ಚಾಮರಾಜನಗರ | ಗ್ರಾಮಾಡಳಿತ ಅಧಿಕಾರಿ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Date:

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಗ್ರಾಮಾಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಗ್ರಾಮಾಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗಾಗಿ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿಕೊಟ್ಟು ಪರಿಶೀಲಿಸಿದರು.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಪಾರದರ್ಶಕವಾಗಿ ಹಾಗೂ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಕೈಗೊಳ್ಳಲಾಗಿದ್ದ ವ್ಯವಸ್ಥೆಗಳನ್ನು ಜಿಲ್ಲಾಧಿಕಾರಿ ಖುದ್ದಾಗಿ ವೀಕ್ಷಿಸಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳನ್ವಯ ಮತ್ತು ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರೀಕ್ಷಾ ಕೇಂದ್ರಗಳಲ್ಲಿರುವ ಪರೀಕ್ಷಾ ಕೊಠಡಿಗಳಿಗೆ ಭೇಟಿ ನೀಡಿ, ಪರೀಕ್ಷಾ ಕೇಂದ್ರಗಳಲ್ಲಿ ನಿರ್ವಹಿಸುತ್ತಿರುವ ಕಾರ್ಯಗಳು, ಕಲ್ಪಿಸಲಾಗಿರುವ ವ್ಯವಸ್ಥೆಗಳ ಕುರಿತು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪರೀಕ್ಷಾ ಕೇಂದ್ರದ ನಿಯೋಜಿತ ಮುಖ್ಯಸ್ಥರಿಂದ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್

ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 8,771 ಮಂದಿ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 1,411 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 7,360 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಚಾಮರಾಜನಗರ ತಾಲೂಕಿನಲ್ಲಿ 10 ಪರೀಕ್ಷಾ ಕೇಂದ್ರಗಳಿದ್ದು, 2,880 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 445 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 2,435 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ಗುಂಡ್ಲುಪೇಟೆಯಲ್ಲಿ 4 ಪರೀಕ್ಷಾ ಕೇಂದ್ರಗಳಿದ್ದು, 1,619 ಮಂದಿ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 262 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 1,357 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ; ಸಚಿವ ಶರಣಪ್ರಕಾಶ್ ಪಾಟೀಲ್

ಯಳಂದೂರು ತಾಲೂಕಿನಲ್ಲಿ 2 ಪರೀಕ್ಷಾ ಕೇಂದ್ರಗಳಿದ್ದು, 438 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 62 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 376 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಕೊಳ್ಳೇಗಾಲ ತಾಲೂಕಿನಲ್ಲಿ 9 ಪರೀಕ್ಷಾ ಕೇಂದ್ರಗಳಿದ್ದು, 2,856 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 465 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 2,391 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಹನೂರು ತಾಲೂಕಿನಲ್ಲಿ 3 ಪರೀಕ್ಷಾ ಕೇಂದ್ರಗಳಿದ್ದು, 978 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 177 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 801 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಸಂಪೂರ್ಣ ಮಾಹಿತಿ ಒದಗಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...