ಚಾಮರಾಜನಗರ | ಏ. 24 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Date:

ಎರೆಡು ಬಾರಿ ಮುಂದೂಡಲಾಗಿದ್ದ ಸಚಿವ ಸಂಪುಟ ಸಭೆ ಇದೇ ಏ. 24 ರಂದು ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದೆ.

ಫೆ. 15 ಹಾಗೂ ಫೆ. 17 ರಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ,ಬೇರೆ ಬೇರೆ ಕಾರಣಗಳಿಂದ ಸಭೆ ನಡೆದಿರಲಿಲ್ಲ. ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮೊದಲ ಬಾರಿಗೆ ನಡೆಸಿ ಹಳೇ ಮೈಸೂರು ಪ್ರಾಂತ್ಯದ ಗಮನ ಸೆಳೆಯುವ ನಿಟ್ಟಿನಲ್ಲಿ ಆರಂಭದಿಂದಲೇ ಪ್ರಯತ್ನ ನಡೆದಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳ ಸಭೆ ನಡೆಸಿ ಸಚಿವ ಸಂಪುಟ ಸಭೆಗೆ ಅಗತ್ಯವಿರುವ ವ್ಯವಸ್ಥೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಆದರೆ ಆರೋಗ್ಯ, ನಿರಾವರಿ, ಮೂಲಭೂತ ಸೌಲಭ್ಯ ಒದಗಿಸಲು ನೆರವಾಗುತ್ತದೆ ಎಂಬ ನಿರೀಕ್ಷೆಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದರಲ್ಲೂ ಹೇಳಿ ಕೇಳಿ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿದೆ. ಜನಪ್ರತಿನಿಧಿಗಳು ಇಲ್ಲಿಗೆ ಬರಲು ಹಿಂದೇಟು ಹಾಕುವ ಸಂದರ್ಭವಿದ್ದಾಗ ಸಿದ್ದರಾಮಯ್ಯ ಅವರು ನಗರ ಪ್ರವೇಶ ಮಾಡಿ ಕಳಂಕ ತೊಡೆದು ಹಾಕಿದ್ದರು.

ಮತ್ತೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುವುದರಿಂದ ಜಿಲ್ಲೆಗೆ ಪೂರಕವಾದ ಅಭಿವೃದ್ಧಿ ವಿಚಾರದಲ್ಲಿ ಗಮನ ಸೆಳೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಜಿಲ್ಲೆಯ ಜನಪ್ರತಿನಿದಿಗಳು, ಅಧಿಕಾರಿಗಳು.

ಈ ಸುದ್ದಿ ಓದಿದ್ದೀರಾ? ಮೈಸೂರು | ಜಿಲ್ಲೆಯ ಇಂದೂಧರ ಹೊನ್ನಾಪುರ, ಹರಿಹರ ಆನಂದ ಸ್ವಾಮಿ ಸೇರಿದಂತೆ 15 ಮಂದಿ ಸಾಧಕರಿಗೆ ‘ ಅಂಬೇಡ್ಕರ್ ಪ್ರಶಸ್ತಿ ‘

ಈ ನಡುವೆ ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವು ಮಾಡಲು ಚಿಂತಿಸಿರುವ ಸರ್ಕಾರದ ಗಮನ ಸೆಳೆಯಲು ಪ್ರಸ್ತಾಪ ತಳ್ಳಿ ಹಾಕುವಂತೆ ಒತ್ತಡ ಹೇರಲು, ಜಿಲ್ಲೆಯ ಪರಿಸರವಾದಿಗಳು, ಸಾಮಾಜಿಕ ಹೋರಾಟಗಾರರು ಚಿಂತನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...