ಏ. 14 ರಂದು ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ನಿಮಿತ್ತ ಚಾಮರಾಜನಗರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.
ಉಲ್ಲೇಖಿತ ಪತ್ರದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದಿನಾಂಕ-11-04-2025 ರಂದು ನಡೆಸಿದ ಸಭೆಯ ಅನುಸಾರ, ಚಾಮರಾಜನಗರ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಮಾಡುವ ಹಿನ್ನಲೆಯಲ್ಲಿ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುಂಜಾಗ್ರತಾ ಕ್ರಮ ವಹಿಸಿ ಜಿಲ್ಲಾಯಾದ್ಯಂತ ದಿನಾಂಕ- 13-04-2025 ರ ಮಧ್ಯರಾತ್ರಿ 12-00 ಗಂಟೆಯಿಂದ ದಿನಾಂಕ- 14-04-2025ರ ಮಧ್ಯರಾತ್ರಿ 12-00 ಗಂಟೆವರೆಗೆ ಮದ್ಯ ಮಾರಾಟ ನಿಷೇದಿಸಲಾಗಿದೆ.
ಆದೇಶ ಸಂಖ್ಯೆ ಇಎಕ್ಸ್ಇ/ಸಿಹೆಚ್ಎನ್/ಮಮಾನಿ/01/2025-26, ದಿನಾಂಕ: 14 /04/2025.
ಈ ಸುದ್ದಿ ಓದಿದ್ದೀರಾ? ಮೈಸೂರು | ‘ ಬೋಧಿವರ್ಧನ ‘ಪ್ರಶಸ್ತಿಗೆ ಭಾಜನರಾದ ದಸಂಸ ಹಿರಿಯ ಮುಖಂಡ ಬೆಟ್ಟಯ್ಯಕೋಟೆ
ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ದಿನಾಂಕ- 14-04-2025 ರಂದು ಚಾಮರಾಜನಗರ ಜಿಲ್ಲಾಯಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ನಡೆಯುವುದರಿಂದ ಮದ್ಯ ಮಾರಾಟವನ್ನು ನಿಷೇಧಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಿ.ಟಿ, ಹಾಗ ಕರ್ನಾಟಕ ಅಬಕಾರಿ ಕಾಯಿದೆ 1965 ರ ಕಲಂ 21(1) ರಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಚಾಮರಾಜನಗರ ಜಿಲ್ಲಾಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಮುಚ್ಚಿಸಿ, ಯಾವುದೇ ರೀತಿಯ ಮದ್ಯ ಮಾರಾಟ, ಅಕ್ರಮ ಸಾಗಾಣಿಕೆ, ಅಕ್ರಮ ದಾಸ್ತಾನು ಮಾಡದಂತೆ ನಿಷೇಧಿಸಿ ಆದೇಶಿಸಿದ್ದಾರೆ.





