪ್ರಕರಣಗಳು ಮುಂದೆ ನಡೆಯದಂತೆ ಎಲ್ಲರಿಗೂ ಸಮಾನ ರೀತಿಯಲ್ಲಿ ಕಾಣಬೇಕು ಎಂದು ಎಚ್ಚರಿಕೆ ನೀಡಿದ್ದೇವೆ. ಇದಕ್ಕೆ ಗ್ರಾಮದ ಜನ ಕೂಡ ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದರು.

ಇದಕ್ಕೆ ಕ್ಷೌರಿಕ ಕೂಡ ಒಪ್ಪಿಕೊಂಡಿದ್ದಾನೆಯೇ ಎಂದು ಪ್ರಶ್ನಿಸಿದಾಗ, ‘ಕ್ಷೌರಿಕನನ್ನು ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಸಭೆಗೆ ಕರೆಸಿರಲಿಲ್ಲ’ ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದಿರಾ? 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಈ ಬಗ್ಗೆ ಪ್ರತಿಕ್ರಿಯಿಸಿದ ದಲಿತ ಸಂಘರ್ಷ ಸಮಿತಿ ಮುಖಂಡ ಹೊನ್ನೂರ್ ಸ್ವಾಮಿ, “ಗ್ರಾಮದಲ್ಲಿ ತಾರತಮ್ಯ ಹಿಂದಿನಿಂದಲೂ ನಡೆದುಕೊಂಡು ಬಂದಿದ್ದು, ಈ ಬಗ್ಗೆ ನಾವು ದೂರು ನೀಡಿದ್ದೇವೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಹಾಗೂ ಊರಿನ ಜನಗಳು ಮುಂದೆ ದಲಿತರ ಜೊತೆ ಹೇಗೆ ನಡೆದುಕೊಳ್ಳುತ್ತಾರೆ, ಸಮಾನತೆ ಕಲ್ಪಿಸುತ್ತಾರೆಯೇ ಎಂಬುದು ಅವರಿಗೆ ಬಿಟ್ಟ ವಿಷಯ. ಸಮಾನತೆಯ ಹಕ್ಕುಗಳ ನಿರಾಕರಣೆ ಆದರೆ ಕಾನೂನು ಪ್ರಕಾರ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದರು.‌

WhatsApp Image 2025 11 17 at 5.21.38 PM
ವಿನಾಯಕ್ ಚಿಕ್ಕಂದವಾಡಿ
+ posts

ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...