ಚಾಮರಾಜನಗರ | ಮೇ. 26 ರಂದು ಭೀಮೋತ್ಸವ; ಪ್ರಗತಿಪರ ಸಂಘಟನೆಗಳ ಬೆಂಬಲ

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯ ಮೈ ಜ್ಯೂಸ್ ಕಮೀಟಿ ಹಾಲ್ ನಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣಾ ಸಮಿತಿ ನಡೆಸಿದ ಸಭೆಯಲ್ಲಿ ಮೇ. 26 ರ ಭೀಮೋತ್ಸವಕ್ಕೆ ಪ್ರಗತಿಪರ ಸಂಘಟನೆಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.

ಕನ್ನಡ ಸಾಹಿತ್ಯ ಪರಿಷತ್ತು , ಕರ್ನಾಟಕ ರಾಜ್ಯ ರೈತ ಸಂಘ , ಹಸಿರು ಸೇನೆ , ದಲಿತ ಸಂಘರ್ಷ ಸಮಿತಿ , ( ಕೃಷ್ಣಪ್ಪ ಬಣ) , ಕರ್ನಾಟಕ ರಕ್ಷಣಾ ವೇದಿಕೆ , ಜಾರಕಿಹೋಳಿ ಬ್ರಿಗೇಡ್, ಕರ್ನಾಟಕ ಗ್ರಾಮ ಪಂಚಾಯತಿ ಸದಸ್ಯರುಗಳ ಮಹಾ ಒಕ್ಕೂಟ , ಮಾನವ ಬಂಧುತ್ವ ವೇದಿಕೆ, ಕರ್ನಾಟಕ ಕಾವಲು ಪಡೆ , ಕುವೆಂಪು ಕನ್ನಡ ಸಾಹಿತ್ಯ ವೇದಿಕೆ , ಸೃಷ್ಟಿ ಸಂಸ್ಥೆ , ರೂಟ್ಸ್ ಫಾರ್ ಫ್ರೀಡಂ , ಗಡಿನಾಡು ರಕ್ಷಣಾ ಸೇನೆ , ನಮ್ಮ ಕರ್ನಾಟಕ ಸೇನೆ , ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆ , ವನ್ಯಜೀವಿ ಮತ್ತು ಪರಿಸರ ಸಂರಕ್ಷಣಾ ಸಂಘ , ಗಿರಿಜನ ಶ್ರೇಯೋಭಿವೃಧ್ಧಿ ಸಂಘ , ಬಿ ವಿ ಎಸ್ , ಗೃಹ ರಕ್ಷಣಾ ದಳ , ಮಹಾನಾಯಕ ಶ್ರೇಯೋಭಿವೃಧ್ಧಿ ಸಂಘ ಮುಂತಾದ ಹಲವಾರು ಸಂಘಟನೆಗಳು ಬೆಂಬಲವನ್ನು ನೀಡಲು ಒಮ್ಮತದ ನಿರ್ಧಾರ ಕೈಗೊಂಡರು.

ರೈತ ಮುಖಂಡ ಕುಂದಕೆರೆ ಸಂಪತ್ತು ಮಾತನಾಡಿ ‘ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ರವರು ರಾಷ್ಟ್ರೀಯ ಮಟ್ಟದ ನಾಯಕರಷ್ಟೆಯಲ್ಲ ಅವರು ವಿಶ್ವ ಮಟ್ಟದ ನಾಯಕರು. ಅವರ ಜಯಂತಿಯ ಕಾರ್ಯಕ್ರಮವನ್ನು ಗುಂಡ್ಲುಪೇಟೆ ಯಲ್ಲಿ ಅಚರಣೆ ಮಾಡುತ್ತಿರುವುದು ಹೆಮ್ಮೆಯ ವಿಷಯ ‘ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕವಿ ಚುಟುಕು ಮಾಧು ಮಾತನಾಡಿ ‘ ಸರ್ವ ಸಮುದಾಯದವರು ಸೇರಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭೀಮೋತ್ಸವ ಕಾರ್ಯಕ್ರಮ ಮಾಡುತ್ತಿರುವುದು ನಮಗೆಲ್ಲರಿಗೂ ಸಂತಸದ ವಿಚಾರ. ಎಲ್ಲರೂ ಒಟ್ಟುಗೂಡಿ ಸಂವಿಧಾನ ಶಿಲ್ಪಿಯವರ ಕಾರ್ಯಕ್ರಮ ಯಶಸ್ವಿಗೊಳಿಸೋಣ ‘ ಎಂದರು.

ಆಚರಣಾ ಸಮಿತಿ ಅಧ್ಯಕ್ಷರಾದ ಸುಭಾಷ್ ಮಾಡ್ರಳ್ಳಿ ಮಾತನಾಡಿ ‘ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಪ್ರಸ್ತುತ ಎಲ್ಲರ ಮನೆ ಮಾತಾಗಿದ್ದಾರೆ. ಅವರು, ನೀಡಿದ ಸಂವಿಧಾನ ಆಶಯಗಳು ಜನ ಸಾಮಾನ್ಯರಿಗೆ ತಲುಪಲು ಎಲ್ಲರನ್ನೂ ಒಳಗೊಂಡ ಭೀಮೋತ್ಸವ ಮೆರವಣಿಗೆ ಸ್ಪೂರ್ತಿಯಾಗಲಿದೆ ‘ ಎಂದು ಆಶಯ ವ್ಯಕ್ತಪಡಿಸಿದರು.

