ಚಾಮರಾಜನಗರ | ಅಂಧ ಯುವತಿ ನೆರವಿಗೆ ಧಾವಿಸಿದ ಜಿಲ್ಲಾಧಿಕಾರಿ

Date:

ಚಾಮರಾಜನಗರ ನಗರ ಜಿಲ್ಲೆ, ಕಸಬಾ ವ್ಯಾಪ್ತಿಯ ತಮ್ಮಡಹಳ್ಳಿ ಅಂಧ ಯುವತಿ ಭಾಗ್ಯ ಅವರಿಗೆ ಬಹು ವರ್ಷಗಳಿಂದ ಆಧಾರ್ ಪಡೆಯಲು ತೊಡಕಾಗಿದ್ದ ಸಮಸ್ಯೆಯನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪರಿಹರಿಸಿದ್ದಾರೆ.

ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿಯ ಭಾಗ್ಯ ಎಂಬುವವರು ಅಂಧರಾಗಿದ್ದು ಆಧಾರ್ ಕಾರ್ಡ್ ಪಡೆಯುವ ಸಲುವಾಗಿ ನಡೆಸುವ ಕಣ್ಣಿನ ಪೂರ್ವ ತಪಾಸಣೆ ಸಂದರ್ಭದಲ್ಲಿ ಕಣ್ಣಿನ ತೊಂದರೆಯಿಂದ ಏರಿಳಿತವಾಗುತ್ತಿದ್ದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿರಲಿಲ್ಲ.

ಕಳೆದ 2024ರ ಡಿಸೆಂಬರ್ 19ರಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅದ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ವಿಕಲಚೇತನರ ಕುಂದು ಕೊರತೆ ಸಭೆಯಲ್ಲಿ ಭಾಗ್ಯ ಅವರು ಆಧಾರ್ ನೊಂದಣಿಯಾಗದಿರುವ ಸಮಸ್ಯೆ ನಿವೇದಿಸಿಕೊಂಡಿದ್ದರು. ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಭಾಗ್ಯ ಅವರಿಗೆ ಆಧಾರ್ ನೊಂದಣಿಗೆ ವಿಶೇಷ ಕ್ರಮ ವಹಿಸಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಆಧಾರ್ ನೊಂದಣೀಗೆ ಇದ್ದ ತೊಂದರೆಗಳನ್ನು ವಿವರವಾಗಿ ಪಟ್ಟಿ ಮಾಡಿ ಇ-ಆಡಳಿತ ಕೇಂದ್ರಕ್ಕೆ ಕಳುಹಿಸಿ ಆಧಾರ್ ಕಾರ್ಡ್ ಪಡೆಯಲು ಪತ್ರ ಕಳುಹಿಸಲಾಗಿತ್ತು. ಅದರಂತೆ, ತೀವ್ರತರವಾದ ವಿಕಲಚೇತನರಿಗೆ ಯು.ಡಿ.ಐ.ಡಿ ಕಾರ್ಡ್ ಮಾಡಿಸುವಂತೆಯೂ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಜಿಲ್ಲಾಮಟ್ಟದ ಆಧಾರ್ ಕೇಂದ್ರ ಅಧಿಕಾರಿಗಳು ಸತತವಾಗಿ ಪ್ರಯತ್ನಿಸಿ ಭಾಗ್ಯ ಅವರಿಗೆ ಆಧಾರ್ ನೊಂದಣಿಗೆ ಇದ್ದ ತೊಡಕುಗಳನ್ನು ಪರಿಹರಿಸಿದ್ದಾರೆ. ಕೊನೆಗೂ ಜಿಲ್ಲಾಧಿಕಾರಿಯವರ ವಿಶೇಷ ಕಾಳಜಿಯಿಂದ ಭಾಗ್ಯ ಅವರಿಗೆ ಆಧಾರ್ ನೊಂದಣಿಯಾಗಿ ಕಾರ್ಡು ದೊರೆತಿದೆ.

ಈ ಸುದ್ದಿ ಓದಿದ್ದೀರಾ? ಯುಗಧರ್ಮ | ಗುಲ್ಫಿಶಾ ಕೇಳುತ್ತಾಳೆ – ಇದು ನ್ಯಾಯವೇ?

ಭಾಗ್ಯ ಅವರು ಮಾತನಾಡಿ ” ಆಧಾರ್ ಕಾರ್ಡ್ ಇರದೆ ಸರ್ಕಾರದ ಸವಲತ್ತು ಪಡೆಯಲು, ಪಡೆಯುವಾಗ ನಿರಂತರವಾಗಿ ಸಾಕಷ್ಟು ತೊಂದರೆಯಾಗಿದ್ದು, ಬ್ಯಾಂಕ್ ಯಾವುದೇ ಆಗಲಿ ಎಲ್ಲದಕ್ಕೂ ಆಧಾರ್ ಲಿಂಕ್ ಮಾಡಲಾಗದೆ ಸಂಕಷ್ಟ ಅನುಭವಿಸಿದ್ದರು. ಪದವಿ ಪೂರ್ಣಗೊಳಿಸಿರುವ ನನಗೆ ಆಧಾರ್ ಇಲ್ಲದೆ ಇದ್ದುದ್ದರಿಂದ ಮುಂದಿನ ಭವಿಷ್ಯಕ್ಕೆ ತೊಂದರೆಯಾಗುತ್ತಿತ್ತು. ಜಿಲ್ಲಾಧಿಕಾರಿಗಳ ವಿಶೇಷ ಆಸಕ್ತಿಯಿಂದ ಆಧಾರ್ ಕಾರ್ಡ್ ಬಂದಿದೆ. ಇದಕ್ಕಾಗಿ ಜಿಲ್ಲಾಧಿಕಾರಿಯವರಿಗೆ ತುಂಬು ಹೃದಯದಿಂದ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆ. ಬಹು ವರ್ಷಗಳ ಸಮಸ್ಯೆ ಪರಿಹಾರವಾಗಿದ್ದು ಮುಂದಿನ ಬದುಕಿಗೆ ಉತ್ಸಾಹ ದೊರೆತಿದೆ ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...