ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿ ನಂಬರ್ ಒನ್: ಮಾಜಿ ಶಾಸಕ ಸುರೇಶ್‌ ಗೌಡ ಆರೋಪ

Date:

  • ‘300 ಕೋಟಿ ರೂ. ಚಲುವರಾಯಸ್ವಾಮಿ ಒಬ್ಬನೇ ಲೂಟಿ ಹೊಡೆದಿದ್ದಾನೆ
  • ‘ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ದುಡ್ಡನ್ನು ಏರ್‌ಲಿಫ್ಟ್ ಮಾಡುತ್ತಿದೆ’

ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿ ನಂಬರ್ ಒನ್.‌ ಅಧಿಕಾರ ಸಿಕ್ಕಾಗ ಜನರಿಗೆ ಒಳ್ಳೆಯದು ಮಾಡಬೇಕು. ಆದರೆ, ಇವರು ಅಧಿಕಾರಿಗಳ ವರ್ಗಾವಣೆಯಲ್ಲಿ 150 ಕೋಟಿ ರೂ., ಜಲಧಾರೆ ಯೋಜನೆ 100 ಕೋಟಿ ರೂ., ಅಧಿಕಾರಿಗಳ ಬಳಿ ಲೂಟಿ ಹೀಗೆ 300 ಕೋಟಿ ರೂ. ಚಲುವರಾಯಸ್ವಾಮಿ ಒಬ್ಬನೇ ಲೂಟಿ ಹೊಡೆದಿದ್ದಾನೆ ಎಂದು ಮಾಜಿ ಶಾಸಕ ಸುರೇಶ್‌ ಗೌಡ ಆರೋಪಿಸಿದರು.

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ದುಡ್ಡನ್ನು ಏರ್‌ಲಿಫ್ಟ್ ಮಾಡುತ್ತಿದೆ. ಹಿಂದಿನ ಸರ್ಕಾರ ಜೆಸಿಬಿಯಲ್ಲಿ ಹಣ ತುಂಬುತ್ತಿದೆ ಎನ್ನುತ್ತಿದ್ದರು. ಆದರೆ ಈ ಸರ್ಕಾರ ಭ್ರಷ್ಟ ಹಣವನ್ನು ಏರ್‌ಲಿಫ್ಟ್ ಮಾಡುತ್ತಿದೆ. ಇವರು ರಾಜ್ಯವನ್ನೇ ಲೂಟಿ ಹೊಡೆಯುತ್ತಿದ್ದಾರೆ” ಎಂದು ದೂರಿದರು.

“ಚಲುವರಾಯಸ್ವಾಮಿಗೆ ಬ್ರೈನ್ ಮ್ಯಾಪಿಂಗ್ ಮಾಡಬೇಕು. ಎಲ್ಲೆಲ್ಲಿ ಎಷ್ಟೆಷ್ಟು ತಿಂದಿದ್ದಾನೆ ಗೊತ್ತಾಗುತ್ತದೆ. ಕಾಂಗ್ರೆಸ್ ಪಕ್ಷದ ಯುವ ಅಧ್ಯಕ್ಷನದು ಬೆಂಗಳೂರಿನಲ್ಲಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದೆ. ಅಲ್ಲಿ ಚಲುವರಾಯಸ್ವಾಮಿ ಎಷ್ಟು ಬ್ಲಾಕ್‌ ಮನಿ ವೈಟ್ ಮಾಡಿದ್ದಾನೆ? ಅದೆಲ್ಲವೂ ಆಚೆ ಬರುತ್ತದೆ. ಬೆಳ್ಳೂರು ಕ್ರಾಸ್‌ನಲ್ಲಿ ಪೆಟ್ರೋಲ್ ಬಂಕ್​ ಮಾಲೀಕರ ಹತ್ತಿರ ಎಷ್ಟು ಕಲೆಕ್ಷನ್ ಮಾಡುತ್ತಿದ್ದಾನೆ?ಎಲ್ಲವೂ ಜನರಿಗೆ ಗೊತ್ತಾಗಲಿ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಹೊಲೆಗೇರಿ’ ಹೇಳಿಕೆ | ಸಿಎಂ ಜೊತೆ ಚರ್ಚಿಸಿ ಕಾನೂನು ಕ್ರಮ: ಗೃಹ ಸಚಿವ ಪರಮೇಶ್ವರ್

“ತಿಂದವನು ಕಕ್ಕಲೇ ಬೇಕು. ಮುಂದೆ ಎಲ್ಲ ಗೊತ್ತಾಗುತ್ತೆ. ಅಧಿಕಾರಗಳು ಪತ್ರ ಬರೆದದ್ದು ಸತ್ಯ. ಬೆಂಗಳೂರಿ‌ನ 37 ಕ್ರೆಸೆಂಟ್ ಹೋಟೆಲ್‌ಗೆ ಅಧಿಕಾರಿಗಳನ್ನು ಕರೆಸಿಕೊಂಡು ಒತ್ತಡ ಹೇರಿದ್ದಾರೆ. ಎಲ್ಲ ಬಿಗಿ ಭದ್ರತೆ ಮಾಡಿಕೊಂಡು, ಅಧಿಕಾರಗಳು ಪತ್ರ ಬರೆದಿಲ್ಲ ಎಂದು ಸುಳ್ಳು ಹೇಳಿದ್ದಾರೆ. 37 ಕ್ರೆಸೆಂಟ್ ಹೋಟೆಲ್ ಹಾಗೂ ಆ ರಸ್ತೆಯ ಸಿಸಿಟಿವಿ ದೃಶ್ಯ ತೆಗೆಸಿ. ಆಗ ಯಾವ ಎಡಿ, ಜೆಡಿ ಯಾರೆಲ್ಲಾ ಹೋಗಿದ್ದರು ತಿಳಿಯುತ್ತದೆ” ಎಂದರು.

“ನನ್ನ ಚರಿತ್ರೆ ಬಗ್ಗೆ ಮಾತನಾಡುತ್ತಾನೆ. ಇವನ ಚರಿತ್ರೆ ಹಳಸಿ ಹೋಗಿದೆ. ಇವನ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದರೂ ನೊಣ ಬಿದ್ದ ನಮ್ಮ ತಟ್ಟೆಯನ್ನು ನೋಡುತ್ತಾನೆ. ನಾನು ಸೋತಿದ್ದೀನಿ, ಸತ್ತಿಲ್ಲ. 30 ರಿಂದ 40 ಸಾವಿರ ಅಂತರದಲ್ಲಿ ಸೋತಿದ್ದರೇ ರಾಜಕಾರಣವನ್ನೇ ಬಿಟ್ಟು ಬಿಡುತ್ತಿದ್ದೆ. 47 ಸಾವಿರ ಅಂತರದಲ್ಲಿ ಸೋತವನೆ ತಲೆ ಎತ್ತಿಕೊಂಡು ಬಂದಿದ್ದಾನೆ. ನಾನು 4 ಸಾವಿರ ಅಂತರದಲ್ಲಿ ಸೋತವನು ನಾನು ಏಕೆ ತಲೆ ಕೆಡಿಸಿಕೊಳ್ಳಬೇಕು. ನಾನು ಎಲ್ಲರಿಗೂ ಗೌರವ ಕೊಡುತ್ತೇನೆ. ಆದರೆ ಚಲುವರಾಯಸ್ವಾಮಿ ಬಗ್ಗೆ ನನಗೆ ಭಯವೂ ಇಲ್ಲ, ಗೌರವವೂ ಇಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...