ಚಾಮರಾಜನಗರ | ತಾಂತ್ರಿಕ ಕಾರಣಗಳಿಂದ 273 ಕುಟುಂಬ ಜಾತಿ ಗಣತಿ ನೋಂದಣಿಯಿಂದ ಹಿಂದುಳಿದಿದೆ : ವಡಗೆರೆ ದಾಸ್

Date:

ಚಾಮರಾಜನಗರ ಜಿಲ್ಲೆ, ಯಳಂದೂರು ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಅಂಬೇಡ್ಕರ್ ಸೇವಾ ಸಮಿತಿ ಮತ್ತು ಆಚರಣಾ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡ ವಡಗೆರೆ ದಾಸ್ ಮಾತನಾಡಿ ‘ ಯಳಂದೂರು ತಾಲ್ಲೂಕಿನಲ್ಲಿ ಶೇ 95.6 ರಷ್ಟು ಸಮೀಕ್ಷೆ ಮುಗಿದಿದೆ ಕೆಲವು ತಾಂತ್ರಿಕ ಕಾರಣಗಳಿಂದ 273 ಕುಟುಂಬ ಜಾತಿ ಗಣತಿ ನೋಂದಣಿಯಿಂದ ಹಿಂದುಳಿದಿದೆ ‘ ಎಂದು ಮಾಹಿತಿ ನೀಡಿದರು.

ರಾಜ್ಯ ಸರ್ಕಾರ ಏಕ ಸದಸ್ಯ ಆಯೋಗ ರಚಿಸಿ ನಿವೃತ್ತ ಜಸ್ಟಿಸ್ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಒಳಮೀಸಲಾತಿಯ ಅಂಗವಾಗಿ ಜಾತಿ ಗಣತಿ ಕಾರ್ಯವನ್ನು ರಾಜ್ಯಾದ್ಯಂತ ನಡೆಸುತ್ತಿದೆ. ಯಳಂದೂರು ತಾಲ್ಲೂಕಿನಲ್ಲಿ ಕಳೆದ ಹದಿನೈದು ದಿನಗಳಿಂದ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಹೊಲಯ ( ಬಲಗೈ) ಸಮುದಾಯ ಶೇ 95.6% ಸಮೀಕ್ಷೆ ಮುಗಿದಿದೆ. ಸಮೀಕ್ಷೆ ದಿನವನ್ನು ಮತ್ತೇ 29 ರ ತನಕ ಮುಂದುವರೆಸಿರುವುದರಿಂದ ಶೇ 100% ರಷ್ಟು ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.

ಒಟ್ಟು ಹೊಲಯ ಕುಟುಂಬ ಪಡಿತರ ಚೀಟಿಯ ಪ್ರಕಾರ 5,956 ಕುಟುಂಬಗಳಿವೆ. ಇದರಲ್ಲಿ ನೋಂದಾಯಸಿರುವ 5,683. ನೋಂದಣಿ ಆಗದೇ ಇರುವ 273. ಒಟ್ಟು ಶೇ 95.6% ಆಗಿದೆ. ಉಳಿದ 273 ಕುಟುಂಬದವರದು ತಾಂತ್ರಿಕ ದೋಷದಿಂದ ಕೂಡಿದೆ ಅದನ್ನು ಸರಿ ಪಡಿಸಿ ಉಳಿದ ದಿನಗಳಲ್ಲಿ ಸಂಪೂರ್ಣಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಯಳಂದೂರು ತಾಲ್ಲೂಕಿನಲ್ಲಿ ಕಿನಕಹಳ್ಳಿ, ಕಂದಹಳ್ಳಿ, ಮೆಲ್ಲಹಳ್ಳಿ, ಅಗರ, ರಾಮಾಪುರ, ಅಗ್ರಹಾರ, ಬಿ ಆರ್ ಹಿಲ್ಸ್ ಗಳಲ್ಲಿ ಪೂರ್ಣಗೊಂಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಿನಕಹಳ್ಳಿ ರಾಚಯ್ಯ ಮಾತನಾಡಿ ಚಾಮರಾಜನಗರ ಜಿಲ್ಲೆ ಒಳಮೀಸಲಾತಿ ಜಾತಿ ಗಣತಿಯಲ್ಲಿ ಬಲಗೈ ಸಮುದಾಯದ ಪ್ರತಿಯೊಬ್ಬರೂ ‘ಹೊಲಯ’ ಎಂದು ನಮೂದಿಸಲು ತಿಳಿಸಲಾಗಿದೆ. ಈ ಹಿನ್ನಲೆಯಲ್ಲಿ ಯಳಂದೂರು ತಾಲ್ಲೂಕು ಶೇ 95% ಸಮೀಕ್ಷೆ ಮುಗಿದಿದೆ. ಜಿಲ್ಲೆಯಲ್ಲಿ ಪಡಿತರ ಚೀಟಿಯ ಪ್ರಕಾರ ಒಟ್ಟು 70,243 ಕುಟುಂಬವಿದೆ ಒಟ್ಟು ಸದಸ್ಯರ ಸಂಖ್ಯೆ 2,33,603 ” ಇದೆ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಲಿಖಿತ ಸಂವಿಧಾನವಾದಿಗಳಿಂದ ಲಿಖಿತ ಸಂವಿಧಾನ ದುರ್ಬಲಗೊಳಿಸಲು ಹುನ್ನಾರ : ಸಚಿವ ಮಹದೇವಪ್ಪ

ಈ ಸಂದರ್ಭದಲ್ಲಿ ಕೆಸ್ತೂರು ಸಿದ್ದರಾಜು, ಗುಂಬಳ್ಳಿ ಮಹದೇವ್, ಯರಿಯೂರು ರಾಜಣ್ಣ, ಜಯರಾಮ್,ಹೊನ್ನೂರು ವೆಂಕಟೇಶ್, ಮಲ್ಲಿಕಾರ್ಜುನ, ಮದ್ದೂರು ಉಮಾಶಂಕರ್, ವೈ ಕೆ ಮೋಳೆ ನಂಜುಂಡ, ಯರಿಯೂರು ನಾಗೇಂದ್ರ, ಗೌತಮ್ ಬಡಾವಣೆ ವಜ್ರಮುನಿ, ಶಶಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...