ಚಳ್ಳಕೆರೆ | ರಸ್ತೆ ಕಾಮಗಾರಿ ಸ್ಥಗಿತ; ಉಪಲೋಕಾಯುಕ್ತ ನ್ಯಾ. ಫಣೀಂದ್ರರಿಗೆ ದೂರು ನೀಡಲು ಸ್ಥಳೀಯರ ನಿರ್ಧಾರ

Date:

ಚಳ್ಳಕೆರೆ ನಗರದ ರಸ್ತೆ ಕಾಮಗಾರಿ ಶೀಘ್ರ ಮುಗಿಯುವುದಿಲ್ಲವೋ ಅಥವಾ ಉದ್ದೇಶಪೂರ್ವಕವಾಗಿ ಕಾಮಗಾರಿಗಳು ನಿಧಾನವಾಗಿ ಆಗುತ್ತಿವೆಯೋ? ಇದರಿಂದಾಗಿ ಸಾರ್ವಜನಿಕರಿಗೆ ಆಗುವ ತೊಂದರೆ ತಾಪತ್ರಯಗಳ ಬಗ್ಗೆ ಗಮನಹರಿಸಲು ಸ್ಥಳೀಯ ಆಡಳಿತ, ಅಧಿಕಾರಿಗಳಿಗೆ ಸಾಧ್ಯವಿಲ್ಲವೇ ಅಥವಾ ನಿರ್ಲಕ್ಷ್ಯವೇ ಎನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕಾಡುತ್ತಿದೆ.

“ಕುವೆಂಪು ಶಾಲಾ ಹಿಂಬಾಗದ ಸಿಜಿಕೆ ಲೇಔಟ್ ಮತ್ತು ಜಯಮ್ಮ ವೀರಣ್ಣ ಲೇಔಟ್ ಭಾಗಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಕೈಗೊಂಡು 8ರಿಂದ 10 ತಿಂಗಳುಗಳೇ ಕಳೆದಿವೆ. ಖಾಸಗಿ ಬಸ್ ನಿಲ್ದಾಣದ ಹಿಂಭಾಗದಿಂದ ತಿರುಮಲ ಆಸ್ಪತ್ರೆ ಮತ್ತು ಸೈನಿಕ ಆಸ್ಪತ್ರೆ  ಮುಂಭಾಗದಿಂದ ಹಾದು ಹೋಗುತ್ತದೆ. ಕುವೆಂಪು ಶಾಲೆ ಹಿಂಭಾಗದ ಎಲ್ಲ ಲೇಔಟ್‌ಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು,
ಈ ಮೂಲಕವೇ ಪಾದಚಾರಿಗಳು, ವಾಹನಗಳು ಸಂಚರಿಸುತ್ತವೆ. ಇದರ ದುರಸ್ತಿ, ಮರುನಿರ್ಮಾಣಕ್ಕೆಂದು 2024ರ ಜೂನ್‌ನಲ್ಲಿ ರಸ್ತೆ ಅಗೆದಿದ್ದು, ಈವರೆಗೂ ಕೆಲಸವನ್ನು ಪೂರ್ಣಗೊಳಿಸದೇ ಅರೆಬರೆ ಕೆಲಸ ಮಾಡಿದ್ದಾರೆ” ಎಂದು ಚಳ್ಳಕೆರೆ ನಗರದ ನಿವಾಸಿಗಳು ಕಿಡಿಕಾರುತ್ತಿದ್ದಾರೆ.

ರಸ್ತೆಯ ಮಧ್ಯಭಾಗದಲ್ಲಿ ಅಲ್ಲಲ್ಲಿ ಒಂದಷ್ಟು ಸ್ಲ್ಯಾಬ್‌ಗಳನ್ನು ಜೋಡಿಸಿದ್ದು, ಉಳಿದ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇಲ್ಲಿನ ಜನತೆಗೆ ಓಡಾಡಲು ತುಂಬಾ ಕಷ್ಟವಾಗಿದ್ದು, ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ಈ ಅರೆಬರೆ, ಅಪೂರ್ಣ ಕಾಮಗಾರಿಗೆ ಕಾರಣವೇನೆಂದು ತಿಳಿಯದೆ, ಯಾವಾಗ ಪೂರ್ಣಗೊಳ್ಳುತ್ತದೆಯೋ ಎನ್ನುವ ನಿರೀಕ್ಷೆಯ ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಸ್ತೆ ಕಾಮಗಾರಿ 1 1

