ಚಾಮರಾಜನಗರ | ಚುಕ್ಕಿಚರ್ಮ ರೋಗ ಪ್ರತ್ಯಕ್ಷ; ಮಕ್ಕಳು ಹೈರಾಣು

Date:

ಚಾಮರಾಜನಗರ ಜಿಲ್ಲೆಯಲ್ಲಿ ಈ ಹಿಂದೆ ಬೆಳಕಿಗೆ ಬಂದಿದ್ದ ಚುಕ್ಕಿಚರ್ಮ ಕಾಯಿಲೆ ಮತ್ತೆ ಕಾಣಿಸಿಕೊಂಡಿದೆ. ಚುಕ್ಕಿಚರ್ಮ ರೋಗ ಎಂದು ಕರೆಯಲಾಗುವ ಈ ಕಾಯಿಲೆ ವೈದ್ಯರಿಗೆ ಸವಾಲಾಗಿ ಕಂಡುಬಂದಿದೆ.

ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು, ಭದ್ರಯ್ಯನಹಳ್ಳಿ, ಶೆಟ್ಟಳ್ಳಿ ವ್ಯಾಪ್ತಿಯಲ್ಲಿ ಈ ಕಾಯಿಲೆ ಬೆಳಕಿಗೆ ಬಂದಿದೆ. ಮಾರಣಾಂತಿಕವಾಗಿರುವ ಈ ರೋಗ ಬಂದರೆ, ಸಾವು ಖಚಿತ ಎಂದು ಸ್ಥಳೀಯರು ಆತಂಕಪಡುತ್ತಿದ್ದಾರೆ.

2015ರಲ್ಲಿ ಇದೇ ಭಾಗದಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು. ಇದೊಂದು ಬಗೆಯ ಆಟೋಇಮ್ಯೂನ್ ಕಾಯಿಲೆ ಎಂದು ವೈದ್ಯರು ಕರೆದಿದ್ದಾರೆ. ಈ ಕಾಯಿಲೆ ಅಂಟಿದ ಮಕ್ಕಳು 18 ವರ್ಷದವರೆಗೆ ಬದುಕುವುದೇ ಹೆಚ್ಚು ಎನ್ನಲಾಗಿದೆ. ಚುಕ್ಕಿಚರ್ಮ ರೋಗಕ್ಕೆ ಔಷಧಿಯೇ ಇಲ್ಲದ ಕಾರಣ ಹಲವು ಮಕ್ಕಳು ಮೃತಪಟ್ಟಿದ್ದಾರೆ. ಕೆಲವು ಔಷಧಿಗಳ ಮೂಲಕ ಚುಕ್ಕಿಚರ್ಮ ರೋಗದ ಕೆಲವು ಲಕ್ಷಣಗಳನ್ನು ಗುಣಪಡಿಸಬಹುದಾಗಿದೆ. ಆದರೆ ಈ ಕಾಯಿಲೆ ವಾಸಿಯಾಗುವುದಿಲ್ಲ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನ ಎಲ್ಲ ಅಂಗ ಸಂಸ್ಥೆಗಳು ದೇಶದ ಭದ್ರ ಬುನಾದಿ ಗಟ್ಟಿಗೊಳಿಸಲು ಶ್ರಮಿಸಬೇಕು; ಕನ್ನಯ್ಯ ಕುಮಾರ್

ರೋಗ ಲಕ್ಷಣ : ಈ ರೋಗದಲ್ಲಿ ಮೊದಲು ಚರ್ಮದಲ್ಲಿ ಹುಣ್ಣು, ಬಿಳಿ ಮಚ್ಚೆ ಕಾಣಿಸಿಕೊಳ್ಳುತ್ತವೆ. ಚರ್ಮ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಕಣ್ಣು ಊದಿಕೊಳ್ಳುತ್ತದೆ. ಅನುವಂಶಿಕವಾಗಿ ಈ ಕಾಯಿಲೆ ಕೆಲವು ಕುಟುಂಬಗಳಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ಹನೂರು ಸುತ್ತಲಿನ ಎಂಟು ಮಕ್ಕಳಲ್ಲಿ ಚುಕ್ಕಿ ಚರ್ಮರೋಗ ಲಕ್ಷಣ ಪತ್ತೆಯಾಗಿದ್ದು, ಬಡ ಕುಟುಂಬಗಳಿಗೆ ಶಾಪವಾಗಿ ಪರಿಣಮಿಸಿದೆ. ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಮೇಲಧಿಕಾರಿಗಳಿಗೆ ಈ ಬಗ್ಗೆ ವರದಿ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...