ಚಾಮರಾಜನಗರ | ಸಚಿವ ಸಂಪುಟ ಸಭೆ : ಮೈಸೂರು ಪ್ರಾದೇಶಿಕ ಆಯುಕ್ತರಿಂದ ಸಿದ್ದತಾ ಸಭೆ

Date:

ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳ ನಿರ್ವಹಣೆಗಾಗಿ ನೇಮಕ ಮಾಡಲಾಗಿರುವ ಅಧಿಕಾರಿಗಳನ್ನೊಳಗೊಂಡ ವಿವಿಧ ಸಮಿತಿಗಳ ಪೂರ್ವಭಾವಿ ಸಿದ್ದತಾ ಸಭೆಯನ್ನು ಮೈಸೂರು ಪ್ರಾದೇಶಿಕ ಆಯುಕ್ತರಾದ ಡಿ. ಎಸ್. ರಮೇಶ್ ನಡೆಸಿದರು.

” ಸಚಿವ ಸಂಪುಟ ಸಂಬಂಧ ಕಾರ್ಯ ನಿರ್ವಹಣೆಗಾಗಿ ರಚಿಸಲಾಗಿರುವ ಅಧಿಕಾರಿಗಳನ್ನು ಒಳಗೊಂಡ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿಗಳಿಂದ ಕೈಗೊಳ್ಳಲಾಗಿರುವ ಸಿದ್ದತೆಗಳ ಕುರಿತು ವಿವರ ಪಡೆದರು. ಸಚಿವ ಸಂಪುಟ ನಡೆಯುವ ಮಲೆ ಮಹದೇಶ್ವರ ಬೆಟ್ಟದ ದೀಪದಗಿರಿ ವಡ್ಡುವಿನಲ್ಲಿ ಎಲ್ಲ ಸಿದ್ದತಾ ಕಾರ್ಯಗಳನ್ನು ಖುದ್ದು ಪರಿಶೀಲಿಸಿ ಕೆಲಸಗಳು ತ್ವರಿತವಾಗಿ ಪೂರ್ಣಗೊಳಿಸಬೇಕು. ಆಯಾ ಸಮಿತಿಗಳು ನಿರ್ವಹಿಸಬೇಕಿರುವ ಕೆಲಸಗಳು ಹಾಗೂ ಪೂರ್ವ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು ” ಎಂದರು.

ಶಿಷ್ಟಾಚಾರ, ಸ್ವಾಗತ, ವಸತಿ, ಸಾರಿಗೆ ಸಂಪರ್ಕ, ಇನ್ನಿತರ ಎಲ್ಲ ಕಾರ್ಯಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕು. ಸ್ವಚ್ಚತೆಗೆ ವಿಶೇಷ ಗಮನ ನೀಡಬೇಕು. ಸಚಿವ ಸಂಪುಟ ಸಭೆ ನಡೆಯಲು ಜಿಲ್ಲೆಗೆ ಅವಕಾಶ ದೊರೆತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಶ್ರದ್ದೆ ಮುತುವರ್ಜಿಯಿಂದ ನಿಯೋಜಿಸಲಾಗಿರುವ ಕರ್ತವ್ಯವನ್ನು ಸಮರ್ಪಕವಾಗಿ ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ‘ ಈಗಾಗಲೇ ಸಮಿತಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಮಾರ್ಗದರ್ಶನ ಮಾಡಲಾಗಿದೆ. ಕಾರ್ಯನಿರ್ವಹಣೆ ಸಂಬಂಧ ವಿವರ ಪಡೆಯಲಾಗುತ್ತಿದೆ. ಸಿದ್ದತಾ ಕಾರ್ಯಗಳನ್ನು ಪರಿಶೀಲಿಸಲಾಗುತ್ತಿದೆ ‘ ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಧ ಯುವತಿ ನೆರವಿಗೆ ಧಾವಿಸಿದ ಜಿಲ್ಲಾಧಿಕಾರಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪ ವಿಭಾಗಾಧಿಕಾರಿ ಮಹೇಶ್, ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ದೀಪಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...