ಬಹುತೇಕ ಮಕ್ಕಳು ಶಾಲೆಗಳಿಗೆ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಉದ್ಯೋಗಿಗಳೂ ಕೂಡ ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ಇದೇ ರಸ್ತೆಯಲ್ಲಿ ಓಡಾಡುವ ಅನಿವಾರ್ಯತೆ ಎದುರಾಗಿದೆ. ಅಪೂರ್ಣ ಕಾಮಗಾರಿಯ ರಸ್ತೆಯಲ್ಲಿ ಮಕ್ಕಳು, ವೃದ್ಧರಿಗೆ ಸಂಕಷ್ಟ ಎದುರಾಗಿದೆ.

“ಇದು ನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಇದರಲ್ಲಿ ವಾಹನ ಸಂಚಾರಕ್ಕೆ ಸಾಧ್ಯವಾಗದೆ, ಸಣ್ಣಪುಟ್ಟ ಗಲ್ಲಿಗಳಲ್ಲಿ ಬೇರೆ ಬೇರೆ ಬಡಾವಣೆಗಳಲ್ಲಿ ಸುತ್ತು ಹಾಕಿಕೊಂಡು ಹೋಗುತ್ತಿದ್ದಾರೆ. ಶಾಲೆ ಬಸ್‌ಗಳು ಈ ರಸ್ತೆಯಲ್ಲಿ ಸಂಚರಿಸುವುದು  ನಿಂತುಹೋಗಿದ್ದು, ಶಾಲೆ ಮಕ್ಕಳಿಗೆ ಬಹುತೇಕ ತೊಂದರೆಯಾಗಿದೆ. ಕೆಲವೊಮ್ಮೆ ಶಾಲೆಗೆ ಹೋಗುವುದು ತಡವಾದಲ್ಲಿ ಮಕ್ಕಳ ಹಾಜರಿಯೂ ಕಡಿಮೆಯಾಗಿ ವಿದ್ಯಾಭ್ಯಾಸದ ಕೊರತೆ ಸಾಧ್ಯತೆ ಹೆಚ್ಚಾಗಿದೆ” ಎಂದು ಸ್ಥಳೀಯ ನಿವಾಸಿ ಶಿವಕುಮಾರ್ ಕಿಡಿಕಾರಿದರು. 

ರಸ್ತೆ ಕಾಮಗಾರಿ 2

“ಇಲ್ಲಿ ಯಾರು ಕಾಮಗಾರಿ ನಡೆಸುತ್ತಿದ್ದಾರೆಂದು ಯಾವುದೇ ಮಾಹಿತಿ ಫಲಕವನ್ನೂ ಹಾಕಿಲ್ಲ. ಕಳೆದ ಒಂಬತ್ತು ತಿಂಗಳಿಂದ ಕಾಮಗಾರಿ ನಡೆಯುತ್ತಿದೆ. ಮಳೆಗಾಲಕ್ಕೂ ಮುಂಚೆ ರಸ್ತೆಯನ್ನು ಅಗೆದು ಬಿಟ್ಟಿದ್ದು, ಮಳೆಗಾಲದಲ್ಲಿ ಕೆಸರು ತುಂಬಿಕೊಂಡಿತ್ತು. ಈಗ ಎರಡು ಮೂರು ತಿಂಗಳ ಹಿಂದೆ ಕಲ್ಲು ಜೆಲ್ಲಿಗಳನ್ನು ಹರಡಿದ್ದಾರೆ. ಕೆಲವು ಸ್ಲ್ಯಾಬ್‌ಗಳನ್ನು ಹಾಕಿ ಅರ್ಧಂಬರ್ಧ ಕಾಮಗಾರಿ ನಡೆಸಿ ಕೈಬಿಟ್ಟಿದ್ದಾರೆ. ಯಾವುದೇ ಅಧಿಕಾರಿಗಳು, ಗುತ್ತಿಗೆದಾರರು ಇಲ್ಲಿಗೆ ಭೇಟಿ ನೀಡಿ ಮಾಹಿತಿ ನೀಡಿಲ್ಲ. ಯಾರನ್ನು ಕೇಳಬೇಕು ಎಂಬುದೇ ಯಕ್ಷಪ್ರಶ್ನೆಯಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆ ಕಾಮಗಾರಿ 3

“ಎಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ರಸ್ತೆ ರಿಪೇರಿಯಾಗಿಲ್ಲ. ಜನವರಿ 22ರಿಂದ 24ರವರೆಗೆ ಜಿಲ್ಲೆಗೆ ಮತ್ತು ನಗರಕ್ಕೆ ಉಪಲೋಕಾಯುಕ್ತರು ಭೇಟಿ ನೀಡುವ ಮಾಹಿತಿ ಇತ್ತು. ಆ ಸಂದರ್ಭದಲ್ಲಿ ಲೋಕಾಯುಕ್ತರಿಗೆ ದೂರನ್ನು ಏಕೆ ನೀಡಬಾರದು. ಈ ಅರೆಬರೆ ಕಾಮಗಾರಿಯ ಹಿಂದಿರುವ ಕೈಗಳು ಯಾವುವು? ಮತ್ತು ಇದರ ಗುತ್ತಿಗೆದಾರನಿಗೆ ಸಂಬಂಧಪಟ್ಟಂತೆ ನಾವೇಕೆ ದೂರು ನೀಡಬಾರದೆಂದು ಇಲ್ಲಿ ಸಾರ್ವಜನಿಕರು ಯೋಚಿಸುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ರಾತ್ರೋರಾತ್ರಿ ಕೆರೆ ಮಣ್ಣು ಕಳ್ಳತನ; ಗುತ್ತಿಗೆದಾರ ವಿಶ್ವನಾಥ ಕುಂಬಾರನ ವಿರುದ್ಧ ಸೂಕ್ತ ಕ್ರಮವಾಗುವುದೇ?

ಈ ಬಗ್ಗೆ ನಗರಸಭೆ ಆಯುಕ್ತ ಜನಾರೆಡ್ಡಿ ಅವರು ಮಾತನಾಡಿ, “ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಯಾರೂ ಕೂಡ ಅಹವಾಲು ಸಲ್ಲಿಸಿಲ್ಲ. ಅಲ್ಲಿ ಸಾಮಗ್ರಿಗಳ ಸಮಸ್ಯೆ, ಕೊರತೆಯಿದೆ ಎನ್ನುವ ಮಾಹಿತಿಯಿದೆ. ಕ್ಯೂರಿಂಗ್ ಮಾಡುವ ಉದ್ದೇಶದಿಂದ ಕೂಡ ವಿಳಂಬವಾಗುತ್ತಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.‌ ಈ ಬಗ್ಗೆ ಗಮನಹರಿಸಿ ಯಾರು ಕಾಮಾಗಾರಿ ಮಾಡುತ್ತಿದ್ದಾರೆಂದು ತಿಳಿದು ಶೀಘ್ರವಾಗಿ ಕಾಮಗಾರಿ ಮುಗಿಸಲು ನಿರ್ದೇಶಿಸುತ್ತೇನೆ” ಎಂದು ತಿಳಿಸಿದರು.

“ಒಟ್ಟಿನಲ್ಲಿ  ಹತ್ತಾರು ತಿಂಗಳಿನಿಂದ ಕಾಮಗಾರಿ ವಿಳಂಬದಿಂದಾಗಿ ತೊಂದರೆ ಅನುಭವಿಸುತ್ತಿರುವ ಮಕ್ಕಳಿಗೆ, ನಾಗರಿಕರಿಗೆ ಶೀಘ್ರ ಸಮರ್ಪಕ ರಸ್ತೆ ನಿರ್ಮಾಣ ಮಾಡಿ ತೊಂದರೆಯಿಂದ ಮುಕ್ತಿ ಕೊಡಿಸಬೇಕು” ಎನ್ನುವುದು ಚಳ್ಳಕೆರೆ ಜನತೆಯ ಆಶಯ.

WhatsApp Image 2025 11 17 at 5.21.38 PM
ವಿನಾಯಕ್ ಚಿಕ್ಕಂದವಾಡಿ
+ posts

ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...