ಆಚರಣಾ ಸಮಿತಿ ಉಸ್ತುವಾರಿ ನವೀನ್ ಮೌರ್ಯ ಮಾತನಾಡಿ ‘ ಬಾಬಾ ಸಾಹೇಬ್ ಅಂಬೇಡ್ಕರ್ ನಮಗೆಲ್ಲರಿಗೂ ಆದರ್ಶ ವ್ಯಕ್ತಿ. ಅವರು ನೀಡಿದ ಸಂವಿಧಾನದ ಫಲವಾಗಿ ನಾವು ಹಕ್ಕು ಅಧಿಕಾರಗಳನ್ನ ಅನುಭವಿಸಲು ಸಾಧ್ಯವಾಗಿದೆ. ಹಾಗಾಗಿ, ಭಾರತದ ಎಲ್ಲಾ ಜನತೆ ಗೌರವಿಸಬೇಕಾಗಿದೆ. ಅವರ ಋಣ ತೀರಿಸಲು ಇಂತಹ ಭೀಮೋತ್ಸವ ಆಚರಣೆ ಮಾಡಲು ಮುಂದಾಗಿದ್ದೇವೆ ‘ ಎಂದರು.

ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್ ಅವರ ನೇತೃತ್ವವಹಿಸುವರು. ದಿವ್ಯ ಸಾನಿಧ್ಯ ಪೂಜ್ಯ ಕಲ್ಯಾಣ ಸಿರಿ ಭಂತೇಜಿ, ಲೋಕಸಭಾ ಸದಸ್ಯ ಸುನೀಲ್ ಬೋಸ್ , ಮಾಜಿ ಶಾಸಕ ಸಿ. ಎಸ್. ನಿರಂಜನ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿಲಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಸಾಮರಸ್ಯದ ಮೆರವಣಿಗೆ ನಡೆಯಲಿದ್ದು, ಇದೊಂದು ಐತಿಹಾಸಿಕ ಹೆಜ್ಜೆಗೆ ಸಾಕ್ಷಿಯಾಗಲಿದೆ ಎಂದು ಸಂಘಟಕರು ಆಶಯ ವ್ಯಕ್ತಪಡಿಸಿ. ಭೀಮೋತ್ಸವ ಮೆರವಣಿಗೆಯಲ್ಲಿ ಪಲ್ಲಕ್ಕಿ ಉತ್ಸವ, ನಾದಸ್ವರ ತಂಡ , ಗೊರವರ ಕುಣಿತ , ಗಿರಿ ಜನರ ನೃತ್ಯ , ಭಜನೆ ತಂಡ , ಕಲಾ ತಂಡ ಸೇರಿದಂತೆ 20 ಕ್ಕೂ ಹೆಚ್ಚು ಕಲಾ ತಂಡಗಳು ಮೆರವಣಿಗೆಗೆ ಮೆರಗು ತರಲಿದೆ ಎಂದು ಮಾಹಿತಿ ನೀಡಿದರು.

ಈ ವಿಶೇಷ ವರದಿ ಓದಿದ್ದೀರಾ? ಮೈಸೂರು | ಕುಸಿಯುವ ಹಂತದಲ್ಲಿ ನೀರಿನ ಟ್ಯಾಂಕ್; ತೆರವುಗೊಳಿಸುವುದೇ ಪುರಸಭೆ

ಸಭೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಅರ್. ಡಿ. ಉಲ್ಲಾಸ್, ಹಿರಿಯ ಹೋರಾಟಗಾರ ಬ್ರಹ್ಮಾನಂದ, ಮಹದೇಪ್ಪ. ಮಾಡ್ರಹಳ್ಳಿ , ಹಾಲಹಳ್ಳಿ ಮಹೇಶ್, ನಾಗಣ್ಣ ವೀರನಪುರ, ಕರವೇ ರಾಜೇಂದ್ರ, ಅಬ್ದುಲ್ ಮಾಲಿಕ್, ವೃಷಬೇಂದ್ರ ಹಂಗಳ, ಗುಂಡ್ಲುಪೇಟೆ ಮಾಧು, ಶ್ರೀನಿವಾಸ್ ನಾಯಕ್, ಗೋವಿಂದ್ ನಾಯಕ್, ರಂಗಪ್ಪ ನಾಯಕ್, ಅಬ್ದುಲ್ ರಶೀದ್, ಮುನೀರ್ ಪಾಷ, ರಾಜೇಂದ್ರ ಮದ್ದೂರ್, ಮಾಧು ಮದ್ದೂರು ಕಾಲೂನಿ, ಬಾಲು ಗುಂಡ್ಲುಪೇಟೆ, ನಾಗಯ್ಯ ಹೂನ್ನೇಗೌಡನಹಳ್ಳಿ, ರಮೇಶ್ ಗುಂಡ್ಲುಪೇಟೆ, ಕೃಷ್ಣ ಹೊಸೂರು, ರಾಜೇಶ್ ಹಂಗಳ, ನಾಗಮಲ್ಲು ಭೀಮನ ಬೀಡು, ಶ್ರೀನಿವಾಸ್ ಎಂ ಪಾಳ್ಯ, ಶಿವು ವೀರನಪುರ, ಮಂಟೇಶ್ ವಡ್ಡಗೆರೆ, ನಾರಾಯಣ , ಸೇರಿದಂತೆ ಹಲವಾರು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...