ಚಾಮರಾಜನಗರ | ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಣೆ : ಶಿಲ್ಪಾ ನಾಗ್

Date:

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಡೆದ ಜಿಲ್ಲಾಮಟ್ಟದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸುವಂತೆ ಮನವಿ ಮಾಡಿದರು.

ಜಿಲ್ಲೆಯಲ್ಲಿ ಇದೇ ಜೂನ್. 7 ರಂದು ಬಕ್ರೀದ್ ಹಬ್ಬ ನಡೆಯಲಿದ್ದು ಹಿಂದಿನಂತೆಯೇ ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು. ಜಿಲ್ಲೆಯಲ್ಲಿ ಹಿಂದಿನಿಂದಲೂ ಸಾಮರಸ್ಯದಿಂದ ಎಲ್ಲ ಹಬ್ಬಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಶಾಂತಿ ಸಹಬಾಳ್ವೆಯಿಂದ ಜಿಲ್ಲೆಯ ಜನರು ಬದುಕುತ್ತಿದ್ದಾರೆ. ಈ ಬಾರಿಯೂ ಸಹ ಈ ಹಿಂದೆ ನಡೆದುಕೊಂಡ ಬಂದ ಮಾದರಿಯಲ್ಲಿಯೇ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬದ ಆಚರಣೆಯಾಗಲಿ. ಇದಕ್ಕಾಗಿ ಸರ್ವರು ಸಹಕರಿಸಲಿದ್ದಾರೆ ಎಂದರು.

ಹಬ್ಬದ ಸಂದರ್ಭದಲ್ಲಿ ಕುಡಿಯುವ ನೀರು, ಸ್ವಚ್ಚತೆ, ತ್ಯಾಜ್ಯಗಳ ನಿರ್ವಹಣೆ, ನಿರಂತರ ವಿದ್ಯುತ್, ಇನ್ನಿತರ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಒಳ್ಳೆಯ ವಾತಾವರಣದಲ್ಲಿ ಹಬ್ಬ ಆಚರಣೆಯಾಗಲಿ. ಸಂತೋಷ ಸಂಭ್ರಮದಿಂದ ಹಬ್ಬ ನಡೆಯಲಿ. ಎಲ್ಲ ಮುಖಂಡರು ಎಲ್ಲ ಸಂದರ್ಭಗಳಲ್ಲಿಯೂ ಪರಸ್ಪರ ಪ್ರೀತಿ ವಿಶ್ವಾಸದಿಂದ ನಡೆದುಕೊಂಡು ಬಂದಿದ್ದಾರೆ. ಇದು ಹೀಗೆಯೇ ಮುಂದುವರೆಯಲೆಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಬ್ಬದ ಸಂದರ್ಭದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಒದಗಿಸಿ. ಸ್ವಚ್ಚತೆಗೆ ವಿಶೇಷ ಗಮನಹರಿಸಿ. ತ್ಯಾಜ್ಯ ವಿಲೇವಾರಿ ಸಕಾಲದಲ್ಲಿ ಪೂರ್ಣವಾಗಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಹಬ್ಬದ ವೇಳೆ ಒದಗಿಸಬೇಕಿರುವ ಸೌಲಭ್ಯಗಳು ಹಾಗೂ ಸೇವೆಗೆ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ ಮಾತನಾಡಿ ‘ ಜಿಲ್ಲೆಯಲ್ಲಿ ಎಲ್ಲರು ಸಹೋದರರಂತೆ ಇದ್ದಾರೆ. ಶಾಂತಿಯುತವಾಗಿ ಹಬ್ಬವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಇದೇ ಮಾದರಿಯಲ್ಲಿ ಈ ಬಾರಿಯೂ ಬಕ್ರೀದ್ ಹಬ್ಬ ಸಾಂಗವಾಗಿ ನಡೆಯಲಿ. ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಬಂದೋ ಬಸ್ತ್ ಮುನ್ನೆಚ್ಚರಿಕೆ ವಹಿಸಲಾಗಿದೆ ‘ ಎಂದರು.

ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಮಾತನಾಡಿ ‘ ಜಿಲ್ಲೆಯಲ್ಲಿ ಅಣ್ಣ ತಮ್ಮಂದಿರಂತೆ ಪರಸ್ಪರ ಎಲ್ಲರು ಇದ್ದೇವೆ. ಬಕ್ರೀದ್ ಹಬ್ಬವನ್ನು ಸಾಮರಸ್ಯದಿಂದ ಆಚರಿಸಲಾಗುತ್ತಿದೆ. ಎಲ್ಲರು ಸಹಕರಿಸುತ್ತಿದ್ದಾರೆ. ಹಬ್ಬದ ವೇಳೆ ಸ್ವಚ್ಚತೆ, ಕುಡಿಯುವ ನೀರು ಮತ್ತಿತ್ತರ ಸೌಲಭ್ಯಗಳು ಸಮರ್ಪಕವಾಗಿ ಒದಗಿಸಬೇಕು ‘ ಎಂದು ತಿಳಿಸಿದರು.

ಸಭೆಯಲ್ಲಿ ವಿವಿಧ ಕೋಮಿನ ಮುಖಂಡರು ಮಾತನಾಡಿ ಹಬ್ಬದ ಸಂದರ್ಭದಲ್ಲಿ ಈ ಹಿಂದೆಯೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಸೌಹಾರ್ದತೆಯಿಂದ ಹಬ್ಬ ಆಚರಣೆಗೆ ಪರಸ್ಪರ ಸಹಕಾರ ನೀಡಲಾಗುತ್ತಿದೆ. ಈ ಉತ್ತಮ ಬಾಂಧವ್ಯ ನಡೆ ಮುಂದುವರೆಯಲಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು ಮರೆಯುವುದೇ ಪ್ರಜಾಪ್ರಭುತ್ವಕ್ಕೆ ಅಪಾಯ : ಅಹಿಂದ ಜವರಪ್ಪ

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಡಿವೈಎಸ್‍ಪಿ ಲಕ್ಷ್ಮಯ್ಯ, ಧಮೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ದೀಪ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಸುಧಾ, ಪಶುಪಾಲನಾ ಇಲಾಖೆಯ ಉಪನಿರ್ದೆಶಕ ಹನುಮೇಗೌಡ, ಮುಖಂಡರಾದ ಮಹಮ್ಮದ್ ಜಿಯಾವುಲ್ಲಾ, ನಗರಸಭಾ ಸದ್ಯರಾದ ಅಬ್ರಾರ್ ಅಹಮದ್, ಸುರೇಶ್ ವಾಜಪೇಯಿ, ಶಿವಣ್ಣ, ಮಹಮ್ಮದ್ ಜಸೀಂ ಪಾಷ, ತಹಶೀಲ್ದಾರ್ ಗಿರಿಜಾ, ಬಸವರಾಜು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮುಖ್ಯಾಧಿಕಾರಿಗಳು, ಇತರೆ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇನ್ನಿತರ ಮುಖಂಡರು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...