ಚಾಮರಾಜನಗರ | ಅಂಬೇಡ್ಕರ್ ಫ್ಲೆಕ್ಸ್ ವಿರೂಪ, ಬುದ್ಧ ಪ್ರತಿಮೆ ಭಗ್ನ ಪ್ರಕರಣ; ಆರೋಪಿ ಬಂಧನ

Date:

ಚಾಮರಾಜನಗರ ಗ್ರಾಮಾಂತರ ತಾಲ್ಲೂಕು ಜ್ಯೋತಿಗೌಡನಪುರ ಗ್ರಾಮದಲ್ಲಿ ಬೌದ್ಧ ವಿಹಾರದ ಒಳ ಹೊಕ್ಕು ಬುದ್ಧರ ಪ್ರತಿಮೆ ಭಗ್ನಗೊಳಿಸಿ, ಅಂಬೇಡ್ಕರ್ ಫ್ಲೆಕ್ಸ್ ವಿರೂಪಗೊಳಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಬಿ.ಟಿ. ಕವಿತಾ ಅವರು ಪತ್ರಿಕಾಗೋಷ್ಠಿ ನಡೆಸಿ ಪ್ರಕರಣಕ್ಕೆ ಸಂಭಂಧಿಸಿದಂತೆ ಸದರಿ ಗ್ರಾಮದ ನಾಯಕ ಸಮುದಾಯದ ಮುನಿಸ್ವಾಮಿ ನಾಯಕ ಅವರ ಮಗ, ಮಂಜುನಾಥ (31) ಎಂಬುವನನ್ನು ಪೊಲೀಸರು ಬಂಧಿಸಿ, ಹೆಚ್ಚಿನ ತನಿಖೆಗೆ ಒಳಪಡಿಸಿರುವುದಾಗಿ ತಿಳಿಸಿದರು.

ಘಟನೆಗೆ ಕಾರಣ, ಕಳೆದ ಎರಡು ತಿಂಗಳ ಹಿಂದೆ ಅಂಗಡಿಯೊಂದರಲ್ಲಿ ಸಾಮಾನು ಖರೀದಿಸುವ ವೇಳೆ ನಾ ಮೊದಲು, ತಾನು ಮೊದಲು ಸಾಮಾನು ಖರೀದಿ ಮಾಡಬೇಕು ಎನ್ನುವ ವಿಚಾರಕ್ಕೆ ಗಲಾಟೆ ನಡೆದು, 60 ವರ್ಷ ವಯೋಮಾನದ ನಾಗಬಸಮ್ಮ ಎಂಬ ದಲಿತ ಮಹಿಳೆಯನ್ನು ಚಪ್ಪಲಿಯಲ್ಲಿ ಹೊಡೆದಿದ್ದ ಎನ್ನಲಾಗಿದೆ. ಈ ಕಾರಣಕ್ಕೆ ಸದರಿ ಗ್ರಾಮದಲ್ಲಿ ನ್ಯಾಯ ಪಂಚಾಯತಿ ನಡೆಸಿ 60 ಸಾವಿರ ದಂಡ ವಿಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದರಂತೆ, ಅದೇ ದಿನ ₹30 ಸಾವಿರ ರೂಪಾಯಿಯನ್ನು ಅವರ ಬಾವ ಒಡವೆ ಒತ್ತೆಯಿಟ್ಟು ಕೊಟ್ಟಿರುತ್ತಾರೆ. ಬಳಿಕ ಬೈಕ್ ಮಾರಾಟ ಮಾಡಿ ₹30 ಸಾವಿರ ಬಾಕಿ ಹಣ, ಬಾವ ಅಡಮಾನ ಇರಿಸಿದ್ದ ಒಡವೆ ಬಿಡಿಸಲು ಕೊಟ್ಟಿರುವುದಾಗಿ ತಿಳಿದುಬಂದಿದೆ. ಇದೇ ವೈಷಮ್ಯದಿಂದ ಪಾನಮತ್ತನಾಗಿ ಮಧ್ಯರಾತ್ರಿ ಸಮಯದಲ್ಲಿ ಅಂಬೇಡ್ಕರ್ ಫ್ಲೆಕ್ಸ್ ವಿರೂಪಗೊಳಿಸಿ, ಬುದ್ಧರ ಪ್ರತಿಮೆ ಭಗ್ನಗೊಳಿಸಿರುವುದಾಗಿ ಸಾಕ್ಷಿಯಿಂದ ತಿಳಿದು ಬಂದಿರುವುದಾಗಿ ಹೇಳಿದರು.

ಈ ವ್ಯಕ್ತಿ ನಾಯಕ ಸಮುದಾಯಕ್ಕೆ ಸೇರಿದ್ದು, ಶಾಮಿಯಾನವೊಂದರಲ್ಲಿ ಕೆಲಸ ಮಾಡುತ್ತಿರುತ್ತಾನೆ. ಈ ಹಿಂದೆಯೂ ಬೇರೆ ಬೇರೆ ವಿಚಾರಗಳಲ್ಲಿ ಮೂರು ಪ್ರಕರಣಗಳು ದಾಖಲಾಗಿರುತ್ತದೆ. ಸ್ವಭಾವದಲ್ಲಿ ಒರಟನಾಗಿದ್ದು, ಕುಡಿತದ ಸಂಧರ್ಭದಲ್ಲಿ ಏನು ಬೇಕಾದರು ಮಾಡಬಹುದಾದ ವ್ಯಕ್ತಿತ್ವ ಹೊಂದಿರುವವನು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ‘ಗ್ರೇಟರ್ ಮೈಸೂರು’ ನಗರದ ಘನತೆ, ಸಂಸ್ಕೃತಿ, ವಿಶಾಲತೆಗೆ ಧಕ್ಕೆಯಾಗಬಾರದು; ಸಿಎಂ ಸಿದ್ದರಾಮಯ್ಯ

ಘಟನೆ ಖಂಡಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆದಿತ್ತು. ವ್ಯಾಪಕವಾಗಿ ಖಂಡಿಸಿ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...