ಚಾಮರಾಜನಗರ | ಡಾ ಬಿ ಆರ್ ಅಂಬೇಡ್ಕರ್,ಡಾ ಬಾಬು ಜಗಜೀವನ್ ರಾಮ್ ಜಯಂತಿ ಅದ್ದೂರಿ ಆಚರಣೆಗೆ ತೀರ್ಮಾನ

Date:

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಏಪ್ರಿಲ್ 5 ರಂದು ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನ್ ರಾಮ್ ಹಾಗೂ ಏಪ್ರಿಲ್ 14 ರಂದು ಸಂವಿದಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಹಮ್ಮಿಕೊಳ್ಳಲು ತಿರ್ಮಾನಿಸಲಾಯಿತು.

ಸಂಘಟಣೆಗಳ ಮುಖಂಡರು ಮಾತನಾಡಿ ” ಸಾಕಷ್ಟು ಮುಂಚಿತವಾಗಿಯೇ ಇಬ್ಬರು ಮಹಾನೀಯರ ಜಯಂತಿ ಆಚರಣೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಕೈಗೊಳ್ಳಬೇಕು ಕರಪತ್ರ, ಆಹ್ವಾನ ಪತ್ರಿಕೆಗಳನ್ನು ಮೊದಲೇ ಮುದ್ರಿಸಿ ತಲುಪಿಸಬೇಕು, ವಿಚಾರ ಸಂಕಿರಣ, ಕಾರ್ಯಕ್ರಮದಂದು ಮುಖ್ಯ ಭಾಷಣಕ್ಕಾಗಿ ಮಹನೀಯರ ವಿಚಾರಧಾರೆಗಳನ್ನು ಆಳವಾಗಿ ಅಧ್ಯಯನ ಮಾಡಿರುವವರನ್ನು ಆಹ್ವಾನಿಸಬೇಕು.

ಡಾ ಬಿ ಆರ್ ಅಂಬೇಡ್ಕರ್, ಡಾ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರದ ಮೆರವಣಿಗೆಯು ಅದ್ದೂರಿಯಾಗಿ ನಡೆಯಬೇಕು. ಹೆಚ್ಚು ಕಲಾ ತಂಡಗಳನ್ನು ನಿಯೋಜಿಸಬೇಕು. ಎಲ್ಲಾ ತಾಲ್ಲೂಕುಗಳಲ್ಲಿಯೂ ಕಾರ್ಯಕ್ರಮ ವ್ಯವಸ್ಥಿತವಾಗಿ ಏರ್ಪಾಡಾಗಬೇಕು. ಕಾರ್ಯಕ್ರಮ ಹೆಚ್ಚು ಅರ್ಥಪೂರ್ಣವಾಗಿ ನಡೆಯಲು ನಿಯೋಜಿತವಾಗಲಿರುವ ಸಮಿತಿಗಳು ಎಲ್ಲಾ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು ” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ” ಮಹನೀಯರ ಜಯಂತಿಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲು ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗುವುದು. ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಅದ್ದೂರಿ ವೇದಿಕೆ ನಿರ್ಮಿಸಿ ಕಾರ್ಯಕ್ರಮ ನಡೆಸಲಾಗುವುದು. ಮೆರವಣಿಗೆಗೆ ಮೆರಗು ತರಲು ಹೆಚ್ಚಿನ ಕಲಾ ತಂಡಗಳನ್ನು ನಿಯೋಜನೆ ಮಾಡಲಾಗುವುದು.ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮುತುವರ್ಜಿಯಿಂದ ಕಾರ್ಯಕ್ರಮ ಯಶಸ್ವಿಗೆ ಕ್ರಮ ವಹಿಸಲು ತಿಳಿಸಲಾಗಿದೆ.

ವಿಚಾರ ಸಂಕಿರಣ ಮತ್ತು ಜಯಂತಿ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರನ್ನು ಆಹ್ವಾನಿಸಬೇಕಿದೆ. ಇದಕ್ಕಾಗಿ ವಿಶೇಷ ಸಮಿತಿಯೊಂದನ್ನು ರಚಿಸಿ ಎಲ್ಲರ ಸಲಹೆ ಒಮ್ಮತದ ತೀರ್ಮಾನದಂತೆ ಭಾಷಣಕಾರರು, ವಿಷಯ ತಜ್ಞರನ್ನು ಆಯ್ಕೆ ಮಾಡಲಾಗುವುದು. ಕಾರ್ಯಕ್ರಮ ಸುವ್ಯವಸ್ಥಿತವಾಗಿ ನಡೆಸಲು ಸಮಿತಿಗಳು ಜವಬ್ದಾರಿ ವಹಿಸಲಿವೆ. ಪೂರ್ವಭಾವಿ ಸಭೆಗಳನ್ನು ಸಮಿತಿ ಸದಸ್ಯರು ಕೈಗೊಂಡು ಎಲ್ಲಾ ಸಿದ್ದತೆಗಳನ್ನು ಮಾಡಲಿದ್ದಾರೆ. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಇಬ್ಬರು ಮಹನೀಯರ ಜಯಂತಿ ಕಾರ್ಯಕ್ರಮ ಏರ್ಪಾಡು ಮಾಡಲಾಗುವುದು, ಎಲ್ಲಾ ಅಧಿಕಾರಿ ಸಿಬ್ಬಂದಿಗೆ ಕಾರ್ಯಕ್ರಮದಂದು ಹಾಜರಿರಲು ಸೂಚಿಸಲಾಗುವುದು. ತಾಲ್ಲೂಕು ಮಟ್ಟದಲ್ಲಿಯೂ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮುಂಗಾರಿನ ಮೊದಲ ಉಳುಮೆ ‘ ಹೊನ್ನಾರು ‘

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮುನಿರಾಜು, ಮುಖಂಡರಾದ ಸಿ ಎಂ ಕೃಷ್ಣಮೂರ್ತಿ, ಕೆ ಎಂ ನಾಗರಾಜು, ಶಿವಮೂರ್ತಿ, ನಾಗರಾಜು, ನಾಗಯ್ಯ, ಯರಿಯೂರು ರಾಜಣ್ಣ, ಚಾ ಗು ನಾಗರಾಜು, ಜವರಯ್ಯ, ರಾಮಸಮುದ್ರ ಸುರೇಶ್, ಸಿ ಎಂ ಶಿವಣ್ಣ, ಪಿ ಸಂಘಸೇನ, ಬಸವನಪುರ ರಾಜಶೇಖರ್, ಬ್ಯಾಡಮೂಡ್ಲು ಬಸವಣ್ಣ, ನಾರಾಯಣ್, ಕಂದಹಳ್ಳಿ ನಾರಾಯಣ, ನಾಗೇಶ್, ಆರೂರು ನಾಗೇಂದ್ರ, ಶಿವಕುಮಾರ್, ಮುರುಗೇಶ್, ಪರಶಿವಮೂರ್ತಿ, ಸಿದ್ದಪ್ಪಾಜಿ, ಡಿ ಸ್ವಾಮಿ, ಸಿ ಎಂ ನರಸಿಂಹಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...