ಚಾಮರಾಜನಗರ | ಹನೂರಿ‌ನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರೈ

Date:

  • ತಮ್ಮ ಒಡೆತನದ ಪಿಆರ್‌ಎಫ್ ಫೌಂಡೇಶನ್ ವತಿಯಿಂದ ಕೊಡುಗೆ
  • ಕಾಮಗೆರೆ ಹೋಲಿಕ್ರಾಸ್ ಬಳಿ ಇರುವ ಆಸ್ಪತ್ರೆಗೂ ಆಂಬ್ಯುಲೆನ್ಸ್‌ ನೀಡಿಕೆ

ಬಹುಭಾಷಾ ನಟ ಪ್ರಕಾಶ್ ರೈ ಅವರು ತಮ್ಮ ಒಡೆತನದ ಪಿಆರ್‌ಎಫ್ ಫೌಂಡೇಶನ್ ವತಿಯಿಂದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಮಗೆರೆ ಹೋಲಿಕ್ರಾಸ್ ಬಳಿ ಇರುವ ಸರ್ಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್‌ಗಳನ್ನು ಕೊಡುಗೆ ನೀಡುವ ಮೂಲಕ ತಮ್ಮ ಸಮಾಜಮುಖಿ ಸೇವೆಗಳನ್ನು ಮುಂದುವರೆಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಅಪ್ಪು ಹೆಸರಿನ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ್ದು, ರಾಜ್ಯದ ಪ್ರತೀ ಜಿಲ್ಲೆಗಳಿಗೂ ಇದನ್ನು ವಿಸ್ತರಿಸುವ ಯೋಜನೆಯನ್ನು ಪ್ರಕಾಶ್‌ ರೈ ಒಡೆತನದ ಪಿಆರ್‌ಎಫ್ ಫೌಂಡೇಶನ್ ಹಮ್ಮಿಕೊಂಡಿದೆ.

ನಟ ಪ್ರಕಾಶ್‌ ರೈ ಮಾತನಾಡಿ, “ನಾನು ಪುನೀತ್ ರಾಜ್‌ಕುಮಾರ್ ಅವರ ಜೊತೆ ಮೂರು ಸಿನಿಮಾಗಳಲ್ಲಿ ನಟಿಸಿದ್ದು, ಅವರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡಿದ್ದೆ. ಕೋವಿಡ್-19 ವೇಳೆಯಲ್ಲಿ ಅವರು ನನಗೆ ದೇಣಿಗೆ ರೂಪದಲ್ಲಿ ಸಾಕಷ್ಟು ಹಣ ಸಹಾಯ ಮಾಡಿದ್ದರು” ಎಂದು ನೆನಪಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪುನೀತ್ ರಾಜ್‌ಕುಮಾರ್‌ ಮೃತಪಡುವ ವೇಳೆ ಅವರಿಗೆ ಸಕಾಲದಲ್ಲಿ ಆಂಬ್ಯುಲೆನ್ಸ್ ಸಿಕ್ಕಿದ್ದರೆ ಬದುಕುತ್ತಿದ್ದರು ಎಂಬ ಮಾತುಗಳು ಕೇಳಿ ಬಂದಿತ್ತು. ಈ ಪರಿಸ್ಥಿತಿ ಯಾರಿಗೂ ಬರಬಾರದು ಎನ್ನುವ ಉದ್ದೇಶದಿಂದ ಅವರ ಹೆಸರಿನಲ್ಲಿ ಆಂಬ್ಯುಲೆನ್ಸ್ ನೀಡಲಾಗುತ್ತಿದೆ” ಎಂದು ತಿಳಿಸಿದರು.

337155694 1382588895907511 6223405779653029022 n

ಹೋಲಿಕ್ರಾಸ್ ಆಸ್ಪತ್ರೆಗೂ ಕೊಡುಗೆ

ಕಳೆದ ಕೆಲ ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಕಿಚ್ಚಗುತ್ತಿ ಮಾರಮ್ಮನ ದೇವಾಲಯದಲ್ಲಿ ವಿತರಿಸಿದ್ದ ವಿಷ ಪ್ರಸಾದ ದುರಂತ ಪ್ರಕರಣದ ವೇಳೆ ಹೋಲಿಕ್ರಾಸ್ ಆಸ್ಪತ್ರೆಯು ಗಣನೀಯ ಆರೋಗ್ಯ ಸೇವೆ ಒದಗಿಸಿತ್ತು. ಇಲ್ಲಿನ ಆಸ್ಪತ್ರೆಗೂ ಪ್ರಕಾಶ್ ರೈ ಆ್ಯಂಬುಲೆನ್ಸ್ ಕೊಡುಗೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಹೋಲಿಕ್ರಾಸ್ ಆಸ್ಪತ್ರೆಯು ಹಲವು ವರ್ಷಗಳಿಂದ ಬಡಜನರಿಗೆ ಆರೋಗ್ಯ ಸೇವೆ ಒದಗಿಸುತ್ತಾ ಬಂದಿದೆ. ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶದ ಜನರಿಗೆ ಅನುಕೂಲವಾಗಲೆಂದು ಆ್ಯಂಬುಲೆನ್ಸ್ ಕೊಡುಗೆ ನೀಡಿದ್ದೇನೆ” ಎಂದು ಹೇಳಿದರು.

ಹೋಲಿಕ್ರಾಸ್ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಡೆಲಿನಾ ಮಾತನಾಡಿ, “ನಮ್ಮ ಆಸ್ಪತ್ರೆ ಸೇವೆಯನ್ನು ಗುರುತಿಸಿ ಆ್ಯಂಬುಲೆನ್ಸ್‌ಗಳನ್ನು ಕೊಡುಗೆ ನೀಡಿರುವ ಪ್ರಕಾಶ್ ರೈ ಅವರಿಗೆ ನಮ್ಮ ಸಿಬ್ಬಂದಿಗಳ ವತಿಯಿಂದ ಧನ್ಯವಾದಗಳನ್ನು ತಿಳಿಸಿ, ಇಂತಹ ಅವಕಾಶವನ್ನು ಬಳಸಿಕೊಂಡು ಕಾಡಂಚಿನ ಗುಡ್ಡ ಪ್ರದೇಶದ ಜನರಿಗೆ ಇನಷ್ಟು ಸೇವೆ ಸಲ್ಲಿಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...