ಮಂಡ್ಯ | ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತದಲ್ಲಿ ಸಾವಿಗೀಡಾದ ಪೂರ್ಣಚಂದ್ರ ಕುಟುಂಬಕ್ಕೆ ಚಲುವರಾಯಸ್ವಾಮಿ ಸಾಂತ್ವಾನ

Date:

ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ 18 ವರ್ಷಗಳ ಬಳಿಕ ಭರ್ಜರಿ ಜಯಗಳಿಸಿದ ಆರ್‌ಸಿಬಿ ತಂಡದ ವಿಜಯೋತ್ಸವವನ್ನು ನೇರವಾಗಿ ವೀಕ್ಷಣೆ ಮಾಡಲು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಕೃಷ್ಣರಾಜಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದ ಪೂರ್ಣಚಂದ್ರ ತಾಯಿ ಕಾಂತಮಣಿ ಅವರಿಗೆ ಸರ್ಕಾರಿದಂದ ಬಿಡುಗಡೆಯಾಗಿದ್ದ ₹25 ಲಕ್ಷ ರೂಪಾಯಿಗಳ ಚೆಕ್ ನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ವಿತರಣೆ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಮಾತನಾಡಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ರಾಯಸಮುದ್ರ ಗ್ರಾಮದ ಶಿಕ್ಷಕ ಆರ್. ಬಿ. ಚಂದ್ರು ಮತ್ತು ಕಾಂತಮಣಿ ದಂಪತಿಗಳ ಪುತ್ರ ಪೂರ್ಣಚಂದ್ರ ಸೇರಿದಂತೆ 11ಜನ ಕ್ರೀಡಾ ಪ್ರೇಮಿಗಳು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಇಂತಹ ದುರಂತ ನಡೆಯಬಾರದಿತ್ತು.

ಕಾಲ್ತುಳಿತದಲ್ಲಿ ಮೃತಪಟ್ಟ ಎಲ್ಲಾ 11 ಮಂದಿ ಕುಟುಂಬಕ್ಕೂ ರಾಜ್ಯ ಸರ್ಕಾರವೂ ತಲಾ ₹25 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಿರುತ್ತದೆ. ಸರ್ಕಾರವು ಎಷ್ಟೇ ಪರಿಹಾರ ನೀಡಬಹುದು. ಕಳೆದು ಹೋದ ಜೀವವನ್ನು ವಾಪಸ್ ತರಲು ಸಾಧ್ಯವಾಗುವುದಿಲ್ಲ. ಪುತ್ರನನ್ನು ಕಳೆದುಕೊಂಡ ಪೋಷಕರು ಮತ್ತು ಕುಟುಂಬದವರ ಮನಸ್ಸಿಗೆ ಆಗಿರುವ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಬೈಕ್, ಟ್ಯಾಕ್ಸಿ ಚಾಲಕರ ಸಭೆ; ಪ್ರತಿಭಟನೆಗೆ ನಿರ್ಧಾರ

ಭೇಟಿಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್, ಶಾಸಕ ಹೆಚ್. ಟಿ. ಮಂಜು, ತಹಶಿಲ್ದಾರ್ ಎಸ್. ಯು. ಅಶೋಕ್, ಮಾಜಿ ಶಾಸಕ ಕೆ. ಬಿ. ಚಂದ್ರಶೇಖರ್, ಜಿ.ಪಂ. ಮಾಜಿ ಉಪಾಧ್ಯಕ್ಷ ಎಸ್. ಅಂಬರೀಶ್, ನಿವೃತ್ತ ಪ್ರಾಂಶುಪಾಲ ಆರ್. ಟಿ. ಶಿವಕುಮಾರ್, ಗ್ಯಾಸ್ ರಾಜಶೇಖರ್, ಮಡುವಿನ ಕೋಡಿ ಕಾಂತರಾಜು, ರಾಜಯ್ಯ, ಹೆತ್ತಗೋನಹಳ್ಳಿ ನಾರಾಯಣ ಗೌಡ, ಗ್ರಾ.ಪಂ. ಉಪಾಧ್ಯಕ್ಷ ಯೋಗೇಶ್, ಸಚಿವರ ಆಪ್ತ ಸಹಾಯಕರಾದ ಚೇತನಾ ಮಹೇಶ್, ಅರಳಕುಪ್ಪೆ ಪ್ರತಾಪ್, ಸರ್ಕಲ್ ಇನ್ಸ್ಪೆಕ್ಟರ್ ಸುಮಾ ರಾಣಿ, ಎಸ್.ಐ ನವೀನ್ ಸೇರಿದಂತೆ ಇನ್ನಿತರರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...